ಮೂರು ದಿನದ ಉತ್ಸವದಲ್ಲಿ ಗೋವಾ, ಕಲೆ, ಸಂಸ್ಕೃತಿ , ಆಹಾರ, ಇತಿಹಾಸದ ಅನಾವರಣ
ಮೈಸೂರು: ನೆರೆಯ ರಾಜ್ಯ ಗೋವಾ ಪೋರ್ಚುಗೀಸರಿಂದ ಮುಕ್ತಿ ಪಡೆದು 60 ವರ್ಷವಾದ ಹಿನ್ನೆಲೆಯಲ್ಲಿ ದೇಶಾದ್ಯಂತ ‘ಗೋವಾ @ 60ʼ ಸಂಭ್ರಮವನ್ನು ಆಚರಿಸಲಾಗುತ್ತಿದ್ದು ಇದರ ಅಂಗವಾಗಿ ಮೈಸೂರಿನಲ್ಲಿ ಆರಂಭಿಸಿರುವ ಮೂರು ದಿನಗಳ ಕಾಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.
ಮೈಸೂರಿನ ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ಅವರು ಡೊಳ್ಳು ಬಾರಿಸುವ ಮೂಲಕ ಮೂರು ದಿನದ ಉತ್ಸವಕ್ಕೆ ಮೈಸೂರಿನ ನಜರ್ಬಾದ್ನ ಹೈದರಾಲಿ ರಸ್ತೆಯಲ್ಲಿರುವ ನೆಕ್ಸಸ್ ಮಾಲ್ನಲ್ಲಿ ಚಾಲನೆ ನೀಡಿದರು.
ಈ ವೇಳೆ ಗೋವಾದ ಬಗೆಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ಅನಾವರಣಗೊಂಡವು. ವಿವಿಧ ಕಲಾವಿದರು ಪ್ರದರ್ಶನ ನೀಡುತ್ತಾ ಗಮನ ಸೆಳೆದರು.
ದಿನವಿಡೀ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಗೋವಾ ಅಡುಗೆಯ ಪರಿಚಯ, ಕ್ವಿಜ್ ಸಹಿತ ನಾನಾ ಸ್ಪರ್ಧೆಗಳು ನಡೆದವು. ಶನಿವಾರ ಹಾಗೂ ಭಾನುವಾರ ಕೂಡ ಇಂಥದೇ ಕಾರ್ಯಕ್ರಮಗಳು ಮೈಸೂರಿಗರನ್ನು ಆಕರ್ಷಿಸಲಿವೆ.
ಗೋವಾ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ ನೀಡುವ ಸಲುವಾಗಿ ಅಹಮದಾಬಾದ್, ಉದಯಪುರ, ವಾರಣಾಸಿ, ಮಧುರೈ, ತಿರುವನಂತಪುರಂನಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.
ಅದರ ಭಾಗವಾಗಿ ಗೋವಾದ ಕಲೆ, ಸಂಸ್ಕೃತಿ, ಪರಂಪರೆಯನ್ನು ಬಿಂಬಿಸುವ ಸಂಗೀತ, ನೃತ್ಯ ಕಾರ್ಯಕ್ರಮದಲ್ಲಿರಲಿದೆ. ಜತೆಗೆ ಗೋವಾದ ಮುಖ್ಯ ಆಕರ್ಷಣೆಗಳಲ್ಲಿ ಒಂದಾದ ಕ್ಲಿಕ್ಸ್ ಬ್ಯಾಂಡ್, ಶಿಗ್ಮೋ ಪರೇಡ್, ಘೋಡೆ ಮೋಡ್ನಿ, ಲ್ಯಾಂಪ್ಡ್ಯಾನ್ಸ್, ಕಿಂಗ್ ಮೊಮೊ ನೃತ್ಯ ಪ್ರದರ್ಶನವಿದೆ. ಮೈಸೂರಿನಲ್ಲೇ ಗೋವಾ ಸಂಸ್ಕೃತಿ ಆನಂದಿಸಬಹುದಾದ ಅವಕಾಶ ಇದಾಗಿದ್ದು, ಮೈಸೂರಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎನ್ನುವುದು ಗೋವಾ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಅನಿಲ್ ದಲಾಲ್ ವಿವರಣೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಗೋವಾ ಪ್ರವಾಸೋದ್ಯಮ ಅಧಿಕಾರಿಗಳಾದ ವಿಷ್ಣು ಗಾಂವ್ಕರ್, ರಸಿಕಾ ನಾಯಕ್ ಹಾಜರಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…