ಬೆಂಗಳೂರು– ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದು, ಮೈಸೂರು ಜನತೆಗೆ ಧನ್ಯವಾದಗಳು ತಿಳಿಸಿ ಟ್ವೀಟ್ ಮಾಡಿದ್ದಾರೆ.
ಮೈಸೂರು ದಸರಾ ಅದ್ಭುತವಾಗಿದೆ. ಮೈಸೂರಿನ ಸಂಸ್ಕೃತಿ ಪರಂಪರೆಯನ್ನು ಜನ ರಕ್ಷಣೆ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದ್ದಾರೆ.
2022 ರ ವಿಶ್ವ ಯೋಗ ದಿನದಂದು ಮೈಸೂರಿಗೆ ಭೇಟಿ ನೀಡಿದ್ದೆ ಎಂದು ಮೋದಿ ನೆನಪು ಮಾಡಿಕೊಂಡಿದ್ದಾರೆ.
ಕೊರೋನಾ ಕಾರಣದಿಂದ ಎರಡು ವರ್ಷ ಕಳೆಗುಂದಿದ್ದ ವಿಶ್ವವಿಖ್ಯಾತ ಮೈಸೂರು ದಸರಾ ಈ ಬಾರಿ ವಿಜೃಂಭಣೆಯಿಂದ ನೆರವೇರಿದೆ. ಲಕ್ಷಾಂತರ ಸಂಖ್ಯೆಯ ಭಕ್ತರು, ಪ್ರವಾಸಿಗರು ಭಾಗಿಯಾಗಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದಸರಾಗೆ ಚಾಲನೆ ನೀಡಿದ್ದರು. ವೈಭವದಿಂದ ನಡೆದ ದಸರಾ ಮಹೋತ್ಸವದ ಬಗ್ಗೆ ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿ ಟ್ರೀಟ್ ಮಾಡಿದ್ದಾರೆ.
ಮೈಸೂರು ದಸರಾ ಅದ್ಭುತವಾಗಿದೆ. ತಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಸುಂದರವಾಗಿ ಉಳಿಸಿಕೊಂಡಿರುವ ಮೈಸೂರಿನ ಜನತೆಯನ್ನು ನಾನು ಶ್ಲಾಘಿಸುತ್ತೇನೆ. 2022 ರ ಯೋಗ ದಿನದಂದು ನನ್ನ ಮೈಸೂರು ಭೇಟಿಗಳ ಅಚ್ಚುಮೆಚ್ಚಿನ ನೆನಪುಗಳಿವೆ ಎಂದು ತಿಳಿಸಿದ್ದಾರೆ..
ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…
ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…
ಮೈಸೂರು : ವನ್ಯಜೀವಿ ಕಳ್ಳಸಾಗಣೆ ವಿರುದ್ಧ ಕಾರ್ಯಾಚರಣೆ ನಡೆಸಿರುವ ಮಹಾರಾಷ್ಟ್ರ ರಾಜ್ಯದ ನಾಗ್ಪುರ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು(ಡಿಆರ್ಐ) ಮೈಸೂರಿನಲ್ಲಿ ಶಂಕಿತ…
ಹೊಸದಿಲ್ಲಿ : ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ವಿರುದ್ಧ ಎದ್ದಿದ್ದ ರಾಜಕೀಯ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಭೇಟಿಗೆ ಸಮಯ ಕೋರಿದ್ದಾರೆ ಎಂದು ಸಿಎಂ…