ಜಿಲ್ಲೆಗಳು

ಮುಖ್ಯ ಕವಿಗೋಷ್ಠಿಯ ಪಟ್ಟಿಯಲ್ಲಿ ಮೃತಪಟ್ಟ ಕವಿ!

ಆಹ್ವಾನ ಪತ್ರಿಕೆಯಲ್ಲಿ ತಿದ್ದುಪಡಿ, ಕೆಲ ಕವಿಗಳ ಆಯ್ಕೆಗೆ ಅಕ್ಷೇಪ

ಮೈಸೂರು : ಕೆಲ ದಿನಗಳ ಹಿಂದೆ ನಾಡಿನ ನಾನಾ ಟ್ರಸ್ಟ್ ಗಳಿಗೆ ನೇಮಕ ಮಾಡುವಾಗ ಕಳೆದ ವರ್ಷವೇ ಮೃತಪಟ್ಟಿದ್ದ ರಾಜೇಶ್ವರಿ ತೇಜಸ್ವಿ ಅವರನ್ನು ನೇಮಿಸಿ ಎಡವಟ್ಟು ಮಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಈ ಬಾರಿ ದಸರಾ ಮುಖ್ಯ ಕವಿ ಗೋಷ್ಠಿಗೆ ಮೃತಪಟ್ಟ ಕವಿ ಹೆಸರು ಸೇರಿಸಿ ಮತ್ತೊಂದು ಮಹಾ ಎಡವಟ್ಟು ಮಾಡಿದೆ.

ಮೂರು ವರ್ಷಗಳ ಹಿಂದೆಯೇ ಮೃತಪಟ್ಟಿರುವ ಹಿರಿಯ ಕವಿ, ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕರಾಗಿದ್ದ ಜಿಕೆ ರವೀಂದ್ರ ಕುಮಾರ್ ಅವರ ಹೆಸರನ್ನು ಸೇರಿಸಲಾಗಿದೆ. ಇದು ಆಹ್ವಾನ ಪತ್ರಿಕೆಯಲ್ಲಿ ಮುದ್ರಣವಾಗಿ ವೈರಲ್ ಆಗಿದೆ, ಇದು ತಿಳಿತಿದ್ದಂತೆ ದಸರಾ ಕವಿಗೋಷ್ಠಿ ಉಪಸಮಿತಿ ಅವರ ಹೆಸರು ಬದಲಿಸಿ ಹೊಸ ಆಹ್ವಾನ ಪತ್ರಿಕೆ ರವಾನಿಸಿದೆ. ಈ ಕುರಿತು ಸಮಿತಿ ಕಾರ್ಯಾಧ್ಯಕ್ಷ ಪ್ರೊಫೆಸರ್ ಎಂಜಿ ಮಂಜುನಾಥ್ ಅವರನ್ನು ವಿಚಾರಿಸಿದರೆ ಅದು ಅಧಿಕೃತ ಆಹ್ವಾನ ಪತ್ರಿಕೆಯಲ್ಲ. ಮೊದಲು ಹೆಸರಿತ್ತು ಅದನ್ನು ತೆಗೆಸಿ ಹೊಸದನ್ನು ನೀಡಲಾಗಿದೆ ಎನ್ನುವ ಉತ್ತರ ನೀಡುತ್ತಾರೆ. ಆದರೆ ರವೀಂದ್ರ ಕುಮಾರ್ ಹೆಸರನ್ನು ನೀಡಿದವರು ಯಾರು ಎಂದು ಕೇಳಿದರೆ ಸಮರ್ಪಕ ಉತ್ತರ ಅವರಿಂದ ಬರಲಿಲ್ಲ.

ಈ ನಡುವೆ ಮುಖ್ಯ ಕವಿಗೋಷ್ಠಿಗೆ ಕೆಲವರನ್ನು ಆಯ್ಕೆ ಮಾಡುವುದು ಚರ್ಚೆಗೆ ಕಾರಣವಾಗಿದೆ. ಕೆಲ ದಿನಗಳ ಹಿಂದೆ ಎಷ್ಟೇ ಅಕಾಡೆಮಿ ಸದಸ್ಯ ಸ್ಥಾನದಿಂದ ಬದಲಾಯಿಸಿದವರನ್ನು ಕವಿಗೋಷ್ಠಿಗೆ ಹಾಕಲಾಗಿದೆ ಕೆಲವರ ಹೆಸರನ್ನು ತಪ್ಪಾಗಿ ಮುದ್ರಿಸಲಾಗಿದೆ.

2007 ರಲ್ಲೂ ಕವಿಗೋಷ್ಠಿಗೆ ಆಯ್ಕೆ ಮಾಡುವಾಗ ಹೀಗೆಯೇ ಎಡವಟ್ಟು ಮಾಡಿ ಇಡೀ ಕವಿಗೋಷ್ಠಿ ತನ್ನ ಮಹತ್ವವನ್ನೇ ಕಳೆದುಕೊಂಡಿತ್ತು. ಅನಂತರ ಎಚಿತ ಸರ್ಕಾರ ಕವಿಗೋಷ್ಠಿ ಉಪ ಸಮಿತಿಗೆ ಅರ್ಹರು ಹಾಗೂ ಅನುಭವಿಗಳನ್ನು ನೇಮಿಸಿ ಸರಿಪಡಿಸಿತ್ತು. ಮತ್ತೆ ಈ ಬಾರಿ ಕವಿಗಳ ಆಯ್ಕೆಯಲ್ಲಿ ಆಗಿರುವ ಎಡವಟ್ಟು ಕವಿಗೋಷ್ಠಿ ಮತ್ತೆ ಹಳೆ ಹಾದಿ ಹಿಡಿಯಲಿದೆಯೇ ಎನ್ನುವ ಚರ್ಚೆ ಹುಟ್ಟು ಹಾಕಿದೆ.

ಇಷ್ಟಲ್ಲದೆ ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಅವರನ್ನು ಕವಿಗೋಷ್ಠಿ ಸಮಿತಿಯವರು ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ವರ್ಗಾಯಿಸಿದ್ದಾರೆ. ಏಕೆಂದರೆ ಆಹ್ವಾನ ಪತ್ರಿಕೆಯಲ್ಲಿ ಪ್ರತಾಪ್ ಸಿಂಹ, ಚಾಮರಾಜನಗರ ಲೋಕಸಭಾ ಸದಸ್ಯ ಎಂದಿರುವುದು ಇಂತಹ ಅನುಮಾನ ಹುಟ್ಟು ಹಾಕುವಂತೆ ಮಾಡಿದೆ.

andolanait

Recent Posts

ವೈಯಕ್ತಿಕ ದ್ವೇಷ: ಕಾರ್ಮಿಕನನ್ನು ಕೊಲೆಗೈಯ್ದು ಶರಣಾದ ಆರೋಪಿ

ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…

10 hours ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೇ ಈಗ ರಾಜ್ಯಸಭೆ ಅಭ್ಯರ್ಥಿ

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರು ಬಿಹಾರದಿಂದ…

10 hours ago

ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗೆ ವಿಡಿಯೋ ಕಾಲ್‌ ಮಾಡಿ ಧೈರ್ಯ ಹೇಳಿದ ವಿಜಯೇಂದ್ರ

ಬೆಂಗಳೂರು: ಅಮೇರಿಕಾ, ಇಸ್ರೇಲ್‌-ಇರಾನ್‌ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…

10 hours ago

ಬೂದಬಾಳು ಗ್ರಾಮದ ಕೆರೆಗೆ ಬಾಗಿನ ಸಮರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…

11 hours ago

ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪ್ರತಿಯೊಬ್ಬ ರೈತರಿಗೂ ದೊರಕಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…

11 hours ago

ಹಾರ್ಮುಜ್‌ ಜನಸಂಧಿಯನ್ನು ಮುಚ್ಚಿದ ಇರಾನ್: ತೈಲ ಬೆಲೆಯಲ್ಲಿ ಭಾರೀ ಏರಿಕೆ

ಟೆಹರಾನ್:‌ ಅಮೇರಿಕಾ ಹಾಗೂ ಇಸ್ರೇಲ್‌ ದೇಶಗಳು ಇರಾನ್‌ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…

11 hours ago