ಜಿಲ್ಲೆಗಳು

ಮೈಸೂರಿನಲ್ಲಿ ಇಂದೇ ನಡೆಯಿತು ಮಿನಿ ಜಂಬೂಸವಾರಿ

ಮೈಸೂರು: ಅಲ್ಲಿ ದಸರಾ ಜಂಬೂ ಸವಾರಿಯಲ್ಲಿ ಕಾಣುವ ಎಲ್ಲ ಆಕರ್ಷಣೆಗಳಿದ್ದವು. ಗಂಭೀರ ನಡೆಯ ಗಜಪಡೆಯಿತ್ತು. ಅತ್ಯಾಕರ್ಷಕ ಸ್ತಬ್ಧ ಚಿತ್ರಗಳಿದ್ದವು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಗಜಪಡೆಗೆ ಪುಷ್ಪಾರ್ಚನೆಯನ್ನೂ ಮಾಡಿದರು.ಚಿನ್ನದ ಅಂಬಾರಿ ಹೊರತುಪಡಿಸಿ ಅಲ್ಲಿ ಮಿನಿ ದಸರಾದ ಎಲ್ಲ ತುಣುಕುಗಳಿದ್ದವು.
ಮೈಸೂರು ನಗರದ ಅರಮನೆಯ ಮುಂಭಾಗದಲ್ಲಿರುವ ಕೋಟೆ ಆಂಜನೇಯ ಸ್ವಾಮೀ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪ್ರವಾಸೋದ್ಯಮದ ಜಾಥಾ ಕಾರ್ಯಕ್ರಮದಲ್ಲಿ ಕಂಡು ಬಂದ ದೃಶ್ಯಗಳು.
ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮಂಗಳವಾರ ವಿಶ್ವ ಪ್ರವಾಸೋದ್ಯಮದ ಜಾಥಾಕ್ಕೆ ಚಾಲನೆ ನೀಡಿದರು.

 

ಪ್ರವಾಸಿಗರ ಮನ ಸೆಳೆದ ಕಲಾತಂಡಗಳು

ಇದೇ ಸಂದರ್ಭದಲ್ಲಿ ನಾನಾ ರಾಜ್ಯಗಳ ಸಂಸ್ಕೃತಿಗಳನ್ನು ಬಿಂಬಿಸುವ ವೇಷಭೂಷಣಗಳು ಎಲ್ಲರ ಗಮನಸೆಳೆದವು. ಬ್ಯಾಂಡ್‍ಸೆಟ್, ಡೊಳ್ಳುಕುಣಿತ , ಕಂಸಾಳೆನೃತ್ಯ, ತಮಟೆವಾದನ, ಹುಲಿವೇಷ, ಕಲಾ ತಂಡಗಳು ಮೆರವಣಿಗೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡು ನೋಡುಗರ ಗಮನ ಸೆಳೆದವು.
ಬಳಿಕ ಮಾತನಾಡಿದ ಸಚಿವರು, ಟ್ರಾವೆಲ್ಸ್ ಅಸೋಸಿಯೇಷನ್, ಹೋಟೆಲ್ ಮಾಲೀಕರ ಸಂಘ ಸೇರಿದಂತೆ ನಾನಾ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿರುವ ಈ ಮೆರವಣಿಗೆ ಪ್ರವಾಸಿಗರನ್ನು ಸೆಳೆಯಲು ಸಹಕಾರಿಯಾಗಲಿದೆ ಎಂದರು. ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆ ಮಾಡುತ್ತಿರುವುದರಿಂದ ಪ್ರವಾಸೋದ್ಯಮಕ್ಕೆ ಚೇತರಿಕೆ ಸಿಗಲಿದೆ. ದೇಶ ವಿದೇಶಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಚಾಲನೆ ನೀಡುತ್ತಿರುವುದಕ್ಕೆ ತುಂಬಾ ಖುಷಿಯಾಗುತ್ತಿದೆ. ಗೋಲ್ಡ್ ಪಾಸ್ ಬಗ್ಗೆ ರೂಪುರೇಷೆಗಳನ್ನು ಮಾಡಿದ ನಂತರ ಸಭೆಯಲ್ಲಿ ತಿರ್ಮಾನ ಕೈಗೊಂಡು ತಿಳಿಸಲಾಗುವುದು ಎಂದರು.
ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಟ್ರಾವೆಲ್ಸ್ ಅಸೋಸಿಯೇಷನ್‌ ಪ್ರಶಾಂತ್, ಜಯಕುಮಾರ್, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣ ಗೌಡ, ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ, ಎಸ್.ನಾಗರಾಜ್, ಎಸ್.ಜೆ.ಅಶೋಕ್, ಎಸ್.ನಾಗರಾಜ್ ಮತ್ತಿತರರು ಹಾಜರಿದ್ದರು.

andolanait

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

2 hours ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

3 hours ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

3 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

3 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

3 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

3 hours ago