ಜಿಲ್ಲೆಗಳು

ಆನ್‌ಲೈನ್‌ ಮೋಸ; ಸಾವಿರಾರು ರೂಪಾಯಿ ಕಳೆದುಕೊಂಡ ಮೈಸೂರಿನ ಮಹಿಳೆ

ಇತ್ತೀಚೆಗಿನ ದಿನಗಳಲ್ಲಿ ಆನ್‌ಲೈನ್‌ ಅಪ್ಲಿಕೇಶನ್‌ಗಳ ಮೂಲಕ ಹಣ ದೋಚುವ ಕಿಡಿಗೇಡಿಗಳ ಸಂಖ್ಯೆ ಹೆಚ್ಚಾಗಿಬಿಟ್ಟಿದೆ. ಪೊಲೀಸರು ಎಷ್ಟೇ ಎಚ್ಚರಿಸಿದರೂ ಕೆಲವರು ಕಿಡಿಗೇಡಿಗಳ ಹೊಸ ಯೋಜನೆಗಳಿಗೆ ಸಿಲುಕಿ ಸಾರ್ವಜನಿಕರು ಹಣ ಕಳೆದುಕೊಳ್ಳುತ್ತಲೇ ಇದ್ದಾರೆ. ಇದೀಗ ಅಂತಹದ್ದೇ ಒಂದು ಪ್ರಕರಣ ಮೈಸೂರಿನಲ್ಲಿ ದಾಖಲಾಗಿದೆ.

ನಗರದ ಸಿದ್ದಾರ್ಥನಗರದ ನಿವಾಸಿ ಅರ್ಪಿತ ಎಂಬ ಮಹಿಳೆ 98,887 ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ. ಫೆಡ್‌ಎಕ್ಸ್‌ ಪಾರ್ಸೆಲ್‌ನಲ್ಲಿ ನಿಮ್ಮ ಆಧಾರ್‌ ಕಾರ್ಡ್‌ ದುರ್ಬಳಕೆಯಾಗುತ್ತಿದೆ. ನಿಮ್ಮ ಆಧಾರ್‌ ಕಾರ್ಡ್‌ ಬಳಸಿ ಮಾಡಿರುವ ಆರ್ಡರ್‌ನಲ್ಲಿ ಮಾದಕ ವಸ್ತು ಹಾಗೂ ಪಾಸ್‌ಪೋರ್ಟ್‌ಗಳನ್ನು ಸಾಗಿಸಲಾಗುತ್ತಿದೆ ಎಂದು ಕಿಡಿಗೇಡಿ ಕರೆ ಮಾಡಿ ಅರ್ಪಿತ ಬಳಿ ಹೇಳಿದ್ದಾನೆ. ತಾನು ಮುಂಬೈ ಪೊಲೀಸ್‌ ಎಂದೂ ಸಹ ಹೇಳಿಕೊಂಡಿದ್ದಾನೆ.

ಈ ಮಾತನ್ನು ನಂಬಿದ ಅರ್ಪಿತ ಆತ ಕೇಳಿದಂತೆ ಹಣವನ್ನು ಕಳುಹಿಸಿಕೊಟ್ಟಿದ್ದಾರೆ. ಬಳಿಕ ತಾನು ಆತನಿಂದ ಮೋಸ ಹೋದ ವಿಷಯ ತಿಳಿದುಬಂದಿದ್ದು ಮೈಸೂರು ಸೈಬರ್‌ ಪೊಲೀಸ್‌ ಠಾಣೆಗೆ ದೂರನ್ನು ನೀಡಿದ್ದಾರೆ.

andolana

Recent Posts

ಹೊಸ ವರ್ಷಾಚರಣೆ ಹಿನ್ನೆಲೆ ರಾಜ್ಯದ ಈ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ

ಬೆಂಗಳೂರು: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ…

28 mins ago

ಹೊಸ ವರ್ಷಾಚರಣೆ: ಮೈಸೂರಿನಲ್ಲಿ ಅಬಕಾರಿ ಪೊಲೀಸರ ಅಲರ್ಟ್

ಮೈಸೂರು: ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಕ್ರಮ ಮದ್ಯ ಹಾಗೂ ಮಾದಕ ವಸ್ತುಗಳ ಮಾರಾಟ ತಡೆಯಲು…

47 mins ago

ನಂಜನಗೂಡು: ಪೊಲೀಸ್ ಠಾಣೆ ಪಕ್ಕದಲ್ಲೇ ಸರಣಿ ಕಳ್ಳತನ: ಪಟ್ಟಣದಲ್ಲಿ ಆತಂಕ

ನಂಜನಗೂಡು: ಪಟ್ಟಣದಲ್ಲಿ ಸರಣಿ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದ್ದು, ನಗರವಾಸಿಗಳಲ್ಲಿ ಆತಂಕ ಮೂಡಿಸಿದೆ. ನಗರದ ಆರ್.ಪಿ. ರಸ್ತೆಯಲ್ಲಿರುವ ಸುಮಾರು 14…

1 hour ago

ಚಾಮರಾಜನಗರದಲ್ಲಿ ಮತ್ತೊಂದು ಹುಲಿ ಸೆರೆ

ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಕಲ್ಪುರ ಭಾಗದಲ್ಲಿ ಸಂಚಾರ ಮಾಡುತ್ತಿದ್ದ ಮತ್ತೊಂದು ಹುಲಿಯನ್ನು ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಗಿದೆ. ಕಳೆದ…

2 hours ago

ಓದುಗರ ಪತ್ರ: ಇಸ್ಕಾನ್ ಕೃಷ್ಣ ದೇವಾಲಯದ ಬಳಿಯಿದ್ದ ಕಸ ತೆರವು

ಮೈಸೂರಿನ ಜಯನಗರದಲ್ಲಿರುವ ಇಸ್ಕಾನ್ ದೇವಾಲಯದ ಪಕ್ಕದಲ್ಲಿದ್ದ ಕಸದ ರಾಶಿಯನ್ನು ಮೈಸೂರು ಮಹಾನಗರಪಾಲಿಕೆಯಿಂದ ಮಂಗಳವಾರ ತೆರವುಗೊಳಿಸಲಾಗಿದೆ. ಆಂದೋಲನ ದಿನಪತ್ರಿಕೆಯ ಓದುಗರ ಪತ್ರ…

4 hours ago

ಓದುಗರ ಪತ್ರ: ಪ್ರಮುಖ ವೃತ್ತಗಳಲ್ಲಿ ಭಿಕ್ಷುಕರ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ವೃತ್ತಗಳಾದ ಸಿದ್ದಪ್ಪ ಸ್ಕ್ವೇರ್, ಸಂಸ್ಕೃತ ಪಾಠಶಾಲೆ, ವಿ.ವಿ.ಪುರಂ, ತಾತಯ್ಯ ವೃತ್ತ ಮೊದಲಾದ ಕಡೆಗಳಲ್ಲಿ ಭಿಕ್ಷುಕರು, ಅಂಗವಿಕಲರು ಪ್ರತಿನಿತ್ಯ…

4 hours ago