ಜಿಲ್ಲೆಗಳು

ಮೈಸೂರಿನಲ್ಲಿ ಇಂದೇ ನಡೆಯಿತು ಮಿನಿ ಜಂಬೂಸವಾರಿ

ಮೈಸೂರು: ಅಲ್ಲಿ ದಸರಾ ಜಂಬೂ ಸವಾರಿಯಲ್ಲಿ ಕಾಣುವ ಎಲ್ಲ ಆಕರ್ಷಣೆಗಳಿದ್ದವು. ಗಂಭೀರ ನಡೆಯ ಗಜಪಡೆಯಿತ್ತು. ಅತ್ಯಾಕರ್ಷಕ ಸ್ತಬ್ಧ ಚಿತ್ರಗಳಿದ್ದವು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಗಜಪಡೆಗೆ ಪುಷ್ಪಾರ್ಚನೆಯನ್ನೂ ಮಾಡಿದರು.ಚಿನ್ನದ ಅಂಬಾರಿ ಹೊರತುಪಡಿಸಿ ಅಲ್ಲಿ ಮಿನಿ ದಸರಾದ ಎಲ್ಲ ತುಣುಕುಗಳಿದ್ದವು.
ಮೈಸೂರು ನಗರದ ಅರಮನೆಯ ಮುಂಭಾಗದಲ್ಲಿರುವ ಕೋಟೆ ಆಂಜನೇಯ ಸ್ವಾಮೀ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪ್ರವಾಸೋದ್ಯಮದ ಜಾಥಾ ಕಾರ್ಯಕ್ರಮದಲ್ಲಿ ಕಂಡು ಬಂದ ದೃಶ್ಯಗಳು.
ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮಂಗಳವಾರ ವಿಶ್ವ ಪ್ರವಾಸೋದ್ಯಮದ ಜಾಥಾಕ್ಕೆ ಚಾಲನೆ ನೀಡಿದರು.

 

ಪ್ರವಾಸಿಗರ ಮನ ಸೆಳೆದ ಕಲಾತಂಡಗಳು

ಇದೇ ಸಂದರ್ಭದಲ್ಲಿ ನಾನಾ ರಾಜ್ಯಗಳ ಸಂಸ್ಕೃತಿಗಳನ್ನು ಬಿಂಬಿಸುವ ವೇಷಭೂಷಣಗಳು ಎಲ್ಲರ ಗಮನಸೆಳೆದವು. ಬ್ಯಾಂಡ್‍ಸೆಟ್, ಡೊಳ್ಳುಕುಣಿತ , ಕಂಸಾಳೆನೃತ್ಯ, ತಮಟೆವಾದನ, ಹುಲಿವೇಷ, ಕಲಾ ತಂಡಗಳು ಮೆರವಣಿಗೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡು ನೋಡುಗರ ಗಮನ ಸೆಳೆದವು.
ಬಳಿಕ ಮಾತನಾಡಿದ ಸಚಿವರು, ಟ್ರಾವೆಲ್ಸ್ ಅಸೋಸಿಯೇಷನ್, ಹೋಟೆಲ್ ಮಾಲೀಕರ ಸಂಘ ಸೇರಿದಂತೆ ನಾನಾ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿರುವ ಈ ಮೆರವಣಿಗೆ ಪ್ರವಾಸಿಗರನ್ನು ಸೆಳೆಯಲು ಸಹಕಾರಿಯಾಗಲಿದೆ ಎಂದರು. ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆ ಮಾಡುತ್ತಿರುವುದರಿಂದ ಪ್ರವಾಸೋದ್ಯಮಕ್ಕೆ ಚೇತರಿಕೆ ಸಿಗಲಿದೆ. ದೇಶ ವಿದೇಶಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಚಾಲನೆ ನೀಡುತ್ತಿರುವುದಕ್ಕೆ ತುಂಬಾ ಖುಷಿಯಾಗುತ್ತಿದೆ. ಗೋಲ್ಡ್ ಪಾಸ್ ಬಗ್ಗೆ ರೂಪುರೇಷೆಗಳನ್ನು ಮಾಡಿದ ನಂತರ ಸಭೆಯಲ್ಲಿ ತಿರ್ಮಾನ ಕೈಗೊಂಡು ತಿಳಿಸಲಾಗುವುದು ಎಂದರು.
ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಟ್ರಾವೆಲ್ಸ್ ಅಸೋಸಿಯೇಷನ್‌ ಪ್ರಶಾಂತ್, ಜಯಕುಮಾರ್, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣ ಗೌಡ, ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ, ಎಸ್.ನಾಗರಾಜ್, ಎಸ್.ಜೆ.ಅಶೋಕ್, ಎಸ್.ನಾಗರಾಜ್ ಮತ್ತಿತರರು ಹಾಜರಿದ್ದರು.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

11 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

12 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

13 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

13 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

1 day ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago