ಜಿಲ್ಲೆಗಳು

ಮೈಸೂರಿಗೆ ಬಂದಿದೆ ರಾಷ್ಟ್ರಪತಿ ಭವನ !

ಕುಪ್ಪಣ್ಣ ಪಾರ್ಕ್‌ ಫಲಪುಷ್ಪ ಪ್ರದರ್ಶನದಲ್ಲಿ ಪುನೀತ್‌ ಗೆ ಮರುಜೀವ

ಮೈಸೂರು: ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ದಸರೆಯ ಉದ್ಘಾಟನೆಗಾಗಿ ಅರಮನೆ ನಗರಕ್ಕೆ ಬರುತ್ತಿದ್ದಂತೆ ನಗರದಲ್ಲಿ ರಾಷ್ಟ್ರಪತಿಭವನವೂ ನಿರ್ಮಾಣವಾಗಿದೆ ! ಆದರೆ ಈ ಭವನದ ಸೌಂದರ್ಯವನ್ನು ವೀಕ್ಷಿಸಬಹುದೇ ಹೊರತು ತಂಗಲು ಸಾಧ್ಯವಿಲ್ಲ. ದಸರಾ ಅಂಗವಾಗಿ ನಗರದ ಕುಪ್ಪಣ್ಣ ಗಾರ್ಡನ್‌ನಲ್ಲಿ ‌ ಆಯೋಜನೆ ಮಾಡಲಾಗಿದ್ದ ಫಲಪಷ್ಪ ಪ್ರದರ್ಶನದಲ್ಲಿ ರಾಷ್ಟ್ರಪತಿ ಭವನ ಪ್ರಧಾನ ಆಕರ್ಷಣೆಯಾಗಿದೆ.
ದಸರಾ ಅಂಗವಾಗಿ ನಗರದ ಕುಪ್ಪಣ್ಣ ಗಾರ್ಡನ್‌ನಲ್ಲಿ ‌ಆಯೋಜನೆ ಮಾಡಲಾಗಿದ್ದ ಫಲಪಷ್ಪ ಪ್ರದರ್ಶನವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್‌ ಟಿ ಸೋಮಶೇಖರ್‌ ಅವರು ಸೋಮವಾರ ಉದ್ಘಾಟಿಸಿದರು. ಗಾಜಿನ ಅರಮನೆಯೊಳಗೆ ಅರಳಿರುವ ರಾಷ್ಟ್ರಪತಿ ಭವನ ಮತ್ತು ನಟ ಪುನೀತ್ ರಾಜ್‌ಕುಮಾರ್ ಅವರ ಕಂಚಿನ ಬಣ್ಣದಲ್ಲಿ ನಿರ್ಮಾಣಗೊಂಡಿರುವ ಪ್ರತಿಮೆ ಈ ಬಾರಿಯ ಪ್ರಮುಖ ಆಕರ್ಷಣೆಯಾಗಿದೆ.

7 ಅಡಿಯ ಜೇನುಹುಳು, 12 ಅಡಿಯ ಜಿರಾಫೆ ಹಾಗೂ ಮಕ್ಕಳಿಗೆ ಸಂಬಂಧಿಸಿದ ಹಲವು ಗೊಂಬೆಗಳನ್ನು ಹೂವಿನಿಂದ ಅಲಂಕರಿಸಲಾಗಿದ್ದು ನೋಡುಗರ ಮೈ ಮನಗಳನ್ನು ಪುಳಕಿತಗೊಳಿಸುತ್ತಿದೆ. 7 ಅಡಿ ದಪ್ಪ ಮೆಣಸಿನ ಕಾಯಿಯಿಂದ ನಿರ್ಮಿಸಿದ ಮನೆ ಇತರ ವೈವಿಧ್ಯಮಯ ಹೂವಿನ ಕಲಾಕೃತಿಗಳು ನೋಡುಗರ ಗಮನ ಸೆಳೆಯುತ್ತಿದೆ.

ಇಲಾಖೆಯಿಂದ 50ಸಾವಿರಕ್ಕೂ ಹೆಚ್ಚು ಹೂವಿನ ಗಿಡಗಳನ್ನು ಬೆಳೆದಿದ್ದು ಇಡೀ ಕುಪ್ಪಣ್ಣ ಪಾರ್ಕ್ ಹೂವುಗಳಿಂದ ಅಲಂಕೃತವಾಗಿದೆ. ಪ್ರತಿದಿನ ಸಂಜೆಯ ವೇಳೆ ಅನೇಕ ಮನರಂಜನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಎಲ್.ನಾಗೇಂದ್ರ, ಜಿಲ್ಲಾಧಿಕಾರಿ ಬಗಾದಿ ಗೌತಮ್‌, ಜಿಪಂ ಸಿಇಓ ಪೂರ್ಣಿಮಾ, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್‌ಗೌಡ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ರುದ್ರೇಶ್, ಮೇಯರ್‌ ಶಿವಕುಮಾರ್, ಮೈ.ವಿ.ಶಂಕರ್, ಹಿರಿಯ ಸಹಾಯಕ ನಿರ್ದೇಶರಾದ ಸುವೇಧಾ ಮತ್ತಿತರರು ಹಾಜರಿದ್ದರು.

andolanait

Recent Posts

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

8 mins ago

ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮಕ್ಕೆ ಅಧಿಕಾರಿಗಳ ಗೈರು: ಮುಖಂಡರ ಆಕ್ರೋಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆಯೊಜಿಸಿದ್ದ ಸವಿತ ಮಹರ್ಷಿ ಜಯಂತಿ ಕಾರ್ಯಕ್ರಮಕ್ಕೆ…

25 mins ago

ಗುಂಡ್ಲುಪೇಟೆ-ಕೇರಳ ಹೆದ್ದಾರಿಯಲ್ಲಿ ಹೆಚ್ಚಿದ ಕಳ್ಳರ ಚೈಚಳಕ: ಅಲರ್ಟ್‌ ಆದ ಪೊಲೀಸರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕೇರಳ ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆಕೋರರ ಹಾವಳಿ‌‌ ಮಿತಿ ಮೀರಿರುವ ಹಿನ್ನೆಲೆಯಲ್ಲಿ ಇದಕ್ಕೆ…

31 mins ago

ಇ-ಖಾತಾ ವ್ಯವಸ್ಥೆ ಸಂಪೂರ್ಣ ಗೊಂದಲಮಯ: ಮಾಜಿ ಮೇಯರ್‌ ಶಿವಕುಮಾರ್‌ ಆರೋಪ

ಮೈಸೂರು: ಮಹಾನಗರ ಪಾಲಿಕೆಯಲ್ಲಿ ಇ-ಖಾತಾ ಮಾಡಿಸಲು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮಾಜಿ ಮೇಯರ್‌ ಶಿವಕುಮಾರ್‌ ಕಿಡಿಕಾರಿದರು. ಈ…

41 mins ago

ಲ್ಯಾಂಡ್‌ಲಾರ್ಡ್‌ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಟ ದುನಿಯಾ ವಿಜಯ್‌ ಅಭಿನಯದ ಲ್ಯಾಂಡ್‌ಲಾರ್ಡ್‌ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ…

46 mins ago

ವಿಶೇಷಚೇತನ ಮಕ್ಕಳ ಶಾಲೆಗೆ ವಾಹನ ಹಸ್ತಾಂತರಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಅವರಿಂದು ವಿಶೇಷ ಚೇತನ ಮಕ್ಕಳ ಶಾಲೆಗೆ ವಾಹನ ಹಸ್ತಾಂತರಿಸಿದರು. ಮಂಡ್ಯದ…

48 mins ago