ಜಿಲ್ಲೆಗಳು

ಹನಿಟ್ರ್ಯಾಪ್‌: ಮೈಸೂರಿನಲ್ಲಿ ಓರ್ವ ಮಹಿಳೆ ಸೇರಿ ಮೂವರ ಬಂಧನ

ಅಮಾಯಕರನ್ನು ಹನಿಟ್ರ್ಯಾಪ್‌ ಮಾಡಿ ಬಲೆಗೆ ಬೀಳಿಸಿಕೊಳ್ಳುತ್ತಿದ್ದ ಗ್ಯಾಂಗ್‌ ಒಂದನ್ನು ಮೈಸೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಫಜಲುಲ್ಲಾ ರಹಮಾನ್‌, ರಿಜ್ವಾನ್‌ ಹಾಗೂ ಮೋನಾ ಎಂಬುವರು ಬಂಧನಕ್ಕೊಳಗಾಗಿದ್ದಾರೆ. ಚೆನ್ನೈ ಮೂಲದ ಉದ್ಯಮಿ ಸುನ್ನಿ ಎಂಬುವವರು ಮೈಸೂರಿನ ಮೂಲಕ ಕೇರಳಗೆ ಪ್ರಯಾಣ ಬೆಳೆಸುತ್ತಿದ್ದ ಸಂದರ್ಭದಲ್ಲಿ ಆರೋಪಿಗಳಿಗೆ ಪರಿಚಯವಾಗಿದ್ದು, ಮಾನಂದವಾಡಿ ರಸ್ತೆಯಲ್ಲಿ ಸುನ್ನಿ ಅವರನ್ನು ಅಡ್ಡಗಟ್ಟಿದ್ದಾರೆ.

ಬಳಿಕ ಆರೋಪಿಗಳು ಸುನ್ನಿ ಅವರನ್ನು ಬಲವಂತವಾಗಿ ಮನೆಯೊಂದಕ್ಕೆ ಕರೆದೊಯ್ದು ಅಲ್ಲಿ ಮೋನ ಜತೆ ನಗ್ನವಾಗಿ ಮಲಗಿಸಿ ಫೋಟೊ ಮತ್ತು ವಿಡಿಯೊಗಳನ್ನು ಚಿತ್ರೀಕರಿಸಿಕೊಂಡಿದ್ದಾರೆ. ನಂತರ ಈ ಫೋಟೊ ಹಾಗೂ ವಿಡಿಯೊಗಳನ್ನು ಸುನ್ನಿಗೆ ತೋರಿಸಿ ಬ್ಲ್ಯಾಕ್‌ಮೇಲ್‌ ಮಾಡಲು ಆರಂಭಿಸಿದ್ದಾರೆ.

ಅಲ್ಲದೇ 10 ಲಕ್ಷ ಹಣಕ್ಕೆ ಬೇಡಿಕೆಯನ್ನೂ ಸಹ ಗುಂಪು ಇಟ್ಟಿದ್ದು, ಸುನ್ನಿ 5 ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಗುಂಪು ಸುನ್ನಿ ಧರಿಸಿದ್ದ ಚಿನ್ನದ ಉಂಗುರ ಹಾಗೂ ಹಣ ದೋಚಿ ಪರಾರಿಯಾಗಿದ್ದಾರೆ. ಈ ಕುರಿತು ಸುನ್ನಿ ಕೇರಳದ ತಿರುನೆಲ್ಲಿಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ ಪ್ರಕರಣ ಮೈಸೂರಿನಲ್ಲಿ ನಡೆದಿದ್ದರಿಂದ ಮೈಸೂರು ಗ್ರಾಮಾಂತರ ಠಾಣೆಗೆ ವರ್ಗಾವಣೆಯಾಯಿತು. ಹೀಗೆ ಪ್ರಕರಣ ವರ್ಗಾವಣೆಯಾಗುತ್ತಿದ್ದಂತೆ ಕಾರ್ಯಾಚರಣೆ ಆರಂಭಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ಮಡಿಕೇರಿಯಲ್ಲೂ ಸಹ ಇಂತಹದ್ದೇ ಕೃತ್ಯ ಎಸಗಿರುವುದಾಗಿ ತಂಡ ಬಾಯಿಬಿಟ್ಟಿದ್ದು, ಬಂಧಿತರಿಂದ 50 ಸಾವಿರ ನಗದು ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ ಇನೋವಾ ಕಾರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

andolana

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

13 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

14 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

15 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

20 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

20 hours ago