ಜಿಲ್ಲೆಗಳು

ಮೈಸೂರು ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ; ಹಣ, ಗಾಂಜಾ ವಶ

ಮೈಸೂರು: ಮೈಸೂರಿನ ಕೇಂದ್ರ ಕಾರಾಗೃಹದ ಮೇಲೆ ನಗರ ಪೊಲೀಸರು ದಿಢೀರ್​ ದಾಳಿ ನಡೆಸಿದ್ದು, ಕೈದಿಗಳಿಂದ ಮೊಬೈಲ್, ಹಣ, ಗಾಂಜಾ, ಚಾಕು ಕತ್ತರಿ ಮತ್ತು ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕಾರ್ಯಚರಣೆಯ ನೇತೃತ್ವ ವಹಿಸಿದ್ದ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಡಿಸಿಪಿಗಳಾದ ಎಂ. ಮುತ್ತುರಾಜು, ಎಸ್. ಜಾಹ್ನವಿರವರು ತಂಡ ರಚಿಸಿ ಎಲ್ಲಾ ವಿಭಾಗದ ಎಸಿಪಿ, ಇನ್ಸ್‌ಪೆಕ್ಟರ್‌ಗಳು, ಎಸ್‌ಐಗಳು, ಕಮಾಂಡೋ ಪಡೆ, ಮಾದಕ ವಸ್ತು ಪತ್ತೆ ಹಚ್ಚುವ ಶ್ವಾನ ದಳದೊಂದಿಗೆ ಮೈಸೂರಿನ ಕೇಂದ್ರ ಕಾರಾಗೃಹದ ಮೇಲೆ ಏಕಾಏಕಿ ದಾಳಿ ನಡೆಸಿದರು.ದಾಳಿ ನಡೆಸಿದ ಪೊಲೀಸರಿಗೆ ಅಚ್ಚರಿಯೇ ಕಾದಿತ್ತು. ತಮ್ಮ ಅಪರಾಧದಿಂದ ಕಾನೂನಿ ಚೌಕಟ್ಟಿನ ಒಳಗೆ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳಲ್ಲಿ ನಿಯಮ ಮೀರಿ ಅವರ ಬಳಿ 15 ಸಾವಿರ ಹಣ, 5 ಮೊಬೈಲ್ ಫೋನ್‌ಗಳು, 20 ಗ್ರಾಂ ಗಾಂಜಾ, ಚಾಕು ಕತ್ತರಿ ಹಾಗೂ ಸ್ಪೂನ್‌ಗಳಿಂದ ಮಾಡಿದ ಆಯುಧಗಳು ದೊರಕಿದ್ದು ಎಲ್ಲವನ್ನು ಪೊಲೀಸರು ವಶಪಡಿಸಿಕೊಂಡರು. ಅಲ್ಲದೆ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಅಲ್ಲಿಯ ಕಾರಾಗೃಹದ ಮುಖ್ಯ ಅಧೀಕ್ಷಕಿ ಕೆ.ಸಿ. ದಿವ್ಯಶ್ರೀ ಹಾಗೂ ಇತರೆ ಅಧಿಕಾರಿಗಳು ಇದ್ದರು.

ಈ ಕುರಿತು ಮಾಧ್ಯಮಗಳೊಂದಿಗೆ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರು ಪ್ರತಿಕ್ರಿಯಿಸಿ , ಮೈಸೂರು ಕೇಂದ್ರ ಕಾರಾಗೃಹದ ಹಿಂಭಾಗದಲ್ಲಿರುವ ಸ್ಮಶಾನದ ಕಡೆಯಿಂದ ಕಾರಾಗೃಹದ ಆವರಣದೊಳಕ್ಕೆ ಗಾಂಜಾ ಸೇರಿದಂತೆ ಇನ್ನಿತರ ವಸ್ತುಗಳನ್ನು ಎಸೆಯಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಕೂಲಂಕಷವಾಗಿ ಪರಿಶೀಲನೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಕಾರಾಗೃಹದ ಸಿಬ್ಬಂದಿ ಏನಾದರೂ ಶಾಮೀಲಾಗಿದ್ದಾರೆಯೇ ಎಂಬುದರ ಬಗ್ಗೆಯೂ ತನಿಖೆ ಕೈಗೊಳ್ಳಲಾಗಿದೆ ಎಂದು ಹೇಳಿದರು.

andolanait

Recent Posts

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

2 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

2 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

2 hours ago

‘ರಾಮ ರಾಜಕಾರಣಕ್ಕೆ ಅಗ್ನಿ ಪರೀಕ್ಷೆ..!

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…

2 hours ago

ಇದು ಶೌಚಾಲಯ… ಈಗ ಅನುಪಯುಕ್ತ ವಸ್ತುಗಳ ಗೋದಾಮು!

ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…

2 hours ago