ಮೈಸೂರು: ಬೆಂಗಳೂರು – ಮೈಸೂರು ನಡುವಿನ ದಶಪಥ ಹೆದ್ದಾರಿಗೆ ಕಾವೇರಿ ಎಕ್ಸ್ ಪ್ರೆಸ್ ವೇ ಎಂದು ನಾಮಕರಣ ಮಾಡುವಂತೆ ಸಂಸದ ಪ್ರತಾಪ್ ಸಿಂಹ ಕೇಂದ್ರ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಮೈಸೂರು : ಬೆಂಗಳೂರು – ಮೈಸೂರು ನಡುವಿನ ದಶಪಥ ಹೆದ್ದಾರಿಗೆ ಕಾವೇರಿ ಎಕ್ಸ್ಪ್ರೆಸ್ ವೇ ಎಂದು ನಾಮಕರಣ ಮಾಡುವಂತೆ ಸಂಸದ ಪ್ರತಾಪ್ ಸಿಂಹ ಕೇಂದ್ರ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಇಂದು ಸಂಸದ ಪ್ರತಾಪ ಸಿಂಹ ಅವರು ದೆಹಲಿಯಲ್ಲಿ ಕೇಂದ್ರ ಭೂ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಇದಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದ ಪ್ರತಾಪ ಸಿಂಹ ಮಾಹಿತಿ ನೀಡಿದ್ದಾರೆ.ಈ ಸಂದರ್ಭದಲ್ಲಿ ರಾಜ್ಯದ ಕೆಲವು ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿ ಎಂದು ಘೋಷಿಸುವಂತೆ ಕೇಂದ್ರ ಸಚಿವ ಗಡ್ಕರಿ ಮನವಿ ಸಲ್ಲಿಸಿದರು.
ಚೆನ್ನರಾಯಪಟ್ಟಣ-ಹೊಳೆನರಸೀಪುರ-ಅರಕಲಗೂಡು-ಕೊಡ್ಲಿಪೇಟೆ-ಮಡಿಕೇರಿ-ವಿರಾಜಪೇಟೆ ಮಾರ್ಗವಾಗಿ ಮಾಕುಟ್ಟ (ಕೇರಳ ಬಾರ್ಡರ್) ಸಂಪರ್ಕಿಸುವ ರಸ್ತೆ.ಮೈಸೂರು—ಹುಣಸೂರು-ಗೋಣಿಕೊಪ್ಪ ಮಾರ್ಗವಾಗಿ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ.ಕೆಳಪಟ್ಟ-ಮಾನಂದವಾಡಿ-ಹೆಚ್.ಡಿ.ಕೋಟೆ-ಜಯಪುರ ಮಾರ್ಗವಾಗಿ ಮೈಸೂರು ಸಂಪರ್ಕಿಸುವ ರಸ್ತೆ.ಶ್ರೀರಂಗಪಟ್ಟಣ-ಕೆ.ಆರ್.ಪೇಟೆ-ಚನ್ನರಾಯಪಟ್ಟಣ ಮಾರ್ಗವಾಗಿ ಅರಸೀಕೆರೆ ಸಂಪರ್ಕಿಸುವ ರಸ್ತೆ.ಮಳವಳ್ಳಿಯಿಂದ ಮೈಸೂರು ಸಂಪರ್ಕಿಸುವ ರಸ್ತೆ.ಪಾಂಡವಪುರ ಅರಸೀಕೆರೆ ಮಾರ್ಗವಾಗಿ ಕೆ.ಆರ್.ಪೇಟೆ ಸಂಪರ್ಕಿಸುವ ರಸ್ತೆ.
ಬೆಂಗಳೂರು: ನಾಳೆ ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್ ಮಂಡನೆಯ…
ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…
ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…
ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…