ಇತ್ತೀಚೆಗಿನ ದಿನಗಳಲ್ಲಿ ಆನ್ಲೈನ್ ಅಪ್ಲಿಕೇಶನ್ಗಳ ಮೂಲಕ ಹಣ ದೋಚುವ ಕಿಡಿಗೇಡಿಗಳ ಸಂಖ್ಯೆ ಹೆಚ್ಚಾಗಿಬಿಟ್ಟಿದೆ. ಪೊಲೀಸರು ಎಷ್ಟೇ ಎಚ್ಚರಿಸಿದರೂ ಕೆಲವರು ಕಿಡಿಗೇಡಿಗಳ ಹೊಸ ಯೋಜನೆಗಳಿಗೆ ಸಿಲುಕಿ ಸಾರ್ವಜನಿಕರು ಹಣ ಕಳೆದುಕೊಳ್ಳುತ್ತಲೇ ಇದ್ದಾರೆ. ಇದೀಗ ಅಂತಹದ್ದೇ ಒಂದು ಪ್ರಕರಣ ಮೈಸೂರಿನಲ್ಲಿ ದಾಖಲಾಗಿದೆ.
ನಗರದ ಸಿದ್ದಾರ್ಥನಗರದ ನಿವಾಸಿ ಅರ್ಪಿತ ಎಂಬ ಮಹಿಳೆ 98,887 ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ. ಫೆಡ್ಎಕ್ಸ್ ಪಾರ್ಸೆಲ್ನಲ್ಲಿ ನಿಮ್ಮ ಆಧಾರ್ ಕಾರ್ಡ್ ದುರ್ಬಳಕೆಯಾಗುತ್ತಿದೆ. ನಿಮ್ಮ ಆಧಾರ್ ಕಾರ್ಡ್ ಬಳಸಿ ಮಾಡಿರುವ ಆರ್ಡರ್ನಲ್ಲಿ ಮಾದಕ ವಸ್ತು ಹಾಗೂ ಪಾಸ್ಪೋರ್ಟ್ಗಳನ್ನು ಸಾಗಿಸಲಾಗುತ್ತಿದೆ ಎಂದು ಕಿಡಿಗೇಡಿ ಕರೆ ಮಾಡಿ ಅರ್ಪಿತ ಬಳಿ ಹೇಳಿದ್ದಾನೆ. ತಾನು ಮುಂಬೈ ಪೊಲೀಸ್ ಎಂದೂ ಸಹ ಹೇಳಿಕೊಂಡಿದ್ದಾನೆ.
ಈ ಮಾತನ್ನು ನಂಬಿದ ಅರ್ಪಿತ ಆತ ಕೇಳಿದಂತೆ ಹಣವನ್ನು ಕಳುಹಿಸಿಕೊಟ್ಟಿದ್ದಾರೆ. ಬಳಿಕ ತಾನು ಆತನಿಂದ ಮೋಸ ಹೋದ ವಿಷಯ ತಿಳಿದುಬಂದಿದ್ದು ಮೈಸೂರು ಸೈಬರ್ ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…