ಅಮಾಯಕರನ್ನು ಹನಿಟ್ರ್ಯಾಪ್ ಮಾಡಿ ಬಲೆಗೆ ಬೀಳಿಸಿಕೊಳ್ಳುತ್ತಿದ್ದ ಗ್ಯಾಂಗ್ ಒಂದನ್ನು ಮೈಸೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಫಜಲುಲ್ಲಾ ರಹಮಾನ್, ರಿಜ್ವಾನ್ ಹಾಗೂ ಮೋನಾ ಎಂಬುವರು ಬಂಧನಕ್ಕೊಳಗಾಗಿದ್ದಾರೆ. ಚೆನ್ನೈ ಮೂಲದ ಉದ್ಯಮಿ ಸುನ್ನಿ ಎಂಬುವವರು ಮೈಸೂರಿನ ಮೂಲಕ ಕೇರಳಗೆ ಪ್ರಯಾಣ ಬೆಳೆಸುತ್ತಿದ್ದ ಸಂದರ್ಭದಲ್ಲಿ ಆರೋಪಿಗಳಿಗೆ ಪರಿಚಯವಾಗಿದ್ದು, ಮಾನಂದವಾಡಿ ರಸ್ತೆಯಲ್ಲಿ ಸುನ್ನಿ ಅವರನ್ನು ಅಡ್ಡಗಟ್ಟಿದ್ದಾರೆ.
ಬಳಿಕ ಆರೋಪಿಗಳು ಸುನ್ನಿ ಅವರನ್ನು ಬಲವಂತವಾಗಿ ಮನೆಯೊಂದಕ್ಕೆ ಕರೆದೊಯ್ದು ಅಲ್ಲಿ ಮೋನ ಜತೆ ನಗ್ನವಾಗಿ ಮಲಗಿಸಿ ಫೋಟೊ ಮತ್ತು ವಿಡಿಯೊಗಳನ್ನು ಚಿತ್ರೀಕರಿಸಿಕೊಂಡಿದ್ದಾರೆ. ನಂತರ ಈ ಫೋಟೊ ಹಾಗೂ ವಿಡಿಯೊಗಳನ್ನು ಸುನ್ನಿಗೆ ತೋರಿಸಿ ಬ್ಲ್ಯಾಕ್ಮೇಲ್ ಮಾಡಲು ಆರಂಭಿಸಿದ್ದಾರೆ.
ಅಲ್ಲದೇ 10 ಲಕ್ಷ ಹಣಕ್ಕೆ ಬೇಡಿಕೆಯನ್ನೂ ಸಹ ಗುಂಪು ಇಟ್ಟಿದ್ದು, ಸುನ್ನಿ 5 ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಗುಂಪು ಸುನ್ನಿ ಧರಿಸಿದ್ದ ಚಿನ್ನದ ಉಂಗುರ ಹಾಗೂ ಹಣ ದೋಚಿ ಪರಾರಿಯಾಗಿದ್ದಾರೆ. ಈ ಕುರಿತು ಸುನ್ನಿ ಕೇರಳದ ತಿರುನೆಲ್ಲಿಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ ಪ್ರಕರಣ ಮೈಸೂರಿನಲ್ಲಿ ನಡೆದಿದ್ದರಿಂದ ಮೈಸೂರು ಗ್ರಾಮಾಂತರ ಠಾಣೆಗೆ ವರ್ಗಾವಣೆಯಾಯಿತು. ಹೀಗೆ ಪ್ರಕರಣ ವರ್ಗಾವಣೆಯಾಗುತ್ತಿದ್ದಂತೆ ಕಾರ್ಯಾಚರಣೆ ಆರಂಭಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ಮಡಿಕೇರಿಯಲ್ಲೂ ಸಹ ಇಂತಹದ್ದೇ ಕೃತ್ಯ ಎಸಗಿರುವುದಾಗಿ ತಂಡ ಬಾಯಿಬಿಟ್ಟಿದ್ದು, ಬಂಧಿತರಿಂದ 50 ಸಾವಿರ ನಗದು ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ ಇನೋವಾ ಕಾರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಬೆಂಗಳೂರು: ಕೆಜಿಎಫ್-2 ಯಶಸ್ಸಿನ ನಂತರ ಇಡೀ ದೇಶದ ಕಾತುರದಿಂದ ಕಾಯುತ್ತಿರುವ ಸಿನಿಮಾ ಎಂದರೆ ಅದು ರಾಕಿಂಗ್ ಸ್ಟಾರ್ ಯಶ್ ಅಭಿನಯದ…
ತುಮಕೂರು: ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಹಸ್ತಾಂತರ ಚರ್ಚೆ ನಡುವೆಯೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮತ್ತೆ ದಲಿತ ಸಿಎಂ ವಿಚಾರ ಪ್ರಸ್ತಾಪಿಸಿದ್ದಾರೆ.…
ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.…
ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.…
ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ. 27 ವರ್ಷ…
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ…