ತಿ.ನರಸೀಪುರ (ಮೈಸೂರು): ತಾಲ್ಲೂಕಿನ ಮುಸುವಿನಕೊಪ್ಪಲು ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಗುರುವಾರ ರಾತ್ರಿ ಎರಡು ಚಿರತೆಗಳು ಸೆರೆಯಾಗಿವೆ.
ವಾರದ ಹಿಂದಷ್ಟೇ ಜಮೀನಿನಲ್ಲಿ ಮೇಯುತ್ತಿದ್ದ ಮೇಕೆ ಮೇಲೆ ದಾಳಿ ನಡೆಸಿದ್ದ ಚಿರತೆಯು ಕೊಂದು ಹಾಕಿತ್ತು. ಈ ಹಿನ್ನೆಲೆಯಲ್ಲಿ ಇಲಾಖೆಯು ಬೋನು ಇರಿಸಿತ್ತು. ತಾಯಿ ಚಿರತೆ ಹಾಗೂ ಮರಿ ಚಿರತೆ ಬಿದ್ದಿವೆ.
ಶುಕ್ರವಾರ ಬೆಳಿಗ್ಗೆ ವಿಷಯ ತಿಳಿಯುತ್ತಿದ್ದಂತೆ ಸುತ್ತಮುತ್ತಲ ಗ್ರಾಮಸ್ಥರು ಚಿರತೆ ನೋಡಲು ಜಮಾಯಿಸಿದ್ದರು. ಡಿಸಿಎಫ್ ಡಾ.ಬಸವರಾಜು, ಎಸಿಎಫ್ ಲಕ್ಷ್ಮಿಕಾಂತ್, ಆರ್ ಎಫ್ಒ ಸೈಯದ್ ನದೀಮ್, ಡಿಆರ್ ಎಫ್ ಒ ಮಂಜುನಾಥ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಮೈಸೂರಿನ ಅರಣ್ಯ ಭವನಕ್ಕೆ ಒಯ್ಯಲಾಗಿದ್ದು, ಅರಣ್ಯ ಪ್ರದೇಶಕ್ಕೆ ಬಿಡಲು ಕ್ರಮವಹಿಸಲಾಗುವುದು ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…