ಜಿಲ್ಲೆಗಳು

ಮುಖ್ಯ ಕವಿಗೋಷ್ಠಿಯ ಪಟ್ಟಿಯಲ್ಲಿ ಮೃತಪಟ್ಟ ಕವಿ!

ಆಹ್ವಾನ ಪತ್ರಿಕೆಯಲ್ಲಿ ತಿದ್ದುಪಡಿ, ಕೆಲ ಕವಿಗಳ ಆಯ್ಕೆಗೆ ಅಕ್ಷೇಪ

ಮೈಸೂರು : ಕೆಲ ದಿನಗಳ ಹಿಂದೆ ನಾಡಿನ ನಾನಾ ಟ್ರಸ್ಟ್ ಗಳಿಗೆ ನೇಮಕ ಮಾಡುವಾಗ ಕಳೆದ ವರ್ಷವೇ ಮೃತಪಟ್ಟಿದ್ದ ರಾಜೇಶ್ವರಿ ತೇಜಸ್ವಿ ಅವರನ್ನು ನೇಮಿಸಿ ಎಡವಟ್ಟು ಮಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಈ ಬಾರಿ ದಸರಾ ಮುಖ್ಯ ಕವಿ ಗೋಷ್ಠಿಗೆ ಮೃತಪಟ್ಟ ಕವಿ ಹೆಸರು ಸೇರಿಸಿ ಮತ್ತೊಂದು ಮಹಾ ಎಡವಟ್ಟು ಮಾಡಿದೆ.

ಮೂರು ವರ್ಷಗಳ ಹಿಂದೆಯೇ ಮೃತಪಟ್ಟಿರುವ ಹಿರಿಯ ಕವಿ, ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕರಾಗಿದ್ದ ಜಿಕೆ ರವೀಂದ್ರ ಕುಮಾರ್ ಅವರ ಹೆಸರನ್ನು ಸೇರಿಸಲಾಗಿದೆ. ಇದು ಆಹ್ವಾನ ಪತ್ರಿಕೆಯಲ್ಲಿ ಮುದ್ರಣವಾಗಿ ವೈರಲ್ ಆಗಿದೆ, ಇದು ತಿಳಿತಿದ್ದಂತೆ ದಸರಾ ಕವಿಗೋಷ್ಠಿ ಉಪಸಮಿತಿ ಅವರ ಹೆಸರು ಬದಲಿಸಿ ಹೊಸ ಆಹ್ವಾನ ಪತ್ರಿಕೆ ರವಾನಿಸಿದೆ. ಈ ಕುರಿತು ಸಮಿತಿ ಕಾರ್ಯಾಧ್ಯಕ್ಷ ಪ್ರೊಫೆಸರ್ ಎಂಜಿ ಮಂಜುನಾಥ್ ಅವರನ್ನು ವಿಚಾರಿಸಿದರೆ ಅದು ಅಧಿಕೃತ ಆಹ್ವಾನ ಪತ್ರಿಕೆಯಲ್ಲ. ಮೊದಲು ಹೆಸರಿತ್ತು ಅದನ್ನು ತೆಗೆಸಿ ಹೊಸದನ್ನು ನೀಡಲಾಗಿದೆ ಎನ್ನುವ ಉತ್ತರ ನೀಡುತ್ತಾರೆ. ಆದರೆ ರವೀಂದ್ರ ಕುಮಾರ್ ಹೆಸರನ್ನು ನೀಡಿದವರು ಯಾರು ಎಂದು ಕೇಳಿದರೆ ಸಮರ್ಪಕ ಉತ್ತರ ಅವರಿಂದ ಬರಲಿಲ್ಲ.

ಈ ನಡುವೆ ಮುಖ್ಯ ಕವಿಗೋಷ್ಠಿಗೆ ಕೆಲವರನ್ನು ಆಯ್ಕೆ ಮಾಡುವುದು ಚರ್ಚೆಗೆ ಕಾರಣವಾಗಿದೆ. ಕೆಲ ದಿನಗಳ ಹಿಂದೆ ಎಷ್ಟೇ ಅಕಾಡೆಮಿ ಸದಸ್ಯ ಸ್ಥಾನದಿಂದ ಬದಲಾಯಿಸಿದವರನ್ನು ಕವಿಗೋಷ್ಠಿಗೆ ಹಾಕಲಾಗಿದೆ ಕೆಲವರ ಹೆಸರನ್ನು ತಪ್ಪಾಗಿ ಮುದ್ರಿಸಲಾಗಿದೆ.

2007 ರಲ್ಲೂ ಕವಿಗೋಷ್ಠಿಗೆ ಆಯ್ಕೆ ಮಾಡುವಾಗ ಹೀಗೆಯೇ ಎಡವಟ್ಟು ಮಾಡಿ ಇಡೀ ಕವಿಗೋಷ್ಠಿ ತನ್ನ ಮಹತ್ವವನ್ನೇ ಕಳೆದುಕೊಂಡಿತ್ತು. ಅನಂತರ ಎಚಿತ ಸರ್ಕಾರ ಕವಿಗೋಷ್ಠಿ ಉಪ ಸಮಿತಿಗೆ ಅರ್ಹರು ಹಾಗೂ ಅನುಭವಿಗಳನ್ನು ನೇಮಿಸಿ ಸರಿಪಡಿಸಿತ್ತು. ಮತ್ತೆ ಈ ಬಾರಿ ಕವಿಗಳ ಆಯ್ಕೆಯಲ್ಲಿ ಆಗಿರುವ ಎಡವಟ್ಟು ಕವಿಗೋಷ್ಠಿ ಮತ್ತೆ ಹಳೆ ಹಾದಿ ಹಿಡಿಯಲಿದೆಯೇ ಎನ್ನುವ ಚರ್ಚೆ ಹುಟ್ಟು ಹಾಕಿದೆ.

ಇಷ್ಟಲ್ಲದೆ ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಅವರನ್ನು ಕವಿಗೋಷ್ಠಿ ಸಮಿತಿಯವರು ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ವರ್ಗಾಯಿಸಿದ್ದಾರೆ. ಏಕೆಂದರೆ ಆಹ್ವಾನ ಪತ್ರಿಕೆಯಲ್ಲಿ ಪ್ರತಾಪ್ ಸಿಂಹ, ಚಾಮರಾಜನಗರ ಲೋಕಸಭಾ ಸದಸ್ಯ ಎಂದಿರುವುದು ಇಂತಹ ಅನುಮಾನ ಹುಟ್ಟು ಹಾಕುವಂತೆ ಮಾಡಿದೆ.

andolanait

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

11 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

11 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

11 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

12 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

12 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

21 hours ago