ಮೈಸೂರು: ಕಾಂಗ್ರೆಸ್ ನಾಯಕಿ, ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದಾರೆ.
ಮೈಸೂರಿಗೆ ಆಗಮಿಸಿದ ಸೋನಿಯಾ ಗಾಂಧಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸೇರಿ ಕಾಂಗ್ರೆಸ್ ಮುಖಂಡರು ಸ್ವಾಗತ ಕೋರಿದರು. ಎರಡು ದಿನಗಳ ಕಾಲ ಮಡಿಕೇರಿಯಲ್ಲಿ ಸೋನಿಯಾ ಗಾಂಧಿ ಅವರು ವಾಸ್ತವ್ಯ ಹೂಡಬೇಕಿತ್ತು. ಆದರೆ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಮೈಸೂರಿಗೆ ಆಗಮಿಸಿದ್ದು, ಎಚ್.ಡಿ.ಕೋಟೆ ಕಬಿನಿಯ ಖಾಸಗಿ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ.
ವಿಜಯದಶಮಿ ಹಬ್ಬದ ಹಿನ್ನೆಲೆಯಲ್ಲಿ ಭಾರತ ಜೋಡೋ ಯಾತ್ರೆಗೆ ಎರಡು ದಿನಗಳ ಕಾಲ ವಿರಾಮ ನೀಡಲಾಗಿದೆ. ಗುರುವಾರದಿಂದ ಯಾತ್ರೆ ಮತ್ತೆ ಆರಂಭವಾಗಲಿದೆ.
ಸೋನಿಯಾ ಗಾಂಧಿ ಅವರು 6 ರಂದು ಬೆಳಗ್ಗೆ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು 5 ರಂದು ರಾತ್ರಿ ಹಾಗೂ 6 ರಂದು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಇದು ಅಧಿಕೃತ ಕಾರ್ಯಕ್ರಮ. ಯಾರೊಬ್ಬರಿಗೂ ಹೂವಿನ ಹಾರ ಹಾಕುವ ಅವಕಾಶ ನೀಡುವುದಿಲ್ಲ. ಎಲ್ಲ ಕಾರ್ಯಕರ್ತರು ಹಾಗೂ ನಾಯಕರು ಸಹಕಾರ ನೀಡಬೇಕು ಎಂದವರು ತಿಳಿಸಿದರು.
ಸೋನಿಯಾ ಗಾಂಧಿ ಅವರಿಗೆ ಮೈಸೂರು ಹಾಗೂ ಕೊಡಗಿನಲ್ಲಿ ವಾಸ್ತವ್ಯದ ವ್ಯವಸ್ಥೆ ಮಾಡಲಾಗಿದೆ. ಕೊಡಗು ಜಿಲ್ಲಾ ಅಧ್ಯಕ್ಷರು ಹಾಗೂ ಇತರೆ 15 ನಾಯಕರಿಗೆ ಅವರನ್ನು ಸ್ವಾಗತಿಸುವ ಜವಾಬ್ದಾರಿ ನೀಡಿದ್ದು, ಅವರ ಹೊರತಾಗಿ ಬೇರೆ ಯಾರೂ ಕೂಡ ಭೇಟಿ ಮಾಡಲು ಹೋಗಿ ತೊಂದರೆ ನೀಡಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದ್ದಾರೆ.
ಸೋನಿಯಾ ಗಾಂಧಿ ಮೈಸೂರಿಗೆ ಭೇಟಿ ನೀಡಿರೋದು ಹಲವು ಕುತೂಹಲಕ್ಕೆ ಕಾರಣವಾಗಿದೆ. ಈ ಮಧ್ಯೆ ಪ್ರಿಯಾಂಕಾ ಗಾಂಧಿ ಕೂಡಾ ಅಕ್ಟೋಬರ್ 7ಕ್ಕೆ ರಾಜ್ಯಕ್ಕೆ ಆಗಮಿಸಲಿದ್ದು, ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಈ ಮೂಲಕ ಇಡೀ ಗಾಂಧಿ ಕುಟುಂಬವೇ ಹಳೇ ಮೈಸೂರು ಭಾಗದಲ್ಲಿ ಬೀಡು ಬಿಟ್ಟಿದ್ದು, ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ವಿಶೇಷ ತಂತ್ರ ರೂಪಿಸಿರುವ ಸಾಧ್ಯತೆ ಇದೆ.
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…