ಜಿಲ್ಲೆಗಳು

ಹನಿಟ್ರ್ಯಾಪ್‌: ಮೈಸೂರಿನಲ್ಲಿ ಓರ್ವ ಮಹಿಳೆ ಸೇರಿ ಮೂವರ ಬಂಧನ

ಅಮಾಯಕರನ್ನು ಹನಿಟ್ರ್ಯಾಪ್‌ ಮಾಡಿ ಬಲೆಗೆ ಬೀಳಿಸಿಕೊಳ್ಳುತ್ತಿದ್ದ ಗ್ಯಾಂಗ್‌ ಒಂದನ್ನು ಮೈಸೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಫಜಲುಲ್ಲಾ ರಹಮಾನ್‌, ರಿಜ್ವಾನ್‌ ಹಾಗೂ ಮೋನಾ ಎಂಬುವರು ಬಂಧನಕ್ಕೊಳಗಾಗಿದ್ದಾರೆ. ಚೆನ್ನೈ ಮೂಲದ ಉದ್ಯಮಿ ಸುನ್ನಿ ಎಂಬುವವರು ಮೈಸೂರಿನ ಮೂಲಕ ಕೇರಳಗೆ ಪ್ರಯಾಣ ಬೆಳೆಸುತ್ತಿದ್ದ ಸಂದರ್ಭದಲ್ಲಿ ಆರೋಪಿಗಳಿಗೆ ಪರಿಚಯವಾಗಿದ್ದು, ಮಾನಂದವಾಡಿ ರಸ್ತೆಯಲ್ಲಿ ಸುನ್ನಿ ಅವರನ್ನು ಅಡ್ಡಗಟ್ಟಿದ್ದಾರೆ.

ಬಳಿಕ ಆರೋಪಿಗಳು ಸುನ್ನಿ ಅವರನ್ನು ಬಲವಂತವಾಗಿ ಮನೆಯೊಂದಕ್ಕೆ ಕರೆದೊಯ್ದು ಅಲ್ಲಿ ಮೋನ ಜತೆ ನಗ್ನವಾಗಿ ಮಲಗಿಸಿ ಫೋಟೊ ಮತ್ತು ವಿಡಿಯೊಗಳನ್ನು ಚಿತ್ರೀಕರಿಸಿಕೊಂಡಿದ್ದಾರೆ. ನಂತರ ಈ ಫೋಟೊ ಹಾಗೂ ವಿಡಿಯೊಗಳನ್ನು ಸುನ್ನಿಗೆ ತೋರಿಸಿ ಬ್ಲ್ಯಾಕ್‌ಮೇಲ್‌ ಮಾಡಲು ಆರಂಭಿಸಿದ್ದಾರೆ.

ಅಲ್ಲದೇ 10 ಲಕ್ಷ ಹಣಕ್ಕೆ ಬೇಡಿಕೆಯನ್ನೂ ಸಹ ಗುಂಪು ಇಟ್ಟಿದ್ದು, ಸುನ್ನಿ 5 ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಗುಂಪು ಸುನ್ನಿ ಧರಿಸಿದ್ದ ಚಿನ್ನದ ಉಂಗುರ ಹಾಗೂ ಹಣ ದೋಚಿ ಪರಾರಿಯಾಗಿದ್ದಾರೆ. ಈ ಕುರಿತು ಸುನ್ನಿ ಕೇರಳದ ತಿರುನೆಲ್ಲಿಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ ಪ್ರಕರಣ ಮೈಸೂರಿನಲ್ಲಿ ನಡೆದಿದ್ದರಿಂದ ಮೈಸೂರು ಗ್ರಾಮಾಂತರ ಠಾಣೆಗೆ ವರ್ಗಾವಣೆಯಾಯಿತು. ಹೀಗೆ ಪ್ರಕರಣ ವರ್ಗಾವಣೆಯಾಗುತ್ತಿದ್ದಂತೆ ಕಾರ್ಯಾಚರಣೆ ಆರಂಭಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ಮಡಿಕೇರಿಯಲ್ಲೂ ಸಹ ಇಂತಹದ್ದೇ ಕೃತ್ಯ ಎಸಗಿರುವುದಾಗಿ ತಂಡ ಬಾಯಿಬಿಟ್ಟಿದ್ದು, ಬಂಧಿತರಿಂದ 50 ಸಾವಿರ ನಗದು ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ ಇನೋವಾ ಕಾರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

andolana

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

11 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

19 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

19 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

19 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

22 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

22 hours ago