ಜಿಲ್ಲೆಗಳು

ಮೈಸೂರಿಗೆ ಸೋನಿಯಾ ಆಗಮನ, ಕಬಿನಿಯಲ್ಲಿ ವಿಶ್ರಾಂತಿ ಭಾರತ ಜೋಡೊ ಯಾತ್ರೆಗೆ ಕೈ ಜೋಡಿಸಲಿದ್ದಾರೆ ಸೋನಿಯಾ, ಪ್ರಿಯಾಂಕಾ

ಮೈಸೂರು: ಕಾಂಗ್ರೆಸ್ ನಾಯಕಿ, ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದಾರೆ.
ಮೈಸೂರಿಗೆ ಆಗಮಿಸಿದ ಸೋನಿಯಾ ಗಾಂಧಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸೇರಿ ಕಾಂಗ್ರೆಸ್ ಮುಖಂಡರು ಸ್ವಾಗತ ಕೋರಿದರು. ಎರಡು ದಿನಗಳ ಕಾಲ ಮಡಿಕೇರಿಯಲ್ಲಿ ಸೋನಿಯಾ ಗಾಂಧಿ ಅವರು ವಾಸ್ತವ್ಯ ಹೂಡಬೇಕಿತ್ತು. ಆದರೆ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಮೈಸೂರಿಗೆ ಆಗಮಿಸಿದ್ದು, ಎಚ್.ಡಿ.ಕೋಟೆ ಕಬಿನಿಯ ಖಾಸಗಿ ರೆಸಾರ್ಟ್‌ ನಲ್ಲಿ ವಾಸ್ತವ್ಯ ಹೂಡಿದ್ದಾರೆ.

ವಿಜಯದಶಮಿ ಹಬ್ಬದ ಹಿನ್ನೆಲೆಯಲ್ಲಿ ಭಾರತ ಜೋಡೋ ಯಾತ್ರೆಗೆ ಎರಡು ದಿನಗಳ ಕಾಲ ವಿರಾಮ ನೀಡಲಾಗಿದೆ. ಗುರುವಾರದಿಂದ ಯಾತ್ರೆ ಮತ್ತೆ ಆರಂಭವಾಗಲಿದೆ.

ಸೋನಿಯಾ ಗಾಂಧಿ ಅವರು 6 ರಂದು ಬೆಳಗ್ಗೆ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು 5 ರಂದು ರಾತ್ರಿ ಹಾಗೂ 6 ರಂದು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಇದು ಅಧಿಕೃತ ಕಾರ್ಯಕ್ರಮ. ಯಾರೊಬ್ಬರಿಗೂ ಹೂವಿನ ಹಾರ ಹಾಕುವ ಅವಕಾಶ ನೀಡುವುದಿಲ್ಲ. ಎಲ್ಲ ಕಾರ್ಯಕರ್ತರು ಹಾಗೂ ನಾಯಕರು ಸಹಕಾರ ನೀಡಬೇಕು ಎಂದವರು ತಿಳಿಸಿದರು.
ಸೋನಿಯಾ ಗಾಂಧಿ ಅವರಿಗೆ ಮೈಸೂರು ಹಾಗೂ ಕೊಡಗಿನಲ್ಲಿ ವಾಸ್ತವ್ಯದ ವ್ಯವಸ್ಥೆ ಮಾಡಲಾಗಿದೆ. ಕೊಡಗು ಜಿಲ್ಲಾ ಅಧ್ಯಕ್ಷರು ಹಾಗೂ ಇತರೆ 15 ನಾಯಕರಿಗೆ ಅವರನ್ನು ಸ್ವಾಗತಿಸುವ ಜವಾಬ್ದಾರಿ ನೀಡಿದ್ದು, ಅವರ ಹೊರತಾಗಿ ಬೇರೆ ಯಾರೂ ಕೂಡ ಭೇಟಿ ಮಾಡಲು ಹೋಗಿ ತೊಂದರೆ ನೀಡಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಕಾಂಗ್ರೆಸ್‌ ನಾಯಕರಿಗೆ ಮನವಿ ಮಾಡಿದ್ದಾರೆ.

ಸೋನಿಯಾ ಗಾಂಧಿ ಮೈಸೂರಿಗೆ ಭೇಟಿ ನೀಡಿರೋದು ಹಲವು ಕುತೂಹಲಕ್ಕೆ ಕಾರಣವಾಗಿದೆ. ಈ ಮಧ್ಯೆ ಪ್ರಿಯಾಂಕಾ ಗಾಂಧಿ ಕೂಡಾ ಅಕ್ಟೋಬರ್ 7ಕ್ಕೆ ರಾಜ್ಯಕ್ಕೆ ಆಗಮಿಸಲಿದ್ದು, ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಈ ಮೂಲಕ ಇಡೀ ಗಾಂಧಿ ಕುಟುಂಬವೇ ಹಳೇ ಮೈಸೂರು ಭಾಗದಲ್ಲಿ ಬೀಡು ಬಿಟ್ಟಿದ್ದು, ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ವಿಶೇಷ ತಂತ್ರ ರೂಪಿಸಿರುವ ಸಾಧ್ಯತೆ ಇದೆ.

andolanait

Recent Posts

ಪೌತಿ ಖಾತಾ ಅರ್ಜಿ ಶೀಘ್ರ ವಿಲೇವಾರಿ ಮಾಡಿ : ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಸೂಚನೆ

ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…

52 mins ago

ಜಿ-ರಾಮ್‌ಜಿ ವಾಪಸ್‌ ಪಡೆಯಿರಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…

2 hours ago

ಹಣ ಅಕ್ರಮ ವರ್ಗಾವಣೆ ಪ್ರಕರಣ : ಕಾಂಗ್ರೆಸ್‌ ಶಾಸಕ ವೀರೇಂದ್ರಗೆ ಜಾಮೀನು

ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್‌ ರಿಲೀಫ್‌…

3 hours ago

ಮೈಸೂರಿನಲ್ಲಿ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ : ಜಿಲ್ಲಾಧಿಕಾರಿ ಮೆಚ್ಚುಗೆ

ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…

4 hours ago

ಕೈಗಾರಿಕೆ ಸ್ಥಾಪನೆಗೆ ಅರ್ಜಿ ಬಂದರೆ ಸಂಪೂರ್ಣ ಬೆಂಬಲ: ಸಚಿವ ಚಲುವರಾಯಸ್ವಾಮಿ ಭರವಸೆ

ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…

5 hours ago

ಜ.1ರಂದು ಚಾ.ಬೆಟ್ಟಕ್ಕೆ ಹೆಚ್ಚಿನ ಜನ ನಿರೀಕ್ಷೆ : ಅಗತ್ಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…

5 hours ago