ಜಿಲ್ಲೆಗಳು

ಮೈಸೂರು ಜೆಎಸ್‌ಎಸ್‌ ಆಸ್ಪತ್ರೆ : ಪ್ರಸವಾನಂತರ ರಕ್ತಸ್ರಾವ ಕುರಿತು ಕಾರ್ಯಾಗಾರ

ಮೈಸೂರು : ನಗರದ ಜೆಎಸ್‌ ಎಸ್‌ ಆಸ್ಪತ್ರೆಯಲ್ಲಿ ಪ್ರಸೂತಿ ಮತಯ್ತು ಸ್ತ್ರೀ ರೋಗ ವಿಭಾಗದೆ ವತಿಯಿಂದ ಪ್ರಸವಾನಂತರದ ರಕ್ತಸ್ರಾವ ( NDVH+PPH)  ಎಂಬ ವಿಷಯದ ಕುರಿತು ಕಾರ್ಯಾಗಾರವನ್ನು ನಡೆಸಲಾಗಿತು.

ಕಾರ್ಯಾಗಾರದ ಉದ್ಘಾಟನೆ

ಆಸ್ಪತ್ರೆಯ ರಾಜೇಂದ್ರ ಶತಮಾನೋತ್ಸವ ಸಭಾಂಗಣದಲ್ಲಿ ಪ್ರಸೂತಿ ಮತ್ತು ಸ್ತ್ರೀ ರೋಗ ವಿಭಾಗ ಹಾಗೂ ಮೈಸೂರು ಮತ್ತು ಸ್ರ್ತೀ  ರೋಗ ಸಮಾಜದ ಸಹಯೋಗದೊಂದಿಗೆ ಪ್ರಸವಾನಂತರದ ರಕ್ತಸ್ರಾವ ( NDVH+PPH)  ಎಂಬ ವಿಷಯದ ಕುರಿತು ಕಾರ್ಯಾಗಾರವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮದಲ್ಲಿ ಹೆರಿಗೆಯ ನಂತರ ಗರ್ಭಿಣಿಯರ ಜೀವಕ್ಕೆ ಅಪಾಯಕಾರಿಯಾಗುವ ಅಂಶಗಳು ಮತ್ತು ತೊಂದರೆಗಳು ಹಾಗೂ ಪ್ರಸವಾನಂತರದ ರಕ್ತಸ್ರಾವವನ್ನು ನಿರ್ವಹಿಸುವ ತಂತ್ರಗಳನ್ನು ಸುಧಾರಿಸುವ ಕುರಿತು ತರಬೇತಿಯನ್ನು  ನೀಡಲಾಯಿತು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಡಾ. ಆಶಿಶ್‌ಕುಬ್ಡೆ, ಪ್ರಖ್ಯಾತ ಸ್ತ್ರೀ ರೋಗ  ತಜ್ಞರು ಹಾಗೂ ಲ್ಯಾಪ್ರೋಸ್ಕೋಪಿಕ್‌ / ಮಲ್ಟೀ ಸರ್ಜನ್‌ ಪೆಲ್ಟಿಕ್‌ ಸರ್ಜನ್‌, ಸೆವೆನ್‌ ಸ್ಟಾರ್‌ ಆಸ್ಪತ್ರೆ, ನಾಗ್ಪುರ ಮತ್ತು ಡಾ.ವೀರೇಂದ್ರಕುಮಾರ್‌, ಘಟಕದ ಮುಖ್ಯಸ್ಥರು ಸೇರಿದಂತೆ ಡಾ.ಜಯಪ್ರಕಾಶ್‌ ಪಾಟೀಲ್‌, ಲ್ಯಾಪ್ರೋಸ್ಕೋಪಿಕ್‌ ಮತ್ತು ಪೆಲ್ಟಿಕ್‌ ಸರ್ಜನ್‌, ಬೆಟ್ಟದೂರು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ರಾಯಚೂರು ಇವರುಗಳು ಕಾರ್ಯಾಗಾರದಲ್ಲಿ ವಿವಿಧ ಅಂಶಗಳ ಕುರಿತು ಕಾರ್ಯಾಗಾರದಲ್ಲಿ ನೆರೆದಿದ್ದವರಿಗೆ  ತರಬೇತಿ ನೀಡಿದರು.

ಕಾರ್ಯಾಗಾರದ ಮುಖ್ಯ ಅತಿಥಿಗಳಾಗಿ ವೈದ್ಯಕೀಯ ಅಧೀಕ್ಷಕರಾದ ಡಾ.ಸಿ.ಪಿ. ಮಧು, ವಿಶೇಷ ಆಹ್ವಾನಿತರಾಗಿ ಜೆಎಸ್‌ಎಸ್‌ ಮೆಡಿಕಲ್‌ ಕಾಲೇಜಿನ ಉಪ ಪ್ರಾಂಶುಪಾಲರಾದ  ಡಾ. ಸುಮಾ, ಉಪನಿರ್ದೇಶಕರಾದ ಮಂಜುನಾಥ್‌ ಇನ್ನಿತರರು ಉಪಸ್ಥಿತರಿದ್ದರು. 

ಕಾರ್ಯಾಗಾರಕ್ಕೆ ಮೈಸೂರು, ಮಂಡ್ಯ, ಮಡಿಕೇರಿ, ಕೊಳ್ಳೆಗಾಲ ಸೇರಿದಂತೆ ಆದಿಚುಂಚನಗಿರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಿಂದ ಸ್ತ್ರೀರೋಗ ತಜ್ಞರನ್ನು ಒಳಗೊಂಡ ಸುಮಾರು 125 ನೋಂದಾಯಿತ ಪ್ರತಿನಿಧಿಗಳು ಭಾಗವಹಿಸಿದ್ದರು.

andolanait

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

8 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

13 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

17 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

17 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

17 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

20 hours ago