ನವದೆಹಲಿ: ದಕ್ಷಿಣ ಭಾರತದಲ್ಲೂ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರ ಆರಂಭಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಚೆನ್ನೈ, ಬೆಂಗಳೂರು ಹಾಗೂ ಮೈಸೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಶೀಘ್ರವೇ ಆರಂಭವಾಗಲಿದೆ.
ಈಗಾಗಲೇ ದೇಶದಲ್ಲಿ ನಾಲ್ಕು ಕಡೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರ ಆರಂಭಿಸಿವೆ. ಇದೀಗ ಐದನೇ ರೈಲನ್ನು ದಕ್ಷಿಣ ಭಾರತದ ಪ್ರಮುಖ ನಗರಗಳಾದ ಚೆನ್ನೈ, ಬೆಂಗಳೂರು ಹಾಗೂ ಮೈಸೂರು ಮಧ್ಯೆ ಪ್ರಾರಂಭಿಸಲು ಯೋಜಿಸಲಾಗಿದೆ. ಇದೇ ನವೆಂಬರ್ 10ರಂದು ಈ ಮೂರು ನಗರಗಳನ್ನು ಸಂದಿಸುವ ರೈಲು ಆರಂಭವಾಗುವ ನಿರೀಕ್ಷೆ ಇದೆ.
ಇತೀಚಿಗಷ್ಟೆ ಪ್ರಧಾನಿ ನರೇಂದ್ರ ಮೋದಿ ದೇಶದ ನಾಲ್ಕನೇ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ ನೀಡಿದ್ದರು. ಹಿಮಾಚಲ ಪ್ರದೇಶದ ಉನಾ ಹಾಗೂ ದೆಹಲಿ ಮಧ್ಯೆ ಈ ರೈಲಿಗೆ ಹಸಿರು ನಿಶಾನೆಯನ್ನು ಮೋದಿ ತೋರಿಸಿದ್ದರು. ಇನ್ನು, ಈಗಾಗಲೇ ಗುಜರಾತ್ನ ಗಾಂಧಿ ನಗರ ಮತ್ತು ಮಹಾರಾಷ್ಟ್ರದ ಮುಂಬೈ ಹಾಗೂ ವಾರಾಣಸಿ ಹಾಗೂ ದೆಹಲಿ ನಡುವೆ ಸೆಮಿ ಹೈಸ್ಪೀಡ್ ರೈಲು ಸಂಚರಿಸುತ್ತಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…