ಮೂರು ದಿನದ ಉತ್ಸವದಲ್ಲಿ ಗೋವಾ, ಕಲೆ, ಸಂಸ್ಕೃತಿ , ಆಹಾರ, ಇತಿಹಾಸದ ಅನಾವರಣ
ಮೈಸೂರು: ನೆರೆಯ ರಾಜ್ಯ ಗೋವಾ ಪೋರ್ಚುಗೀಸರಿಂದ ಮುಕ್ತಿ ಪಡೆದು 60 ವರ್ಷವಾದ ಹಿನ್ನೆಲೆಯಲ್ಲಿ ದೇಶಾದ್ಯಂತ ‘ಗೋವಾ @ 60ʼ ಸಂಭ್ರಮವನ್ನು ಆಚರಿಸಲಾಗುತ್ತಿದ್ದು ಇದರ ಅಂಗವಾಗಿ ಮೈಸೂರಿನಲ್ಲಿ ಆರಂಭಿಸಿರುವ ಮೂರು ದಿನಗಳ ಕಾಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.
ಮೈಸೂರಿನ ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ಅವರು ಡೊಳ್ಳು ಬಾರಿಸುವ ಮೂಲಕ ಮೂರು ದಿನದ ಉತ್ಸವಕ್ಕೆ ಮೈಸೂರಿನ ನಜರ್ಬಾದ್ನ ಹೈದರಾಲಿ ರಸ್ತೆಯಲ್ಲಿರುವ ನೆಕ್ಸಸ್ ಮಾಲ್ನಲ್ಲಿ ಚಾಲನೆ ನೀಡಿದರು.
ಈ ವೇಳೆ ಗೋವಾದ ಬಗೆಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ಅನಾವರಣಗೊಂಡವು. ವಿವಿಧ ಕಲಾವಿದರು ಪ್ರದರ್ಶನ ನೀಡುತ್ತಾ ಗಮನ ಸೆಳೆದರು.
ದಿನವಿಡೀ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಗೋವಾ ಅಡುಗೆಯ ಪರಿಚಯ, ಕ್ವಿಜ್ ಸಹಿತ ನಾನಾ ಸ್ಪರ್ಧೆಗಳು ನಡೆದವು. ಶನಿವಾರ ಹಾಗೂ ಭಾನುವಾರ ಕೂಡ ಇಂಥದೇ ಕಾರ್ಯಕ್ರಮಗಳು ಮೈಸೂರಿಗರನ್ನು ಆಕರ್ಷಿಸಲಿವೆ.
ಗೋವಾ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ ನೀಡುವ ಸಲುವಾಗಿ ಅಹಮದಾಬಾದ್, ಉದಯಪುರ, ವಾರಣಾಸಿ, ಮಧುರೈ, ತಿರುವನಂತಪುರಂನಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.
ಅದರ ಭಾಗವಾಗಿ ಗೋವಾದ ಕಲೆ, ಸಂಸ್ಕೃತಿ, ಪರಂಪರೆಯನ್ನು ಬಿಂಬಿಸುವ ಸಂಗೀತ, ನೃತ್ಯ ಕಾರ್ಯಕ್ರಮದಲ್ಲಿರಲಿದೆ. ಜತೆಗೆ ಗೋವಾದ ಮುಖ್ಯ ಆಕರ್ಷಣೆಗಳಲ್ಲಿ ಒಂದಾದ ಕ್ಲಿಕ್ಸ್ ಬ್ಯಾಂಡ್, ಶಿಗ್ಮೋ ಪರೇಡ್, ಘೋಡೆ ಮೋಡ್ನಿ, ಲ್ಯಾಂಪ್ಡ್ಯಾನ್ಸ್, ಕಿಂಗ್ ಮೊಮೊ ನೃತ್ಯ ಪ್ರದರ್ಶನವಿದೆ. ಮೈಸೂರಿನಲ್ಲೇ ಗೋವಾ ಸಂಸ್ಕೃತಿ ಆನಂದಿಸಬಹುದಾದ ಅವಕಾಶ ಇದಾಗಿದ್ದು, ಮೈಸೂರಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎನ್ನುವುದು ಗೋವಾ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಅನಿಲ್ ದಲಾಲ್ ವಿವರಣೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಗೋವಾ ಪ್ರವಾಸೋದ್ಯಮ ಅಧಿಕಾರಿಗಳಾದ ವಿಷ್ಣು ಗಾಂವ್ಕರ್, ರಸಿಕಾ ನಾಯಕ್ ಹಾಜರಿದ್ದರು.
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…
ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…
ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…