ನವದೆಹಲಿ: ದಕ್ಷಿಣ ಭಾರತದಲ್ಲೂ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರ ಆರಂಭಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಚೆನ್ನೈ, ಬೆಂಗಳೂರು ಹಾಗೂ ಮೈಸೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಶೀಘ್ರವೇ ಆರಂಭವಾಗಲಿದೆ.
ಈಗಾಗಲೇ ದೇಶದಲ್ಲಿ ನಾಲ್ಕು ಕಡೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರ ಆರಂಭಿಸಿವೆ. ಇದೀಗ ಐದನೇ ರೈಲನ್ನು ದಕ್ಷಿಣ ಭಾರತದ ಪ್ರಮುಖ ನಗರಗಳಾದ ಚೆನ್ನೈ, ಬೆಂಗಳೂರು ಹಾಗೂ ಮೈಸೂರು ಮಧ್ಯೆ ಪ್ರಾರಂಭಿಸಲು ಯೋಜಿಸಲಾಗಿದೆ. ಇದೇ ನವೆಂಬರ್ 10ರಂದು ಈ ಮೂರು ನಗರಗಳನ್ನು ಸಂದಿಸುವ ರೈಲು ಆರಂಭವಾಗುವ ನಿರೀಕ್ಷೆ ಇದೆ.
ಇತೀಚಿಗಷ್ಟೆ ಪ್ರಧಾನಿ ನರೇಂದ್ರ ಮೋದಿ ದೇಶದ ನಾಲ್ಕನೇ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ ನೀಡಿದ್ದರು. ಹಿಮಾಚಲ ಪ್ರದೇಶದ ಉನಾ ಹಾಗೂ ದೆಹಲಿ ಮಧ್ಯೆ ಈ ರೈಲಿಗೆ ಹಸಿರು ನಿಶಾನೆಯನ್ನು ಮೋದಿ ತೋರಿಸಿದ್ದರು. ಇನ್ನು, ಈಗಾಗಲೇ ಗುಜರಾತ್ನ ಗಾಂಧಿ ನಗರ ಮತ್ತು ಮಹಾರಾಷ್ಟ್ರದ ಮುಂಬೈ ಹಾಗೂ ವಾರಾಣಸಿ ಹಾಗೂ ದೆಹಲಿ ನಡುವೆ ಸೆಮಿ ಹೈಸ್ಪೀಡ್ ರೈಲು ಸಂಚರಿಸುತ್ತಿದೆ.
ಮೈಸೂರು : ದೇಶ-ವಿದೇಶದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾದ ಅರಮನೆಯ ಜಯಮಾರ್ತಾಂಡ ಬಳಿ ಸಂಭವಿಸಿದ ಹೀಲಿಯಂ…
ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…
ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…
ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್ಗೆ ಗ್ಯಾಸ್ ತುಂಬುವಾಗ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು…
ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…