ಜಿಲ್ಲೆಗಳು

ತ್ರಿಬಲ್ ರೈಡಿಂಗ್ : 103 ವಾಹನ ಸವಾರರ ವಿರುದ್ಧ ಕ್ರಮ

ಮೈಸೂರು: ತ್ರಿಬಲ್ ರೈಡಿಂಗ್ ವಿರುದ್ಧ ನಗರ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 103 ವಾಹನಗಳ ವಶಪಡಿಸಿಕೊಂಡು, 760 ಪ್ರಕರಣಗಳನ್ನು ಪತ್ತೆ ಮಾಡಿದ್ದಾರೆ.

ದ್ವಿಚಕ್ರ ವಾಹನಗಳಲ್ಲಿ ತ್ರಿಬಲ್ ರೈಡಿಂಗ್ ಮಾಡುವವರ ವಿರುದ್ಧ ಮತ್ತು ರಸ್ತೆ ಅಪಘಾತಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ವಿಶೇಷ ಕಾರ್ಯಾಚರಣೆಯನ್ನು ಮೈಸೂರು ನಗರ ಸಂಚಾರ ಪೊಲೀಸರು ಕೈಗೊಂಡಿದ್ದಾರೆ. ಡಿಸೆಂಬರ್​ 5ರಿಂದ 19ರವರೆಗೆ ನಡೆದ ಈ ಕಾರ್ಯಾಚರಣೆಯಲ್ಲಿ 103 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.ಈ ವಾಹನಗಳ ಬಗ್ಗೆ ಪರಿಶೀಲಿಸಲಾಗಿ 760 ಪ್ರಕರಣಗಳು ಇದ್ದು, ಅವಶ್ಯಕ ದಾಖಲಾತಿಗಳನ್ನು ಪರಿಶೀಲಿಸಿ, ದಂಡ ಪಾವತಿಸಿದ ನಂತರ ಸೂಕ್ತ ತಿಳುವಳಿಕೆ ನೀಡಿ ಕಳುಹಿಸಲಾಗುತ್ತಿದೆ.
ತ್ರಿಬಲ್ ರೈಡಿಂಗ್ ವಿರುದ್ಧ ಈ ವಿಶೇಷ ಕಾರ್ಯಾಚರಣೆಯು ಮುಂದುವರೆಯುವುದಲ್ಲದೇ, ಇತರೆ ಸಂಚಾರ ನಿಯಮಗಳ ಉಲ್ಲಂಘನೆಗಳ ವಿರುದ್ಧವೂ ಸಹ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದರೊಂದಿಗೆ ಸಂಬಂಧಪಟ್ಟ ಅವಶ್ಯಕ ದಾಖಲಾತಿಗಳನ್ನು ಇಟ್ಟುಕೊಳ್ಳುವಂತೆ ನಗರ ಪೊಲೀಸ್ ಆಯುಕ್ತ ಬಿ. ರಮೇಶ್ ಪ್ರಕಟಣೆ ಮೂಲಕ ಸೂಚಿಸಿದ್ದಾರೆ.

 

andolanait

Recent Posts

ಮುಸುಕಿನ ಜೋಳಕ್ಕೆ ರೋಗ ಬಾಧೆ; ಸಂಕಷ್ಟಕ್ಕೆ ಸಿಲುಕಿದ ರೈತರು

ಮಂಜು ಕೋಟೆ ಕೋಟೆ: ಔಷಧ ಸಿಂಪಡಿಸಿದ ಬಿತ್ತನೆ ಬೀಜ ವಿತರಿಸಿದರೂ ಪ್ರಯೋಜನವಾಗದೆ ಲಕ್ಷಾಂತರ ರೂ. ನಷ್ಟ  ಎಚ್.ಡಿ.ಕೋಟೆ: ಸಾವಿರಾರು ಎಕರೆಯಲ್ಲಿ…

2 mins ago

ಕಾವೇರಿ ನದಿಗಿಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆ

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…

8 hours ago

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

11 hours ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

13 hours ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

13 hours ago