ಜಿಲ್ಲೆಗಳು

ಮೈಸೂರಿನಲ್ಲಿ ಗೋವಾ @60 ಸಂಭ್ರಮಾಚರಣೆ

ಮೂರು ದಿನದ ಉತ್ಸವದಲ್ಲಿ ಗೋವಾ, ಕಲೆ, ಸಂಸ್ಕೃತಿ , ಆಹಾರ, ಇತಿಹಾಸದ ಅನಾವರಣ

ಮೈಸೂರು: ನೆರೆಯ ರಾಜ್ಯ ಗೋವಾ ಪೋರ್ಚುಗೀಸರಿಂದ ಮುಕ್ತಿ ಪಡೆದು 60 ವರ್ಷವಾದ ಹಿನ್ನೆಲೆಯಲ್ಲಿ ದೇಶಾದ್ಯಂತ ‘ಗೋವಾ @ 60ʼ ಸಂಭ್ರಮವನ್ನು ಆಚರಿಸಲಾಗುತ್ತಿದ್ದು ಇದರ ಅಂಗವಾಗಿ ಮೈಸೂರಿನಲ್ಲಿ ಆರಂಭಿಸಿರುವ ಮೂರು ದಿನಗಳ ಕಾಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.

ಮೈಸೂರಿನ ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ಅವರು ಡೊಳ್ಳು ಬಾರಿಸುವ ಮೂಲಕ ಮೂರು ದಿನದ ಉತ್ಸವಕ್ಕೆ ಮೈಸೂರಿನ ನಜರ್ಬಾದ್ನ ಹೈದರಾಲಿ ರಸ್ತೆಯಲ್ಲಿರುವ ನೆಕ್ಸಸ್ ಮಾಲ್ನಲ್ಲಿ ಚಾಲನೆ ನೀಡಿದರು.

ಈ ವೇಳೆ ಗೋವಾದ ಬಗೆಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ಅನಾವರಣಗೊಂಡವು. ವಿವಿಧ ಕಲಾವಿದರು ಪ್ರದರ್ಶನ ನೀಡುತ್ತಾ ಗಮನ ಸೆಳೆದರು.

ದಿನವಿಡೀ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಗೋವಾ ಅಡುಗೆಯ ಪರಿಚಯ, ಕ್ವಿಜ್ ಸಹಿತ ನಾನಾ ಸ್ಪರ್ಧೆಗಳು ನಡೆದವು. ಶನಿವಾರ ಹಾಗೂ ಭಾನುವಾರ ಕೂಡ ಇಂಥದೇ ಕಾರ್ಯಕ್ರಮಗಳು ಮೈಸೂರಿಗರನ್ನು ಆಕರ್ಷಿಸಲಿವೆ.
ಗೋವಾ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ ನೀಡುವ ಸಲುವಾಗಿ ಅಹಮದಾಬಾದ್, ಉದಯಪುರ, ವಾರಣಾಸಿ, ಮಧುರೈ, ತಿರುವನಂತಪುರಂನಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.

ಅದರ ಭಾಗವಾಗಿ ಗೋವಾದ ಕಲೆ, ಸಂಸ್ಕೃತಿ, ಪರಂಪರೆಯನ್ನು ಬಿಂಬಿಸುವ ಸಂಗೀತ, ನೃತ್ಯ ಕಾರ್ಯಕ್ರಮದಲ್ಲಿರಲಿದೆ. ಜತೆಗೆ ಗೋವಾದ ಮುಖ್ಯ ಆಕರ್ಷಣೆಗಳಲ್ಲಿ ಒಂದಾದ ಕ್ಲಿಕ್ಸ್ ಬ್ಯಾಂಡ್, ಶಿಗ್ಮೋ ಪರೇಡ್, ಘೋಡೆ ಮೋಡ್ನಿ, ಲ್ಯಾಂಪ್ಡ್ಯಾನ್ಸ್, ಕಿಂಗ್ ಮೊಮೊ ನೃತ್ಯ ಪ್ರದರ್ಶನವಿದೆ. ಮೈಸೂರಿನಲ್ಲೇ ಗೋವಾ ಸಂಸ್ಕೃತಿ ಆನಂದಿಸಬಹುದಾದ ಅವಕಾಶ ಇದಾಗಿದ್ದು, ಮೈಸೂರಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎನ್ನುವುದು ಗೋವಾ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಅನಿಲ್ ದಲಾಲ್ ವಿವರಣೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಗೋವಾ ಪ್ರವಾಸೋದ್ಯಮ ಅಧಿಕಾರಿಗಳಾದ ವಿಷ್ಣು ಗಾಂವ್ಕರ್, ರಸಿಕಾ ನಾಯಕ್ ಹಾಜರಿದ್ದರು.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

9 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

9 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

9 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

9 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

9 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

9 hours ago