ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ 9ದಿನಗಳ ಕಾಲ ನಡೆಯಲಿರುವ ಯುವ ಸಂಭ್ರಮಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ನಟ ಡಾಲಿ ಧನಂಜಯ್ ಅವರು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು, ಕೋವಿಡ್ ಅಲೆಯು ಗಣನೀಯವಾಗಿ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ನಾಡಹಬ್ಬ ದಸರಾವನ್ನು ಅದ್ಧೂರಿಯಾಗಿ ಆಚರಣೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ನೇತೃತ್ವದ ರಾಜ್ಯ ಸರ್ಕಾರ ತೀರ್ಮಾನ ಮಾಡಿದ್ದರಿಂದ ಈ ಬಾರಿಯ ದಸರಾವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ ಎಂದರು.
ಯುವ ಸಂಭ್ರಮಕ್ಕೆ 100ಕ್ಕೂ ಹೆಚ್ಚಿನ ಕಾಲೇಜುಗಳ ವಿದ್ಯಾರ್ಥಿಗಳು ಬಂದಿದ್ದು, ಸಂತೋಷದಿಂದ ಭಾಗವಹಿಸಿ ಪ್ರತಿಭೆಯನ್ನು ತೋರಿಸಿಕೊಳ್ಳಲು ಸುವರ್ಣ ಅವಕಾಶ. ಹೀಗಾಗಿ ಇಂತಹ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ಬಳಿಕ ಡಾಲಿ ಧನಂಜಯ್ ಅವರು ಮಾತನಾಡಿ, ಇಂತಹ ಹಬ್ಬಗಳು ಪ್ರತಿನಿತ್ಯ ಇರಬೇಕು. ಹಬ್ಬಗಳನ್ನು ಜಾತಿ, ಮತ ಮರೆತು ಪ್ರತಿಯೊಬ್ಭರು ಆಚರಿಸಬೇಕು. ಹಬ್ಬಗಳಲ್ಲಿ ಗಲಾಟೆ ಇರಬಾರದು. ನಮ್ಮ ಗುರಿ ಮುಟ್ಟಿ ಸಾಧನೆ ಮಾಡಿದಾಗ ಇಂತಹ ಹಬ್ಬಕ್ಕೆ ಇನ್ನಷ್ಟು ಮೆರಗು ಬರುತ್ತದೆ. ಸಾಧನೆ ಮಾಡಲು ಸಮಯ ತೆಗೆದುಕೊಳ್ಳುತ್ತದೆ. ಇದರಿಂದ ಯಾವುದೇ ಕಾರಣಕ್ಕೆ ಹಿಂದೆ ಸರಿಯಬಾರದು ಎಂದು ಕಿವಿಮಾತು ಹೇಳಿದರು.
ನಾನು ಇದೇ ಗಂಗೋತ್ರಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಯುವ ದಸರಾ ಇಲ್ಲೆಯೇ ನಡೆಯುತ್ತಿತ್ತು. ಆ ಸಂದರ್ಭದಲ್ಲಿ ನಾನೂ ಸಹ ಕಾರ್ಯಕ್ರಮಕ್ಕೆ ಬಂದ ಕುಣಿದಾಡಿದ ನೆನಪುಗಳು ಈಗಲೂ ಸಹ ನೆನಪಿಗೆ ಬರುತ್ತದೆ. ನಮ್ಮ ಮನಸ್ಥಿತಿಯನ್ನು ನಾವೆ ನಿಯಂತ್ರಣ ಮಾಡಿಕೊಳ್ಳಬೇಕು. ಸ್ವಾತಂತ್ರ್ಯವಾಗಿ ಆಲೋಚನೆ ಮಾಡುವ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು ಎಂದರು.
ಇನ್ನು ನಟ ಡಾಲಿ ಧನಂಜಯ್ ವೇದಿಕೆಯತ್ತ ಬರುತ್ತಿದ್ದಂತೆ ಅಭಿಮಾನಿಗಳು ನಟ ಧನಂಜಯ್ ಅವರತ್ತ ಕೈ ಬಿಸಿ ಡಾಲಿ ಧನಂಜಯ್ ಅವರನ್ನು ಬರಮಾಡಿಕೊಂಡರು. ಬಳಿ ಧನಂಜಯ್ ಅವರು ಅಭಿಮಾನಿಗಳ ಆಸೆಯಂತೆ ಟಗರು, ಬಡವರಾಸ್ಕಲ್, ಮಾನ್ಸೂನ್ ರಾಗ ಚಿತ್ರದ ಡೈಲಾಗ್ ಹೊಡೆದು ಅಭಿಮಾನಿಗಳನ್ನು ರಂಜಿಸಿದರು.
ಚಾಮರಾಜನಗರ : ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್ ಅವರು ದೀಢಿರ್ಭೇಟಿ ನೀಡಿ, ವಿವಿಧ…
ಮೈಸೂರು : ಅರಣ್ಯ ಇಲಾಖೆ ಇರಿಸಿದ ಬೋನಿನಲ್ಲಿ ನಾಲ್ಕು ವರ್ಷದ ಗಂಡು ಚಿರತೆ ಸೆರೆಯಾಗಿದೆ. ಸರಗೂರು ತಾಲ್ಲೂಕಿನ ಎನ್.ಬೆಳತ್ತೂರು ಹಳೆ…
ಮೈಸೂರು : ದೇವರಗುಡ್ಡ ಮತ್ತು ಬ್ಯಾಡಗಿ ನಡುವಿನ ಎಲ್ಸಿ ಸಂಖ್ಯೆ 222 ರಲ್ಲಿ ತಾತ್ಕಾಲಿಕ ಗರ್ಡರ್ಗಳನ್ನು ಸೇರಿಸಲು ಮತ್ತು ತೆಗೆದುಹಾಕಲು…
ಮೈಸೂರು : ನಗರದ ಎನ್ಐಇ ಕಾಲೇಜು ಹಿಂಭಾಗದ ಅರಣ್ಯ ಇಲಾಖೆಯ ಶ್ರೀಗಂಧದ ಕೋಠಿ ಆವರಣದಲ್ಲಿ ಕ್ವಾರ್ಟರ್ಸ್ ಕಟ್ಟಡ ನಿರ್ಮಾಣಕ್ಕಾಗಿ ಹತ್ತಾರು…
ಮೈಸೂರು : ಕರ್ನಾಟಕದ ಕಲಾ-ಶಿಲ್ಪ ಪರಂಪರೆಯು ಮತ್ತೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಮೈಸೂರಿನ ಖ್ಯಾತ ಕರಕುಶಲ ಶಿಲ್ಪಿ ಕೈಸರ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಗುರುವಾರದಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ. ಮಾರ್ಚ್.6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ…