ಜಿಲ್ಲೆಗಳು

ಮುಖ್ಯ ಕವಿಗೋಷ್ಠಿಯ ಪಟ್ಟಿಯಲ್ಲಿ ಮೃತಪಟ್ಟ ಕವಿ!

ಆಹ್ವಾನ ಪತ್ರಿಕೆಯಲ್ಲಿ ತಿದ್ದುಪಡಿ, ಕೆಲ ಕವಿಗಳ ಆಯ್ಕೆಗೆ ಅಕ್ಷೇಪ

ಮೈಸೂರು : ಕೆಲ ದಿನಗಳ ಹಿಂದೆ ನಾಡಿನ ನಾನಾ ಟ್ರಸ್ಟ್ ಗಳಿಗೆ ನೇಮಕ ಮಾಡುವಾಗ ಕಳೆದ ವರ್ಷವೇ ಮೃತಪಟ್ಟಿದ್ದ ರಾಜೇಶ್ವರಿ ತೇಜಸ್ವಿ ಅವರನ್ನು ನೇಮಿಸಿ ಎಡವಟ್ಟು ಮಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಈ ಬಾರಿ ದಸರಾ ಮುಖ್ಯ ಕವಿ ಗೋಷ್ಠಿಗೆ ಮೃತಪಟ್ಟ ಕವಿ ಹೆಸರು ಸೇರಿಸಿ ಮತ್ತೊಂದು ಮಹಾ ಎಡವಟ್ಟು ಮಾಡಿದೆ.

ಮೂರು ವರ್ಷಗಳ ಹಿಂದೆಯೇ ಮೃತಪಟ್ಟಿರುವ ಹಿರಿಯ ಕವಿ, ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕರಾಗಿದ್ದ ಜಿಕೆ ರವೀಂದ್ರ ಕುಮಾರ್ ಅವರ ಹೆಸರನ್ನು ಸೇರಿಸಲಾಗಿದೆ. ಇದು ಆಹ್ವಾನ ಪತ್ರಿಕೆಯಲ್ಲಿ ಮುದ್ರಣವಾಗಿ ವೈರಲ್ ಆಗಿದೆ, ಇದು ತಿಳಿತಿದ್ದಂತೆ ದಸರಾ ಕವಿಗೋಷ್ಠಿ ಉಪಸಮಿತಿ ಅವರ ಹೆಸರು ಬದಲಿಸಿ ಹೊಸ ಆಹ್ವಾನ ಪತ್ರಿಕೆ ರವಾನಿಸಿದೆ. ಈ ಕುರಿತು ಸಮಿತಿ ಕಾರ್ಯಾಧ್ಯಕ್ಷ ಪ್ರೊಫೆಸರ್ ಎಂಜಿ ಮಂಜುನಾಥ್ ಅವರನ್ನು ವಿಚಾರಿಸಿದರೆ ಅದು ಅಧಿಕೃತ ಆಹ್ವಾನ ಪತ್ರಿಕೆಯಲ್ಲ. ಮೊದಲು ಹೆಸರಿತ್ತು ಅದನ್ನು ತೆಗೆಸಿ ಹೊಸದನ್ನು ನೀಡಲಾಗಿದೆ ಎನ್ನುವ ಉತ್ತರ ನೀಡುತ್ತಾರೆ. ಆದರೆ ರವೀಂದ್ರ ಕುಮಾರ್ ಹೆಸರನ್ನು ನೀಡಿದವರು ಯಾರು ಎಂದು ಕೇಳಿದರೆ ಸಮರ್ಪಕ ಉತ್ತರ ಅವರಿಂದ ಬರಲಿಲ್ಲ.

ಈ ನಡುವೆ ಮುಖ್ಯ ಕವಿಗೋಷ್ಠಿಗೆ ಕೆಲವರನ್ನು ಆಯ್ಕೆ ಮಾಡುವುದು ಚರ್ಚೆಗೆ ಕಾರಣವಾಗಿದೆ. ಕೆಲ ದಿನಗಳ ಹಿಂದೆ ಎಷ್ಟೇ ಅಕಾಡೆಮಿ ಸದಸ್ಯ ಸ್ಥಾನದಿಂದ ಬದಲಾಯಿಸಿದವರನ್ನು ಕವಿಗೋಷ್ಠಿಗೆ ಹಾಕಲಾಗಿದೆ ಕೆಲವರ ಹೆಸರನ್ನು ತಪ್ಪಾಗಿ ಮುದ್ರಿಸಲಾಗಿದೆ.

2007 ರಲ್ಲೂ ಕವಿಗೋಷ್ಠಿಗೆ ಆಯ್ಕೆ ಮಾಡುವಾಗ ಹೀಗೆಯೇ ಎಡವಟ್ಟು ಮಾಡಿ ಇಡೀ ಕವಿಗೋಷ್ಠಿ ತನ್ನ ಮಹತ್ವವನ್ನೇ ಕಳೆದುಕೊಂಡಿತ್ತು. ಅನಂತರ ಎಚಿತ ಸರ್ಕಾರ ಕವಿಗೋಷ್ಠಿ ಉಪ ಸಮಿತಿಗೆ ಅರ್ಹರು ಹಾಗೂ ಅನುಭವಿಗಳನ್ನು ನೇಮಿಸಿ ಸರಿಪಡಿಸಿತ್ತು. ಮತ್ತೆ ಈ ಬಾರಿ ಕವಿಗಳ ಆಯ್ಕೆಯಲ್ಲಿ ಆಗಿರುವ ಎಡವಟ್ಟು ಕವಿಗೋಷ್ಠಿ ಮತ್ತೆ ಹಳೆ ಹಾದಿ ಹಿಡಿಯಲಿದೆಯೇ ಎನ್ನುವ ಚರ್ಚೆ ಹುಟ್ಟು ಹಾಕಿದೆ.

ಇಷ್ಟಲ್ಲದೆ ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಅವರನ್ನು ಕವಿಗೋಷ್ಠಿ ಸಮಿತಿಯವರು ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ವರ್ಗಾಯಿಸಿದ್ದಾರೆ. ಏಕೆಂದರೆ ಆಹ್ವಾನ ಪತ್ರಿಕೆಯಲ್ಲಿ ಪ್ರತಾಪ್ ಸಿಂಹ, ಚಾಮರಾಜನಗರ ಲೋಕಸಭಾ ಸದಸ್ಯ ಎಂದಿರುವುದು ಇಂತಹ ಅನುಮಾನ ಹುಟ್ಟು ಹಾಕುವಂತೆ ಮಾಡಿದೆ.

andolanait

Recent Posts

ಕೊಡಗು‌ ಸಿದ್ದಾಪುರ ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

7 hours ago

ಚಿರತೆ ಮರಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…

7 hours ago

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

8 hours ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

8 hours ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

9 hours ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

9 hours ago