ಜಿಲ್ಲೆಗಳು

ತಿ.ನರಸೀಪುರ: ಬೋನಿಗೆ ಬಿದ್ದ ಎರಡು ಚಿರತೆಗಳು

ತಿ.ನರಸೀಪುರ (ಮೈಸೂರು):  ತಾಲ್ಲೂಕಿನ ಮುಸುವಿನಕೊಪ್ಪಲು‌ ಗ್ರಾಮದಲ್ಲಿ‌ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಗುರುವಾರ ರಾತ್ರಿ ಎರಡು ಚಿರತೆಗಳು ಸೆರೆಯಾಗಿವೆ. 

ವಾರದ ಹಿಂದಷ್ಟೇ ಜಮೀನಿನಲ್ಲಿ ಮೇಯುತ್ತಿದ್ದ ಮೇಕೆ‌ ಮೇಲೆ ದಾಳಿ ನಡೆಸಿದ್ದ ಚಿರತೆಯು ಕೊಂದು ಹಾಕಿತ್ತು. ಈ ಹಿನ್ನೆಲೆಯಲ್ಲಿ ಇಲಾಖೆಯು ಬೋನು ಇರಿಸಿತ್ತು. ತಾಯಿ ಚಿರತೆ ಹಾಗೂ ಮರಿ ಚಿರತೆ ಬಿದ್ದಿವೆ‌.

ಶುಕ್ರವಾರ ಬೆಳಿಗ್ಗೆ  ವಿಷಯ ತಿಳಿಯುತ್ತಿದ್ದಂತೆ ಸುತ್ತಮುತ್ತಲ ಗ್ರಾಮಸ್ಥರು ಚಿರತೆ ನೋಡಲು ಜಮಾಯಿಸಿದ್ದರು. ಡಿಸಿಎಫ್ ಡಾ.ಬಸವರಾಜು, ಎಸಿಎಫ್ ಲಕ್ಷ್ಮಿಕಾಂತ್, ಆರ್ ಎಫ್ಒ ಸೈಯದ್ ನದೀಮ್, ಡಿಆರ್ ಎಫ್ ಒ ಮಂಜುನಾಥ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು‌. ಮೈಸೂರಿನ ಅರಣ್ಯ ಭವನಕ್ಕೆ ಒಯ್ಯಲಾಗಿದ್ದು, ಅರಣ್ಯ ಪ್ರದೇಶಕ್ಕೆ ಬಿಡಲು ಕ್ರಮವಹಿಸಲಾಗುವುದು ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

andolanait

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

10 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

3 hours ago

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

15 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

16 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

17 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

18 hours ago