ಜಿಲ್ಲೆಗಳು

ಮೈಸೂರಿಗೆ ಬಂದಿದೆ ರಾಷ್ಟ್ರಪತಿ ಭವನ !

ಕುಪ್ಪಣ್ಣ ಪಾರ್ಕ್‌ ಫಲಪುಷ್ಪ ಪ್ರದರ್ಶನದಲ್ಲಿ ಪುನೀತ್‌ ಗೆ ಮರುಜೀವ

ಮೈಸೂರು: ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ದಸರೆಯ ಉದ್ಘಾಟನೆಗಾಗಿ ಅರಮನೆ ನಗರಕ್ಕೆ ಬರುತ್ತಿದ್ದಂತೆ ನಗರದಲ್ಲಿ ರಾಷ್ಟ್ರಪತಿಭವನವೂ ನಿರ್ಮಾಣವಾಗಿದೆ ! ಆದರೆ ಈ ಭವನದ ಸೌಂದರ್ಯವನ್ನು ವೀಕ್ಷಿಸಬಹುದೇ ಹೊರತು ತಂಗಲು ಸಾಧ್ಯವಿಲ್ಲ. ದಸರಾ ಅಂಗವಾಗಿ ನಗರದ ಕುಪ್ಪಣ್ಣ ಗಾರ್ಡನ್‌ನಲ್ಲಿ ‌ ಆಯೋಜನೆ ಮಾಡಲಾಗಿದ್ದ ಫಲಪಷ್ಪ ಪ್ರದರ್ಶನದಲ್ಲಿ ರಾಷ್ಟ್ರಪತಿ ಭವನ ಪ್ರಧಾನ ಆಕರ್ಷಣೆಯಾಗಿದೆ.
ದಸರಾ ಅಂಗವಾಗಿ ನಗರದ ಕುಪ್ಪಣ್ಣ ಗಾರ್ಡನ್‌ನಲ್ಲಿ ‌ಆಯೋಜನೆ ಮಾಡಲಾಗಿದ್ದ ಫಲಪಷ್ಪ ಪ್ರದರ್ಶನವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್‌ ಟಿ ಸೋಮಶೇಖರ್‌ ಅವರು ಸೋಮವಾರ ಉದ್ಘಾಟಿಸಿದರು. ಗಾಜಿನ ಅರಮನೆಯೊಳಗೆ ಅರಳಿರುವ ರಾಷ್ಟ್ರಪತಿ ಭವನ ಮತ್ತು ನಟ ಪುನೀತ್ ರಾಜ್‌ಕುಮಾರ್ ಅವರ ಕಂಚಿನ ಬಣ್ಣದಲ್ಲಿ ನಿರ್ಮಾಣಗೊಂಡಿರುವ ಪ್ರತಿಮೆ ಈ ಬಾರಿಯ ಪ್ರಮುಖ ಆಕರ್ಷಣೆಯಾಗಿದೆ.

7 ಅಡಿಯ ಜೇನುಹುಳು, 12 ಅಡಿಯ ಜಿರಾಫೆ ಹಾಗೂ ಮಕ್ಕಳಿಗೆ ಸಂಬಂಧಿಸಿದ ಹಲವು ಗೊಂಬೆಗಳನ್ನು ಹೂವಿನಿಂದ ಅಲಂಕರಿಸಲಾಗಿದ್ದು ನೋಡುಗರ ಮೈ ಮನಗಳನ್ನು ಪುಳಕಿತಗೊಳಿಸುತ್ತಿದೆ. 7 ಅಡಿ ದಪ್ಪ ಮೆಣಸಿನ ಕಾಯಿಯಿಂದ ನಿರ್ಮಿಸಿದ ಮನೆ ಇತರ ವೈವಿಧ್ಯಮಯ ಹೂವಿನ ಕಲಾಕೃತಿಗಳು ನೋಡುಗರ ಗಮನ ಸೆಳೆಯುತ್ತಿದೆ.

ಇಲಾಖೆಯಿಂದ 50ಸಾವಿರಕ್ಕೂ ಹೆಚ್ಚು ಹೂವಿನ ಗಿಡಗಳನ್ನು ಬೆಳೆದಿದ್ದು ಇಡೀ ಕುಪ್ಪಣ್ಣ ಪಾರ್ಕ್ ಹೂವುಗಳಿಂದ ಅಲಂಕೃತವಾಗಿದೆ. ಪ್ರತಿದಿನ ಸಂಜೆಯ ವೇಳೆ ಅನೇಕ ಮನರಂಜನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಎಲ್.ನಾಗೇಂದ್ರ, ಜಿಲ್ಲಾಧಿಕಾರಿ ಬಗಾದಿ ಗೌತಮ್‌, ಜಿಪಂ ಸಿಇಓ ಪೂರ್ಣಿಮಾ, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್‌ಗೌಡ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ರುದ್ರೇಶ್, ಮೇಯರ್‌ ಶಿವಕುಮಾರ್, ಮೈ.ವಿ.ಶಂಕರ್, ಹಿರಿಯ ಸಹಾಯಕ ನಿರ್ದೇಶರಾದ ಸುವೇಧಾ ಮತ್ತಿತರರು ಹಾಜರಿದ್ದರು.

andolanait

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

10 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

14 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

15 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

16 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

16 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

16 hours ago