ಜಿಲ್ಲೆಗಳು

ಮೈಸೂರಿಗೆ ಸೋನಿಯಾ ಆಗಮನ, ಕಬಿನಿಯಲ್ಲಿ ವಿಶ್ರಾಂತಿ ಭಾರತ ಜೋಡೊ ಯಾತ್ರೆಗೆ ಕೈ ಜೋಡಿಸಲಿದ್ದಾರೆ ಸೋನಿಯಾ, ಪ್ರಿಯಾಂಕಾ

ಮೈಸೂರು: ಕಾಂಗ್ರೆಸ್ ನಾಯಕಿ, ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದಾರೆ.
ಮೈಸೂರಿಗೆ ಆಗಮಿಸಿದ ಸೋನಿಯಾ ಗಾಂಧಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸೇರಿ ಕಾಂಗ್ರೆಸ್ ಮುಖಂಡರು ಸ್ವಾಗತ ಕೋರಿದರು. ಎರಡು ದಿನಗಳ ಕಾಲ ಮಡಿಕೇರಿಯಲ್ಲಿ ಸೋನಿಯಾ ಗಾಂಧಿ ಅವರು ವಾಸ್ತವ್ಯ ಹೂಡಬೇಕಿತ್ತು. ಆದರೆ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಮೈಸೂರಿಗೆ ಆಗಮಿಸಿದ್ದು, ಎಚ್.ಡಿ.ಕೋಟೆ ಕಬಿನಿಯ ಖಾಸಗಿ ರೆಸಾರ್ಟ್‌ ನಲ್ಲಿ ವಾಸ್ತವ್ಯ ಹೂಡಿದ್ದಾರೆ.

ವಿಜಯದಶಮಿ ಹಬ್ಬದ ಹಿನ್ನೆಲೆಯಲ್ಲಿ ಭಾರತ ಜೋಡೋ ಯಾತ್ರೆಗೆ ಎರಡು ದಿನಗಳ ಕಾಲ ವಿರಾಮ ನೀಡಲಾಗಿದೆ. ಗುರುವಾರದಿಂದ ಯಾತ್ರೆ ಮತ್ತೆ ಆರಂಭವಾಗಲಿದೆ.

ಸೋನಿಯಾ ಗಾಂಧಿ ಅವರು 6 ರಂದು ಬೆಳಗ್ಗೆ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು 5 ರಂದು ರಾತ್ರಿ ಹಾಗೂ 6 ರಂದು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಇದು ಅಧಿಕೃತ ಕಾರ್ಯಕ್ರಮ. ಯಾರೊಬ್ಬರಿಗೂ ಹೂವಿನ ಹಾರ ಹಾಕುವ ಅವಕಾಶ ನೀಡುವುದಿಲ್ಲ. ಎಲ್ಲ ಕಾರ್ಯಕರ್ತರು ಹಾಗೂ ನಾಯಕರು ಸಹಕಾರ ನೀಡಬೇಕು ಎಂದವರು ತಿಳಿಸಿದರು.
ಸೋನಿಯಾ ಗಾಂಧಿ ಅವರಿಗೆ ಮೈಸೂರು ಹಾಗೂ ಕೊಡಗಿನಲ್ಲಿ ವಾಸ್ತವ್ಯದ ವ್ಯವಸ್ಥೆ ಮಾಡಲಾಗಿದೆ. ಕೊಡಗು ಜಿಲ್ಲಾ ಅಧ್ಯಕ್ಷರು ಹಾಗೂ ಇತರೆ 15 ನಾಯಕರಿಗೆ ಅವರನ್ನು ಸ್ವಾಗತಿಸುವ ಜವಾಬ್ದಾರಿ ನೀಡಿದ್ದು, ಅವರ ಹೊರತಾಗಿ ಬೇರೆ ಯಾರೂ ಕೂಡ ಭೇಟಿ ಮಾಡಲು ಹೋಗಿ ತೊಂದರೆ ನೀಡಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಕಾಂಗ್ರೆಸ್‌ ನಾಯಕರಿಗೆ ಮನವಿ ಮಾಡಿದ್ದಾರೆ.

ಸೋನಿಯಾ ಗಾಂಧಿ ಮೈಸೂರಿಗೆ ಭೇಟಿ ನೀಡಿರೋದು ಹಲವು ಕುತೂಹಲಕ್ಕೆ ಕಾರಣವಾಗಿದೆ. ಈ ಮಧ್ಯೆ ಪ್ರಿಯಾಂಕಾ ಗಾಂಧಿ ಕೂಡಾ ಅಕ್ಟೋಬರ್ 7ಕ್ಕೆ ರಾಜ್ಯಕ್ಕೆ ಆಗಮಿಸಲಿದ್ದು, ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಈ ಮೂಲಕ ಇಡೀ ಗಾಂಧಿ ಕುಟುಂಬವೇ ಹಳೇ ಮೈಸೂರು ಭಾಗದಲ್ಲಿ ಬೀಡು ಬಿಟ್ಟಿದ್ದು, ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ವಿಶೇಷ ತಂತ್ರ ರೂಪಿಸಿರುವ ಸಾಧ್ಯತೆ ಇದೆ.

andolanait

Recent Posts

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

26 mins ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

40 mins ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

52 mins ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

1 hour ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

2 hours ago

ಮೈಸೂರು | ಕರಗ ಮಹೋತ್ಸವ ಸಂಪನ್ನ

ಮೈಸೂರು : ನಗರದ ಇಟ್ಟಿಗೆಗೂಡಿನ ಶ್ರೀ ರೇಣುಕಾದೇವಿ ಕರಗ ದೇವಸ್ಥಾನ ಟ್ರಸ್ಟ್, ಶ್ರೀ ಚಾಮುಂಡೇಶ್ವರಿ ಮತ್ತು ಮಾರಿಯಮ್ಮನವರ ೧೦೨ನೇ ಕರಗಮಹೋತ್ಸವ…

2 hours ago