ಜಿಲ್ಲೆಗಳು

ಮೈಸೂರು ಜೆಎಸ್‌ಎಸ್‌ ಆಸ್ಪತ್ರೆ : ಪ್ರಸವಾನಂತರ ರಕ್ತಸ್ರಾವ ಕುರಿತು ಕಾರ್ಯಾಗಾರ

ಮೈಸೂರು : ನಗರದ ಜೆಎಸ್‌ ಎಸ್‌ ಆಸ್ಪತ್ರೆಯಲ್ಲಿ ಪ್ರಸೂತಿ ಮತಯ್ತು ಸ್ತ್ರೀ ರೋಗ ವಿಭಾಗದೆ ವತಿಯಿಂದ ಪ್ರಸವಾನಂತರದ ರಕ್ತಸ್ರಾವ ( NDVH+PPH)  ಎಂಬ ವಿಷಯದ ಕುರಿತು ಕಾರ್ಯಾಗಾರವನ್ನು ನಡೆಸಲಾಗಿತು.

ಕಾರ್ಯಾಗಾರದ ಉದ್ಘಾಟನೆ

ಆಸ್ಪತ್ರೆಯ ರಾಜೇಂದ್ರ ಶತಮಾನೋತ್ಸವ ಸಭಾಂಗಣದಲ್ಲಿ ಪ್ರಸೂತಿ ಮತ್ತು ಸ್ತ್ರೀ ರೋಗ ವಿಭಾಗ ಹಾಗೂ ಮೈಸೂರು ಮತ್ತು ಸ್ರ್ತೀ  ರೋಗ ಸಮಾಜದ ಸಹಯೋಗದೊಂದಿಗೆ ಪ್ರಸವಾನಂತರದ ರಕ್ತಸ್ರಾವ ( NDVH+PPH)  ಎಂಬ ವಿಷಯದ ಕುರಿತು ಕಾರ್ಯಾಗಾರವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮದಲ್ಲಿ ಹೆರಿಗೆಯ ನಂತರ ಗರ್ಭಿಣಿಯರ ಜೀವಕ್ಕೆ ಅಪಾಯಕಾರಿಯಾಗುವ ಅಂಶಗಳು ಮತ್ತು ತೊಂದರೆಗಳು ಹಾಗೂ ಪ್ರಸವಾನಂತರದ ರಕ್ತಸ್ರಾವವನ್ನು ನಿರ್ವಹಿಸುವ ತಂತ್ರಗಳನ್ನು ಸುಧಾರಿಸುವ ಕುರಿತು ತರಬೇತಿಯನ್ನು  ನೀಡಲಾಯಿತು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಡಾ. ಆಶಿಶ್‌ಕುಬ್ಡೆ, ಪ್ರಖ್ಯಾತ ಸ್ತ್ರೀ ರೋಗ  ತಜ್ಞರು ಹಾಗೂ ಲ್ಯಾಪ್ರೋಸ್ಕೋಪಿಕ್‌ / ಮಲ್ಟೀ ಸರ್ಜನ್‌ ಪೆಲ್ಟಿಕ್‌ ಸರ್ಜನ್‌, ಸೆವೆನ್‌ ಸ್ಟಾರ್‌ ಆಸ್ಪತ್ರೆ, ನಾಗ್ಪುರ ಮತ್ತು ಡಾ.ವೀರೇಂದ್ರಕುಮಾರ್‌, ಘಟಕದ ಮುಖ್ಯಸ್ಥರು ಸೇರಿದಂತೆ ಡಾ.ಜಯಪ್ರಕಾಶ್‌ ಪಾಟೀಲ್‌, ಲ್ಯಾಪ್ರೋಸ್ಕೋಪಿಕ್‌ ಮತ್ತು ಪೆಲ್ಟಿಕ್‌ ಸರ್ಜನ್‌, ಬೆಟ್ಟದೂರು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ರಾಯಚೂರು ಇವರುಗಳು ಕಾರ್ಯಾಗಾರದಲ್ಲಿ ವಿವಿಧ ಅಂಶಗಳ ಕುರಿತು ಕಾರ್ಯಾಗಾರದಲ್ಲಿ ನೆರೆದಿದ್ದವರಿಗೆ  ತರಬೇತಿ ನೀಡಿದರು.

ಕಾರ್ಯಾಗಾರದ ಮುಖ್ಯ ಅತಿಥಿಗಳಾಗಿ ವೈದ್ಯಕೀಯ ಅಧೀಕ್ಷಕರಾದ ಡಾ.ಸಿ.ಪಿ. ಮಧು, ವಿಶೇಷ ಆಹ್ವಾನಿತರಾಗಿ ಜೆಎಸ್‌ಎಸ್‌ ಮೆಡಿಕಲ್‌ ಕಾಲೇಜಿನ ಉಪ ಪ್ರಾಂಶುಪಾಲರಾದ  ಡಾ. ಸುಮಾ, ಉಪನಿರ್ದೇಶಕರಾದ ಮಂಜುನಾಥ್‌ ಇನ್ನಿತರರು ಉಪಸ್ಥಿತರಿದ್ದರು. 

ಕಾರ್ಯಾಗಾರಕ್ಕೆ ಮೈಸೂರು, ಮಂಡ್ಯ, ಮಡಿಕೇರಿ, ಕೊಳ್ಳೆಗಾಲ ಸೇರಿದಂತೆ ಆದಿಚುಂಚನಗಿರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಿಂದ ಸ್ತ್ರೀರೋಗ ತಜ್ಞರನ್ನು ಒಳಗೊಂಡ ಸುಮಾರು 125 ನೋಂದಾಯಿತ ಪ್ರತಿನಿಧಿಗಳು ಭಾಗವಹಿಸಿದ್ದರು.

andolanait

Recent Posts

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…

4 hours ago

ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…

4 hours ago

ಉನ್ನಾವೊ ಪ್ರಕರಣ : ಸೆಂಗರ್‌ ಶಿಕ್ಷೆ ಅಮಾನತು ; ಸಂತ್ರಸ್ತೆ ತಾಯಿ ಹೇಳಿದಿಷ್ಟು?

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…

4 hours ago

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…

5 hours ago

ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…

5 hours ago

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ; ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…

5 hours ago