ಜಿಲ್ಲೆಗಳು

ಮೈಸೂರು ಜೆಎಸ್‌ಎಸ್‌ ಆಸ್ಪತ್ರೆ : ಪ್ರಸವಾನಂತರ ರಕ್ತಸ್ರಾವ ಕುರಿತು ಕಾರ್ಯಾಗಾರ

ಮೈಸೂರು : ನಗರದ ಜೆಎಸ್‌ ಎಸ್‌ ಆಸ್ಪತ್ರೆಯಲ್ಲಿ ಪ್ರಸೂತಿ ಮತಯ್ತು ಸ್ತ್ರೀ ರೋಗ ವಿಭಾಗದೆ ವತಿಯಿಂದ ಪ್ರಸವಾನಂತರದ ರಕ್ತಸ್ರಾವ ( NDVH+PPH)  ಎಂಬ ವಿಷಯದ ಕುರಿತು ಕಾರ್ಯಾಗಾರವನ್ನು ನಡೆಸಲಾಗಿತು.

ಕಾರ್ಯಾಗಾರದ ಉದ್ಘಾಟನೆ

ಆಸ್ಪತ್ರೆಯ ರಾಜೇಂದ್ರ ಶತಮಾನೋತ್ಸವ ಸಭಾಂಗಣದಲ್ಲಿ ಪ್ರಸೂತಿ ಮತ್ತು ಸ್ತ್ರೀ ರೋಗ ವಿಭಾಗ ಹಾಗೂ ಮೈಸೂರು ಮತ್ತು ಸ್ರ್ತೀ  ರೋಗ ಸಮಾಜದ ಸಹಯೋಗದೊಂದಿಗೆ ಪ್ರಸವಾನಂತರದ ರಕ್ತಸ್ರಾವ ( NDVH+PPH)  ಎಂಬ ವಿಷಯದ ಕುರಿತು ಕಾರ್ಯಾಗಾರವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮದಲ್ಲಿ ಹೆರಿಗೆಯ ನಂತರ ಗರ್ಭಿಣಿಯರ ಜೀವಕ್ಕೆ ಅಪಾಯಕಾರಿಯಾಗುವ ಅಂಶಗಳು ಮತ್ತು ತೊಂದರೆಗಳು ಹಾಗೂ ಪ್ರಸವಾನಂತರದ ರಕ್ತಸ್ರಾವವನ್ನು ನಿರ್ವಹಿಸುವ ತಂತ್ರಗಳನ್ನು ಸುಧಾರಿಸುವ ಕುರಿತು ತರಬೇತಿಯನ್ನು  ನೀಡಲಾಯಿತು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಡಾ. ಆಶಿಶ್‌ಕುಬ್ಡೆ, ಪ್ರಖ್ಯಾತ ಸ್ತ್ರೀ ರೋಗ  ತಜ್ಞರು ಹಾಗೂ ಲ್ಯಾಪ್ರೋಸ್ಕೋಪಿಕ್‌ / ಮಲ್ಟೀ ಸರ್ಜನ್‌ ಪೆಲ್ಟಿಕ್‌ ಸರ್ಜನ್‌, ಸೆವೆನ್‌ ಸ್ಟಾರ್‌ ಆಸ್ಪತ್ರೆ, ನಾಗ್ಪುರ ಮತ್ತು ಡಾ.ವೀರೇಂದ್ರಕುಮಾರ್‌, ಘಟಕದ ಮುಖ್ಯಸ್ಥರು ಸೇರಿದಂತೆ ಡಾ.ಜಯಪ್ರಕಾಶ್‌ ಪಾಟೀಲ್‌, ಲ್ಯಾಪ್ರೋಸ್ಕೋಪಿಕ್‌ ಮತ್ತು ಪೆಲ್ಟಿಕ್‌ ಸರ್ಜನ್‌, ಬೆಟ್ಟದೂರು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ರಾಯಚೂರು ಇವರುಗಳು ಕಾರ್ಯಾಗಾರದಲ್ಲಿ ವಿವಿಧ ಅಂಶಗಳ ಕುರಿತು ಕಾರ್ಯಾಗಾರದಲ್ಲಿ ನೆರೆದಿದ್ದವರಿಗೆ  ತರಬೇತಿ ನೀಡಿದರು.

ಕಾರ್ಯಾಗಾರದ ಮುಖ್ಯ ಅತಿಥಿಗಳಾಗಿ ವೈದ್ಯಕೀಯ ಅಧೀಕ್ಷಕರಾದ ಡಾ.ಸಿ.ಪಿ. ಮಧು, ವಿಶೇಷ ಆಹ್ವಾನಿತರಾಗಿ ಜೆಎಸ್‌ಎಸ್‌ ಮೆಡಿಕಲ್‌ ಕಾಲೇಜಿನ ಉಪ ಪ್ರಾಂಶುಪಾಲರಾದ  ಡಾ. ಸುಮಾ, ಉಪನಿರ್ದೇಶಕರಾದ ಮಂಜುನಾಥ್‌ ಇನ್ನಿತರರು ಉಪಸ್ಥಿತರಿದ್ದರು. 

ಕಾರ್ಯಾಗಾರಕ್ಕೆ ಮೈಸೂರು, ಮಂಡ್ಯ, ಮಡಿಕೇರಿ, ಕೊಳ್ಳೆಗಾಲ ಸೇರಿದಂತೆ ಆದಿಚುಂಚನಗಿರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಿಂದ ಸ್ತ್ರೀರೋಗ ತಜ್ಞರನ್ನು ಒಳಗೊಂಡ ಸುಮಾರು 125 ನೋಂದಾಯಿತ ಪ್ರತಿನಿಧಿಗಳು ಭಾಗವಹಿಸಿದ್ದರು.

andolanait

Recent Posts

ಹುಣಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…

1 hour ago

ಹನೂರು| ಕೆಸರಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆ ಫಲಿಸದೇ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…

1 hour ago

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…

3 hours ago

24 ಗಂಟೆಯ ಒಳಗಡೆ ಉತ್ತರಿಸಿ: ಮಲ್ಲಿಕಾರ್ಜುನ ಖರ್ಗೆಗೆ ಆಯೋಗ ನೋಟಿಸ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…

3 hours ago

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…

4 hours ago

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್‌ ಆದೇಶ

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…

5 hours ago