ಮೂರು ದಿನದ ಉತ್ಸವದಲ್ಲಿ ಗೋವಾ, ಕಲೆ, ಸಂಸ್ಕೃತಿ , ಆಹಾರ, ಇತಿಹಾಸದ ಅನಾವರಣ
ಮೈಸೂರು: ನೆರೆಯ ರಾಜ್ಯ ಗೋವಾ ಪೋರ್ಚುಗೀಸರಿಂದ ಮುಕ್ತಿ ಪಡೆದು 60 ವರ್ಷವಾದ ಹಿನ್ನೆಲೆಯಲ್ಲಿ ದೇಶಾದ್ಯಂತ ‘ಗೋವಾ @ 60ʼ ಸಂಭ್ರಮವನ್ನು ಆಚರಿಸಲಾಗುತ್ತಿದ್ದು ಇದರ ಅಂಗವಾಗಿ ಮೈಸೂರಿನಲ್ಲಿ ಆರಂಭಿಸಿರುವ ಮೂರು ದಿನಗಳ ಕಾಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.
ಮೈಸೂರಿನ ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ಅವರು ಡೊಳ್ಳು ಬಾರಿಸುವ ಮೂಲಕ ಮೂರು ದಿನದ ಉತ್ಸವಕ್ಕೆ ಮೈಸೂರಿನ ನಜರ್ಬಾದ್ನ ಹೈದರಾಲಿ ರಸ್ತೆಯಲ್ಲಿರುವ ನೆಕ್ಸಸ್ ಮಾಲ್ನಲ್ಲಿ ಚಾಲನೆ ನೀಡಿದರು.
ಈ ವೇಳೆ ಗೋವಾದ ಬಗೆಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ಅನಾವರಣಗೊಂಡವು. ವಿವಿಧ ಕಲಾವಿದರು ಪ್ರದರ್ಶನ ನೀಡುತ್ತಾ ಗಮನ ಸೆಳೆದರು.
ದಿನವಿಡೀ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಗೋವಾ ಅಡುಗೆಯ ಪರಿಚಯ, ಕ್ವಿಜ್ ಸಹಿತ ನಾನಾ ಸ್ಪರ್ಧೆಗಳು ನಡೆದವು. ಶನಿವಾರ ಹಾಗೂ ಭಾನುವಾರ ಕೂಡ ಇಂಥದೇ ಕಾರ್ಯಕ್ರಮಗಳು ಮೈಸೂರಿಗರನ್ನು ಆಕರ್ಷಿಸಲಿವೆ.
ಗೋವಾ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ ನೀಡುವ ಸಲುವಾಗಿ ಅಹಮದಾಬಾದ್, ಉದಯಪುರ, ವಾರಣಾಸಿ, ಮಧುರೈ, ತಿರುವನಂತಪುರಂನಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.
ಅದರ ಭಾಗವಾಗಿ ಗೋವಾದ ಕಲೆ, ಸಂಸ್ಕೃತಿ, ಪರಂಪರೆಯನ್ನು ಬಿಂಬಿಸುವ ಸಂಗೀತ, ನೃತ್ಯ ಕಾರ್ಯಕ್ರಮದಲ್ಲಿರಲಿದೆ. ಜತೆಗೆ ಗೋವಾದ ಮುಖ್ಯ ಆಕರ್ಷಣೆಗಳಲ್ಲಿ ಒಂದಾದ ಕ್ಲಿಕ್ಸ್ ಬ್ಯಾಂಡ್, ಶಿಗ್ಮೋ ಪರೇಡ್, ಘೋಡೆ ಮೋಡ್ನಿ, ಲ್ಯಾಂಪ್ಡ್ಯಾನ್ಸ್, ಕಿಂಗ್ ಮೊಮೊ ನೃತ್ಯ ಪ್ರದರ್ಶನವಿದೆ. ಮೈಸೂರಿನಲ್ಲೇ ಗೋವಾ ಸಂಸ್ಕೃತಿ ಆನಂದಿಸಬಹುದಾದ ಅವಕಾಶ ಇದಾಗಿದ್ದು, ಮೈಸೂರಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎನ್ನುವುದು ಗೋವಾ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಅನಿಲ್ ದಲಾಲ್ ವಿವರಣೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಗೋವಾ ಪ್ರವಾಸೋದ್ಯಮ ಅಧಿಕಾರಿಗಳಾದ ವಿಷ್ಣು ಗಾಂವ್ಕರ್, ರಸಿಕಾ ನಾಯಕ್ ಹಾಜರಿದ್ದರು.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…