ಜಿಲ್ಲೆಗಳು

ಮುಖ್ಯ ಕವಿಗೋಷ್ಠಿಯ ಪಟ್ಟಿಯಲ್ಲಿ ಮೃತಪಟ್ಟ ಕವಿ!

ಆಹ್ವಾನ ಪತ್ರಿಕೆಯಲ್ಲಿ ತಿದ್ದುಪಡಿ, ಕೆಲ ಕವಿಗಳ ಆಯ್ಕೆಗೆ ಅಕ್ಷೇಪ

ಮೈಸೂರು : ಕೆಲ ದಿನಗಳ ಹಿಂದೆ ನಾಡಿನ ನಾನಾ ಟ್ರಸ್ಟ್ ಗಳಿಗೆ ನೇಮಕ ಮಾಡುವಾಗ ಕಳೆದ ವರ್ಷವೇ ಮೃತಪಟ್ಟಿದ್ದ ರಾಜೇಶ್ವರಿ ತೇಜಸ್ವಿ ಅವರನ್ನು ನೇಮಿಸಿ ಎಡವಟ್ಟು ಮಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಈ ಬಾರಿ ದಸರಾ ಮುಖ್ಯ ಕವಿ ಗೋಷ್ಠಿಗೆ ಮೃತಪಟ್ಟ ಕವಿ ಹೆಸರು ಸೇರಿಸಿ ಮತ್ತೊಂದು ಮಹಾ ಎಡವಟ್ಟು ಮಾಡಿದೆ.

ಮೂರು ವರ್ಷಗಳ ಹಿಂದೆಯೇ ಮೃತಪಟ್ಟಿರುವ ಹಿರಿಯ ಕವಿ, ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕರಾಗಿದ್ದ ಜಿಕೆ ರವೀಂದ್ರ ಕುಮಾರ್ ಅವರ ಹೆಸರನ್ನು ಸೇರಿಸಲಾಗಿದೆ. ಇದು ಆಹ್ವಾನ ಪತ್ರಿಕೆಯಲ್ಲಿ ಮುದ್ರಣವಾಗಿ ವೈರಲ್ ಆಗಿದೆ, ಇದು ತಿಳಿತಿದ್ದಂತೆ ದಸರಾ ಕವಿಗೋಷ್ಠಿ ಉಪಸಮಿತಿ ಅವರ ಹೆಸರು ಬದಲಿಸಿ ಹೊಸ ಆಹ್ವಾನ ಪತ್ರಿಕೆ ರವಾನಿಸಿದೆ. ಈ ಕುರಿತು ಸಮಿತಿ ಕಾರ್ಯಾಧ್ಯಕ್ಷ ಪ್ರೊಫೆಸರ್ ಎಂಜಿ ಮಂಜುನಾಥ್ ಅವರನ್ನು ವಿಚಾರಿಸಿದರೆ ಅದು ಅಧಿಕೃತ ಆಹ್ವಾನ ಪತ್ರಿಕೆಯಲ್ಲ. ಮೊದಲು ಹೆಸರಿತ್ತು ಅದನ್ನು ತೆಗೆಸಿ ಹೊಸದನ್ನು ನೀಡಲಾಗಿದೆ ಎನ್ನುವ ಉತ್ತರ ನೀಡುತ್ತಾರೆ. ಆದರೆ ರವೀಂದ್ರ ಕುಮಾರ್ ಹೆಸರನ್ನು ನೀಡಿದವರು ಯಾರು ಎಂದು ಕೇಳಿದರೆ ಸಮರ್ಪಕ ಉತ್ತರ ಅವರಿಂದ ಬರಲಿಲ್ಲ.

ಈ ನಡುವೆ ಮುಖ್ಯ ಕವಿಗೋಷ್ಠಿಗೆ ಕೆಲವರನ್ನು ಆಯ್ಕೆ ಮಾಡುವುದು ಚರ್ಚೆಗೆ ಕಾರಣವಾಗಿದೆ. ಕೆಲ ದಿನಗಳ ಹಿಂದೆ ಎಷ್ಟೇ ಅಕಾಡೆಮಿ ಸದಸ್ಯ ಸ್ಥಾನದಿಂದ ಬದಲಾಯಿಸಿದವರನ್ನು ಕವಿಗೋಷ್ಠಿಗೆ ಹಾಕಲಾಗಿದೆ ಕೆಲವರ ಹೆಸರನ್ನು ತಪ್ಪಾಗಿ ಮುದ್ರಿಸಲಾಗಿದೆ.

2007 ರಲ್ಲೂ ಕವಿಗೋಷ್ಠಿಗೆ ಆಯ್ಕೆ ಮಾಡುವಾಗ ಹೀಗೆಯೇ ಎಡವಟ್ಟು ಮಾಡಿ ಇಡೀ ಕವಿಗೋಷ್ಠಿ ತನ್ನ ಮಹತ್ವವನ್ನೇ ಕಳೆದುಕೊಂಡಿತ್ತು. ಅನಂತರ ಎಚಿತ ಸರ್ಕಾರ ಕವಿಗೋಷ್ಠಿ ಉಪ ಸಮಿತಿಗೆ ಅರ್ಹರು ಹಾಗೂ ಅನುಭವಿಗಳನ್ನು ನೇಮಿಸಿ ಸರಿಪಡಿಸಿತ್ತು. ಮತ್ತೆ ಈ ಬಾರಿ ಕವಿಗಳ ಆಯ್ಕೆಯಲ್ಲಿ ಆಗಿರುವ ಎಡವಟ್ಟು ಕವಿಗೋಷ್ಠಿ ಮತ್ತೆ ಹಳೆ ಹಾದಿ ಹಿಡಿಯಲಿದೆಯೇ ಎನ್ನುವ ಚರ್ಚೆ ಹುಟ್ಟು ಹಾಕಿದೆ.

ಇಷ್ಟಲ್ಲದೆ ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಅವರನ್ನು ಕವಿಗೋಷ್ಠಿ ಸಮಿತಿಯವರು ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ವರ್ಗಾಯಿಸಿದ್ದಾರೆ. ಏಕೆಂದರೆ ಆಹ್ವಾನ ಪತ್ರಿಕೆಯಲ್ಲಿ ಪ್ರತಾಪ್ ಸಿಂಹ, ಚಾಮರಾಜನಗರ ಲೋಕಸಭಾ ಸದಸ್ಯ ಎಂದಿರುವುದು ಇಂತಹ ಅನುಮಾನ ಹುಟ್ಟು ಹಾಕುವಂತೆ ಮಾಡಿದೆ.

andolanait

Recent Posts

ರಾಜ್ಯದಲ್ಲಿ ಮಳೆ ಕೊರತೆ: ತಾಪಮಾನ ಏರಿಕೆ: ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…

1 min ago

ಕೊಡಗು: ಪತ್ನಿಗೆ ಗುಂಡಿಕ್ಕಿ ಕೊಂದು ತಾನೂ ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆ

ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ…

12 mins ago

ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್: ಆಸ್ಪತ್ರೆಗೆ ದಾಖಲು..!!

ಬೆಂಗಳೂರು: ಬಿಗ್‌ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್…

17 mins ago

2,000 ರೂ. ವರೆಗಿನ ಯುಪಿಐ ಪಾವತಿಗಳಿಗೆ ಶುಲ್ಕವಿಲ್ಲ: ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ

ನವದೆಹಲಿ: 2,000 ರೂ. ವರೆಗೆ ನಡೆಯುವ ಎಲ್ಲಾ UPI ವಹಿವಾಟುಗಳಿಗೆ ಶುಲ್ಕವಿಲ್ಲ. ಅಷ್ಟೇ ಅಲ್ಲ, RuPay ಡೆಬಿಟ್ ಕಾರ್ಡ್ ಮೂಲಕ…

24 mins ago

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

22 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

22 hours ago