ಕುಪ್ಪಣ್ಣ ಪಾರ್ಕ್ ಫಲಪುಷ್ಪ ಪ್ರದರ್ಶನದಲ್ಲಿ ಪುನೀತ್ ಗೆ ಮರುಜೀವ
ಮೈಸೂರು: ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ದಸರೆಯ ಉದ್ಘಾಟನೆಗಾಗಿ ಅರಮನೆ ನಗರಕ್ಕೆ ಬರುತ್ತಿದ್ದಂತೆ ನಗರದಲ್ಲಿ ರಾಷ್ಟ್ರಪತಿಭವನವೂ ನಿರ್ಮಾಣವಾಗಿದೆ ! ಆದರೆ ಈ ಭವನದ ಸೌಂದರ್ಯವನ್ನು ವೀಕ್ಷಿಸಬಹುದೇ ಹೊರತು ತಂಗಲು ಸಾಧ್ಯವಿಲ್ಲ. ದಸರಾ ಅಂಗವಾಗಿ ನಗರದ ಕುಪ್ಪಣ್ಣ ಗಾರ್ಡನ್ನಲ್ಲಿ ಆಯೋಜನೆ ಮಾಡಲಾಗಿದ್ದ ಫಲಪಷ್ಪ ಪ್ರದರ್ಶನದಲ್ಲಿ ರಾಷ್ಟ್ರಪತಿ ಭವನ ಪ್ರಧಾನ ಆಕರ್ಷಣೆಯಾಗಿದೆ.
7 ಅಡಿಯ ಜೇನುಹುಳು, 12 ಅಡಿಯ ಜಿರಾಫೆ ಹಾಗೂ ಮಕ್ಕಳಿಗೆ ಸಂಬಂಧಿಸಿದ ಹಲವು ಗೊಂಬೆಗಳನ್ನು ಹೂವಿನಿಂದ ಅಲಂಕರಿಸಲಾಗಿದ್ದು ನೋಡುಗರ ಮೈ ಮನಗಳನ್ನು ಪುಳಕಿತಗೊಳಿಸುತ್ತಿದೆ. 7 ಅಡಿ ದಪ್ಪ ಮೆಣಸಿನ ಕಾಯಿಯಿಂದ ನಿರ್ಮಿಸಿದ ಮನೆ ಇತರ ವೈವಿಧ್ಯಮಯ ಹೂವಿನ ಕಲಾಕೃತಿಗಳು ನೋಡುಗರ ಗಮನ ಸೆಳೆಯುತ್ತಿದೆ.
ಇಲಾಖೆಯಿಂದ 50ಸಾವಿರಕ್ಕೂ ಹೆಚ್ಚು ಹೂವಿನ ಗಿಡಗಳನ್ನು ಬೆಳೆದಿದ್ದು ಇಡೀ ಕುಪ್ಪಣ್ಣ ಪಾರ್ಕ್ ಹೂವುಗಳಿಂದ ಅಲಂಕೃತವಾಗಿದೆ. ಪ್ರತಿದಿನ ಸಂಜೆಯ ವೇಳೆ ಅನೇಕ ಮನರಂಜನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಎಲ್.ನಾಗೇಂದ್ರ, ಜಿಲ್ಲಾಧಿಕಾರಿ ಬಗಾದಿ ಗೌತಮ್, ಜಿಪಂ ಸಿಇಓ ಪೂರ್ಣಿಮಾ, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್ಗೌಡ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ರುದ್ರೇಶ್, ಮೇಯರ್ ಶಿವಕುಮಾರ್, ಮೈ.ವಿ.ಶಂಕರ್, ಹಿರಿಯ ಸಹಾಯಕ ನಿರ್ದೇಶರಾದ ಸುವೇಧಾ ಮತ್ತಿತರರು ಹಾಜರಿದ್ದರು.
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…