ಜಿಲ್ಲೆಗಳು

ಮೈಸೂರು ಜೆಎಸ್‌ಎಸ್‌ ಆಸ್ಪತ್ರೆ : ಪ್ರಸವಾನಂತರ ರಕ್ತಸ್ರಾವ ಕುರಿತು ಕಾರ್ಯಾಗಾರ

ಮೈಸೂರು : ನಗರದ ಜೆಎಸ್‌ ಎಸ್‌ ಆಸ್ಪತ್ರೆಯಲ್ಲಿ ಪ್ರಸೂತಿ ಮತಯ್ತು ಸ್ತ್ರೀ ರೋಗ ವಿಭಾಗದೆ ವತಿಯಿಂದ ಪ್ರಸವಾನಂತರದ ರಕ್ತಸ್ರಾವ ( NDVH+PPH)  ಎಂಬ ವಿಷಯದ ಕುರಿತು ಕಾರ್ಯಾಗಾರವನ್ನು ನಡೆಸಲಾಗಿತು.

ಕಾರ್ಯಾಗಾರದ ಉದ್ಘಾಟನೆ

ಆಸ್ಪತ್ರೆಯ ರಾಜೇಂದ್ರ ಶತಮಾನೋತ್ಸವ ಸಭಾಂಗಣದಲ್ಲಿ ಪ್ರಸೂತಿ ಮತ್ತು ಸ್ತ್ರೀ ರೋಗ ವಿಭಾಗ ಹಾಗೂ ಮೈಸೂರು ಮತ್ತು ಸ್ರ್ತೀ  ರೋಗ ಸಮಾಜದ ಸಹಯೋಗದೊಂದಿಗೆ ಪ್ರಸವಾನಂತರದ ರಕ್ತಸ್ರಾವ ( NDVH+PPH)  ಎಂಬ ವಿಷಯದ ಕುರಿತು ಕಾರ್ಯಾಗಾರವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮದಲ್ಲಿ ಹೆರಿಗೆಯ ನಂತರ ಗರ್ಭಿಣಿಯರ ಜೀವಕ್ಕೆ ಅಪಾಯಕಾರಿಯಾಗುವ ಅಂಶಗಳು ಮತ್ತು ತೊಂದರೆಗಳು ಹಾಗೂ ಪ್ರಸವಾನಂತರದ ರಕ್ತಸ್ರಾವವನ್ನು ನಿರ್ವಹಿಸುವ ತಂತ್ರಗಳನ್ನು ಸುಧಾರಿಸುವ ಕುರಿತು ತರಬೇತಿಯನ್ನು  ನೀಡಲಾಯಿತು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಡಾ. ಆಶಿಶ್‌ಕುಬ್ಡೆ, ಪ್ರಖ್ಯಾತ ಸ್ತ್ರೀ ರೋಗ  ತಜ್ಞರು ಹಾಗೂ ಲ್ಯಾಪ್ರೋಸ್ಕೋಪಿಕ್‌ / ಮಲ್ಟೀ ಸರ್ಜನ್‌ ಪೆಲ್ಟಿಕ್‌ ಸರ್ಜನ್‌, ಸೆವೆನ್‌ ಸ್ಟಾರ್‌ ಆಸ್ಪತ್ರೆ, ನಾಗ್ಪುರ ಮತ್ತು ಡಾ.ವೀರೇಂದ್ರಕುಮಾರ್‌, ಘಟಕದ ಮುಖ್ಯಸ್ಥರು ಸೇರಿದಂತೆ ಡಾ.ಜಯಪ್ರಕಾಶ್‌ ಪಾಟೀಲ್‌, ಲ್ಯಾಪ್ರೋಸ್ಕೋಪಿಕ್‌ ಮತ್ತು ಪೆಲ್ಟಿಕ್‌ ಸರ್ಜನ್‌, ಬೆಟ್ಟದೂರು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ರಾಯಚೂರು ಇವರುಗಳು ಕಾರ್ಯಾಗಾರದಲ್ಲಿ ವಿವಿಧ ಅಂಶಗಳ ಕುರಿತು ಕಾರ್ಯಾಗಾರದಲ್ಲಿ ನೆರೆದಿದ್ದವರಿಗೆ  ತರಬೇತಿ ನೀಡಿದರು.

ಕಾರ್ಯಾಗಾರದ ಮುಖ್ಯ ಅತಿಥಿಗಳಾಗಿ ವೈದ್ಯಕೀಯ ಅಧೀಕ್ಷಕರಾದ ಡಾ.ಸಿ.ಪಿ. ಮಧು, ವಿಶೇಷ ಆಹ್ವಾನಿತರಾಗಿ ಜೆಎಸ್‌ಎಸ್‌ ಮೆಡಿಕಲ್‌ ಕಾಲೇಜಿನ ಉಪ ಪ್ರಾಂಶುಪಾಲರಾದ  ಡಾ. ಸುಮಾ, ಉಪನಿರ್ದೇಶಕರಾದ ಮಂಜುನಾಥ್‌ ಇನ್ನಿತರರು ಉಪಸ್ಥಿತರಿದ್ದರು. 

ಕಾರ್ಯಾಗಾರಕ್ಕೆ ಮೈಸೂರು, ಮಂಡ್ಯ, ಮಡಿಕೇರಿ, ಕೊಳ್ಳೆಗಾಲ ಸೇರಿದಂತೆ ಆದಿಚುಂಚನಗಿರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಿಂದ ಸ್ತ್ರೀರೋಗ ತಜ್ಞರನ್ನು ಒಳಗೊಂಡ ಸುಮಾರು 125 ನೋಂದಾಯಿತ ಪ್ರತಿನಿಧಿಗಳು ಭಾಗವಹಿಸಿದ್ದರು.

andolanait

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

11 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

11 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

12 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

12 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

13 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

14 hours ago