ಜಿಲ್ಲೆಗಳು

ಮೈಸೂರಿಗೆ ಸೋನಿಯಾ ಆಗಮನ, ಕಬಿನಿಯಲ್ಲಿ ವಿಶ್ರಾಂತಿ ಭಾರತ ಜೋಡೊ ಯಾತ್ರೆಗೆ ಕೈ ಜೋಡಿಸಲಿದ್ದಾರೆ ಸೋನಿಯಾ, ಪ್ರಿಯಾಂಕಾ

ಮೈಸೂರು: ಕಾಂಗ್ರೆಸ್ ನಾಯಕಿ, ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದಾರೆ.
ಮೈಸೂರಿಗೆ ಆಗಮಿಸಿದ ಸೋನಿಯಾ ಗಾಂಧಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸೇರಿ ಕಾಂಗ್ರೆಸ್ ಮುಖಂಡರು ಸ್ವಾಗತ ಕೋರಿದರು. ಎರಡು ದಿನಗಳ ಕಾಲ ಮಡಿಕೇರಿಯಲ್ಲಿ ಸೋನಿಯಾ ಗಾಂಧಿ ಅವರು ವಾಸ್ತವ್ಯ ಹೂಡಬೇಕಿತ್ತು. ಆದರೆ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಮೈಸೂರಿಗೆ ಆಗಮಿಸಿದ್ದು, ಎಚ್.ಡಿ.ಕೋಟೆ ಕಬಿನಿಯ ಖಾಸಗಿ ರೆಸಾರ್ಟ್‌ ನಲ್ಲಿ ವಾಸ್ತವ್ಯ ಹೂಡಿದ್ದಾರೆ.

ವಿಜಯದಶಮಿ ಹಬ್ಬದ ಹಿನ್ನೆಲೆಯಲ್ಲಿ ಭಾರತ ಜೋಡೋ ಯಾತ್ರೆಗೆ ಎರಡು ದಿನಗಳ ಕಾಲ ವಿರಾಮ ನೀಡಲಾಗಿದೆ. ಗುರುವಾರದಿಂದ ಯಾತ್ರೆ ಮತ್ತೆ ಆರಂಭವಾಗಲಿದೆ.

ಸೋನಿಯಾ ಗಾಂಧಿ ಅವರು 6 ರಂದು ಬೆಳಗ್ಗೆ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು 5 ರಂದು ರಾತ್ರಿ ಹಾಗೂ 6 ರಂದು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಇದು ಅಧಿಕೃತ ಕಾರ್ಯಕ್ರಮ. ಯಾರೊಬ್ಬರಿಗೂ ಹೂವಿನ ಹಾರ ಹಾಕುವ ಅವಕಾಶ ನೀಡುವುದಿಲ್ಲ. ಎಲ್ಲ ಕಾರ್ಯಕರ್ತರು ಹಾಗೂ ನಾಯಕರು ಸಹಕಾರ ನೀಡಬೇಕು ಎಂದವರು ತಿಳಿಸಿದರು.
ಸೋನಿಯಾ ಗಾಂಧಿ ಅವರಿಗೆ ಮೈಸೂರು ಹಾಗೂ ಕೊಡಗಿನಲ್ಲಿ ವಾಸ್ತವ್ಯದ ವ್ಯವಸ್ಥೆ ಮಾಡಲಾಗಿದೆ. ಕೊಡಗು ಜಿಲ್ಲಾ ಅಧ್ಯಕ್ಷರು ಹಾಗೂ ಇತರೆ 15 ನಾಯಕರಿಗೆ ಅವರನ್ನು ಸ್ವಾಗತಿಸುವ ಜವಾಬ್ದಾರಿ ನೀಡಿದ್ದು, ಅವರ ಹೊರತಾಗಿ ಬೇರೆ ಯಾರೂ ಕೂಡ ಭೇಟಿ ಮಾಡಲು ಹೋಗಿ ತೊಂದರೆ ನೀಡಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಕಾಂಗ್ರೆಸ್‌ ನಾಯಕರಿಗೆ ಮನವಿ ಮಾಡಿದ್ದಾರೆ.

ಸೋನಿಯಾ ಗಾಂಧಿ ಮೈಸೂರಿಗೆ ಭೇಟಿ ನೀಡಿರೋದು ಹಲವು ಕುತೂಹಲಕ್ಕೆ ಕಾರಣವಾಗಿದೆ. ಈ ಮಧ್ಯೆ ಪ್ರಿಯಾಂಕಾ ಗಾಂಧಿ ಕೂಡಾ ಅಕ್ಟೋಬರ್ 7ಕ್ಕೆ ರಾಜ್ಯಕ್ಕೆ ಆಗಮಿಸಲಿದ್ದು, ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಈ ಮೂಲಕ ಇಡೀ ಗಾಂಧಿ ಕುಟುಂಬವೇ ಹಳೇ ಮೈಸೂರು ಭಾಗದಲ್ಲಿ ಬೀಡು ಬಿಟ್ಟಿದ್ದು, ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ವಿಶೇಷ ತಂತ್ರ ರೂಪಿಸಿರುವ ಸಾಧ್ಯತೆ ಇದೆ.

andolanait

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

2 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

2 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

2 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

5 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

5 hours ago