ಜಿಲ್ಲೆಗಳು

ಮುಖ್ಯ ಕವಿಗೋಷ್ಠಿಯ ಪಟ್ಟಿಯಲ್ಲಿ ಮೃತಪಟ್ಟ ಕವಿ!

ಆಹ್ವಾನ ಪತ್ರಿಕೆಯಲ್ಲಿ ತಿದ್ದುಪಡಿ, ಕೆಲ ಕವಿಗಳ ಆಯ್ಕೆಗೆ ಅಕ್ಷೇಪ

ಮೈಸೂರು : ಕೆಲ ದಿನಗಳ ಹಿಂದೆ ನಾಡಿನ ನಾನಾ ಟ್ರಸ್ಟ್ ಗಳಿಗೆ ನೇಮಕ ಮಾಡುವಾಗ ಕಳೆದ ವರ್ಷವೇ ಮೃತಪಟ್ಟಿದ್ದ ರಾಜೇಶ್ವರಿ ತೇಜಸ್ವಿ ಅವರನ್ನು ನೇಮಿಸಿ ಎಡವಟ್ಟು ಮಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಈ ಬಾರಿ ದಸರಾ ಮುಖ್ಯ ಕವಿ ಗೋಷ್ಠಿಗೆ ಮೃತಪಟ್ಟ ಕವಿ ಹೆಸರು ಸೇರಿಸಿ ಮತ್ತೊಂದು ಮಹಾ ಎಡವಟ್ಟು ಮಾಡಿದೆ.

ಮೂರು ವರ್ಷಗಳ ಹಿಂದೆಯೇ ಮೃತಪಟ್ಟಿರುವ ಹಿರಿಯ ಕವಿ, ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕರಾಗಿದ್ದ ಜಿಕೆ ರವೀಂದ್ರ ಕುಮಾರ್ ಅವರ ಹೆಸರನ್ನು ಸೇರಿಸಲಾಗಿದೆ. ಇದು ಆಹ್ವಾನ ಪತ್ರಿಕೆಯಲ್ಲಿ ಮುದ್ರಣವಾಗಿ ವೈರಲ್ ಆಗಿದೆ, ಇದು ತಿಳಿತಿದ್ದಂತೆ ದಸರಾ ಕವಿಗೋಷ್ಠಿ ಉಪಸಮಿತಿ ಅವರ ಹೆಸರು ಬದಲಿಸಿ ಹೊಸ ಆಹ್ವಾನ ಪತ್ರಿಕೆ ರವಾನಿಸಿದೆ. ಈ ಕುರಿತು ಸಮಿತಿ ಕಾರ್ಯಾಧ್ಯಕ್ಷ ಪ್ರೊಫೆಸರ್ ಎಂಜಿ ಮಂಜುನಾಥ್ ಅವರನ್ನು ವಿಚಾರಿಸಿದರೆ ಅದು ಅಧಿಕೃತ ಆಹ್ವಾನ ಪತ್ರಿಕೆಯಲ್ಲ. ಮೊದಲು ಹೆಸರಿತ್ತು ಅದನ್ನು ತೆಗೆಸಿ ಹೊಸದನ್ನು ನೀಡಲಾಗಿದೆ ಎನ್ನುವ ಉತ್ತರ ನೀಡುತ್ತಾರೆ. ಆದರೆ ರವೀಂದ್ರ ಕುಮಾರ್ ಹೆಸರನ್ನು ನೀಡಿದವರು ಯಾರು ಎಂದು ಕೇಳಿದರೆ ಸಮರ್ಪಕ ಉತ್ತರ ಅವರಿಂದ ಬರಲಿಲ್ಲ.

ಈ ನಡುವೆ ಮುಖ್ಯ ಕವಿಗೋಷ್ಠಿಗೆ ಕೆಲವರನ್ನು ಆಯ್ಕೆ ಮಾಡುವುದು ಚರ್ಚೆಗೆ ಕಾರಣವಾಗಿದೆ. ಕೆಲ ದಿನಗಳ ಹಿಂದೆ ಎಷ್ಟೇ ಅಕಾಡೆಮಿ ಸದಸ್ಯ ಸ್ಥಾನದಿಂದ ಬದಲಾಯಿಸಿದವರನ್ನು ಕವಿಗೋಷ್ಠಿಗೆ ಹಾಕಲಾಗಿದೆ ಕೆಲವರ ಹೆಸರನ್ನು ತಪ್ಪಾಗಿ ಮುದ್ರಿಸಲಾಗಿದೆ.

2007 ರಲ್ಲೂ ಕವಿಗೋಷ್ಠಿಗೆ ಆಯ್ಕೆ ಮಾಡುವಾಗ ಹೀಗೆಯೇ ಎಡವಟ್ಟು ಮಾಡಿ ಇಡೀ ಕವಿಗೋಷ್ಠಿ ತನ್ನ ಮಹತ್ವವನ್ನೇ ಕಳೆದುಕೊಂಡಿತ್ತು. ಅನಂತರ ಎಚಿತ ಸರ್ಕಾರ ಕವಿಗೋಷ್ಠಿ ಉಪ ಸಮಿತಿಗೆ ಅರ್ಹರು ಹಾಗೂ ಅನುಭವಿಗಳನ್ನು ನೇಮಿಸಿ ಸರಿಪಡಿಸಿತ್ತು. ಮತ್ತೆ ಈ ಬಾರಿ ಕವಿಗಳ ಆಯ್ಕೆಯಲ್ಲಿ ಆಗಿರುವ ಎಡವಟ್ಟು ಕವಿಗೋಷ್ಠಿ ಮತ್ತೆ ಹಳೆ ಹಾದಿ ಹಿಡಿಯಲಿದೆಯೇ ಎನ್ನುವ ಚರ್ಚೆ ಹುಟ್ಟು ಹಾಕಿದೆ.

ಇಷ್ಟಲ್ಲದೆ ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಅವರನ್ನು ಕವಿಗೋಷ್ಠಿ ಸಮಿತಿಯವರು ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ವರ್ಗಾಯಿಸಿದ್ದಾರೆ. ಏಕೆಂದರೆ ಆಹ್ವಾನ ಪತ್ರಿಕೆಯಲ್ಲಿ ಪ್ರತಾಪ್ ಸಿಂಹ, ಚಾಮರಾಜನಗರ ಲೋಕಸಭಾ ಸದಸ್ಯ ಎಂದಿರುವುದು ಇಂತಹ ಅನುಮಾನ ಹುಟ್ಟು ಹಾಕುವಂತೆ ಮಾಡಿದೆ.

andolanait

Recent Posts

ಹಾಸನ: ಸಿಡಿಲು ಬಡಿದು ಮಹಿಳೆ ಸಾವು

ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…

5 hours ago

ಪಹಲ್ಗಾಮ್‌ ದಾಳಿಯಾಗಿ ನಾಳೆಗೆ 1 ವರ್ಷ: ಸೇನೆಯಿಂದ ಪೋಸ್ಟ್‌

ನವದೆಹಲಿ: ಬೈಸರನ್‌ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…

5 hours ago

ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…

5 hours ago

ಪಾಲಹಳ್ಳಿ ಬೇಸಿಗೆ ಶಿಬಿರದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವ ಚಲುವರಾಯಸ್ವಾಮಿ

​ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…

6 hours ago

ಕೇರಳ| ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಸ್ಫೋಟ: 13 ಮಂದಿ ಸಾವು

ತಿರುವನಂತಪುರಂ: ಕೇರಳದ ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…

6 hours ago

ಹನೂರು| ಆದಿಶಕ್ತಿ ಮಾರಮ್ಮ ಜಾತ್ರೆಯಲ್ಲಿ ಡಿಜೆ ಬಳಕೆಗೆ ಅವಕಾಶ ನೀಡುವಂತೆ ಗ್ರಾಮಸ್ಥರ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…

6 hours ago