ಜಿಲ್ಲೆಗಳು

ಮೈಸೂರಿನ ವಿಜಯನಗರ ಠಾಣೆಯಲ್ಲಿ ಸ್ಯಾಂಟ್ರೋ ರವಿ ವಿರುದ್ಧ ದಾಖಲಾದ ಪ್ರಕರಣದ ತನಿಖಾ ವರದಿ ಸಿಐಡಿಗೆ ಹಸ್ತಾಂತರ

ಮೈಸೂರು: ರಾಜ್ಯ ಸರ್ಕಾರ ಸ್ಯಾಂಟ್ರೋ ರವಿ  ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ ಹಿನ್ನಲೆ ದಾಖಲೆ ಪತ್ರಗಳನ್ನು ಮೈಸೂರು ಪೊಲೀಸರು ಸಿಐಡಿ ಅಧಿಕಾರಿಗಳಿಗೆ ಒಪ್ಪಿಸಿದ್ದರು. ಇದೀಗ ಜಿಲ್ಲೆಯ ವಿಜಯನಗರ ಠಾಣೆಯಲ್ಲಿ ಸ್ಯಾಂಟ್ರೋ ರವಿ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖಾ ವರದಿಯನ್ನು ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್‌ ಅವರು ಸಿಐಡಿಗೆ ಹಸ್ತಾಂತರಿಸಿದ್ದಾರೆ. ಸದ್ಯ ಸ್ಯಾಂಟ್ರೋ ರವಿ ಸಿಐಟಿ ಕಸ್ಟಡಿಯಲ್ಲಿ ಇದ್ದು, ಡಿವೈಎಸ್​​ಪಿ ನರಸಿಂಹಮೂರ್ತಿ ನೇತೃತ್ವದ ತಂಡದಿಂದ ವಿಚಾರಣೆ  ನಡೆಯುತ್ತಿದೆ. ಇಂದು ಮತ್ತೆ ರವಿಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಿದ್ದಾರೆ. ಈ ನಡುವೆ ಹೇಳಿಕೆ ದಾಖಲಿಸಲು ಸ್ಯಾಂಟ್ರೋ ಪತ್ನಿ ಸಿಐಡಿ ಕಚೇರಿಗೆ ಆಗಮಿಸುವ ಸಾಧ್ಯತೆ ಇದ್ದು, ಆಕೆಯ ಹೇಳಿಕೆ ಸೇರಿದಂತೆ ಸಿಐಡಿ ಅಧಿಕಾರಿಗಳು ಪ್ರತಿಯೊಂದು ಮಾಹಿತಿ ಕಲೆ ಹಾಕಿಕೊಳ್ಳಲಿದ್ದಾರೆ.

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಎದುರಿಸುತ್ತಿರುವ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯ ಹೊಣೆಯನ್ನುಸಿಐಡಿ ಕೈಗೆತ್ತಿಕೊಂಡಿದೆ. ತನಿಖೆಗಾಗಿ ಸಿಐಡಿ ತಂಡ ಮೈಸೂರಿಗೆ ಬಂದಿದ್ದು, ಈಗಾಗಲೇ ಪ್ರಾಥಮಿಕ ಮಾಹಿತಿ ಕಲೆ ಹಾಕಿದೆ. ಸಿಐಡಿ ತಂಡದಲ್ಲಿ ನಾಲ್ಕಕ್ಕೂ ಹೆಚ್ಚು ಅಧಿಕಾರಿಗಳಿದ್ದು, ಎಸಿಪಿ ಶಿವಶಂಕರ್​​ರಿಂದ ಮಾಹಿತಿ ಪಡೆದಿದ್ದಾರೆ.

ಪ್ರಸ್ತುತ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿ ವಿರುದ್ಧ ಅನೇಕ ಆರೋಪಗಳಿವೆ. ಇವುಗಳಲ್ಲಿ ಮಾಂಸದಂಧೆ, ದಶಕಗಳ ಕಾಲ ವೇಶ್ಯಾವಾಟಿಕೆ ನಡೆಸುತ್ತಿದ್ದುದು ಮತ್ತು ಇದ್ದಕ್ಕಿದ್ದಂತೆ ಪೊಲೀಸ್ ಇಲಾಖೆಯ ವರ್ಗಾವಣೆ ದಂಧೆಯಲ್ಲಿ ಶಾಮೀಲಾಗಿರುವುದೂ ಸೇರಿದೆ.

ಪತ್ನಿ ಸೇರಿದಂತೆ ಮೂವರ ವಿರುದ್ಧ ಸುಳ್ಳು ಪ್ರಕರಣ ದಾಖಲಿದ ಸ್ಯಾಂಟ್ರೋ ರವಿ ಅವರನ್ನು ಜೈಲಿಗೆ ಕಳುಹಿಸುವಲ್ಲಿ ಯಶಸ್ವಿಯಾಗಿದ್ದ. ಜೈಲಿನಿಂದ ಹೊರಬಂದ ಸ್ಯಾಂಟ್ರೋ ರವಿ ಪತ್ನಿ ಸೇರಿದಂತೆ ಮೂವರು ಸ್ಯಾಂಟ್ರೋ ರವಿ ವಿರುದ್ಧವೇ ಪ್ರಕರಣ ದಾಖಲಿಸಿದ್ದಾರೆ. ತನ್ನ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಸ್ಯಾಂಟ್ರೋ ರವಿ ತಲೆಮರೆಸಿಕೊಂಡಿದ್ದು, ಪೊಲೀಸರಿಗೆ ಯಾವುದೇ ಸಣ್ಣ ಸುಳಿವು ಸಿಗದಂತೆ ಓಡಾಡಿಕೊಂಡು ಕೋರ್ಟ್​ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದನು. ಆದರೆ ವಿವಿಧ ತಂಡಗಳನ್ನು ರಚಿಸಿ ಅಖಾಡಕ್ಕಿಳಿದಿದ್ದ ಪೊಲೀಸರು ಸ್ಯಾಂಟ್ರೋ ರವಿಯನ್ನು ಗುಜರಾತ್​ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago