ಜಿಲ್ಲೆಗಳು

ಮೈಸೂರು ದಸರಾ : ಯುವ ಸಂಭ್ರಮದಲ್ಲಿ ಡಾಲಿ ಸಡಗರ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ 9‌ದಿನಗಳ ಕಾಲ ನಡೆಯಲಿರುವ ಯುವ ಸಂಭ್ರಮಕ್ಕೆ‌ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ನಟ ಡಾಲಿ ಧನಂಜಯ್ ಅವರು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು, ಕೋವಿಡ್ ಅಲೆಯು ಗಣನೀಯವಾಗಿ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ನಾಡಹಬ್ಬ ದಸರಾವನ್ನು ಅದ್ಧೂರಿಯಾಗಿ ಆಚರಣೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ನೇತೃತ್ವದ ರಾಜ್ಯ ಸರ್ಕಾರ ತೀರ್ಮಾನ ಮಾಡಿದ್ದರಿಂದ ಈ ಬಾರಿಯ ದಸರಾವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ ಎಂದರು.

ಯುವ ಸಂಭ್ರಮಕ್ಕೆ 100ಕ್ಕೂ ಹೆಚ್ಚಿನ ಕಾಲೇಜುಗಳ ವಿದ್ಯಾರ್ಥಿಗಳು ಬಂದಿದ್ದು, ಸಂತೋಷದಿಂದ ಭಾಗವಹಿಸಿ ಪ್ರತಿಭೆಯನ್ನು ತೋರಿಸಿಕೊಳ್ಳಲು ಸುವರ್ಣ ಅವಕಾಶ. ಹೀಗಾಗಿ ಇಂತಹ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ಬಳಿಕ ಡಾಲಿ ಧನಂಜಯ್ ಅವರು ಮಾತನಾಡಿ, ಇಂತಹ ಹಬ್ಬಗಳು ಪ್ರತಿನಿತ್ಯ ಇರಬೇಕು. ಹಬ್ಬಗಳನ್ನು ಜಾತಿ, ಮತ ಮರೆತು ಪ್ರತಿಯೊಬ್ಭರು ಆಚರಿಸಬೇಕು. ಹಬ್ಬಗಳಲ್ಲಿ ಗಲಾಟೆ ಇರಬಾರದು. ನಮ್ಮ ಗುರಿ ಮುಟ್ಟಿ ಸಾಧನೆ ಮಾಡಿದಾಗ ಇಂತಹ ಹಬ್ಬಕ್ಕೆ ಇನ್ನಷ್ಟು ಮೆರಗು ಬರುತ್ತದೆ. ಸಾಧನೆ ಮಾಡಲು ಸಮಯ ತೆಗೆದುಕೊಳ್ಳುತ್ತದೆ. ಇದರಿಂದ ಯಾವುದೇ ಕಾರಣಕ್ಕೆ ಹಿಂದೆ ಸರಿಯಬಾರದು ಎಂದು ಕಿವಿಮಾತು ಹೇಳಿದರು.

ನಾನು ಇದೇ ಗಂಗೋತ್ರಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಯುವ ದಸರಾ ಇಲ್ಲೆಯೇ ನಡೆಯುತ್ತಿತ್ತು. ಆ ಸಂದರ್ಭದಲ್ಲಿ ನಾನೂ ಸಹ ಕಾರ್ಯಕ್ರಮಕ್ಕೆ ಬಂದ ಕುಣಿದಾಡಿದ ನೆನಪುಗಳು ಈಗಲೂ ಸಹ ನೆನಪಿಗೆ ಬರುತ್ತದೆ. ನಮ್ಮ ಮನಸ್ಥಿತಿಯನ್ನು ನಾವೆ ನಿಯಂತ್ರಣ ಮಾಡಿಕೊಳ್ಳಬೇಕು. ಸ್ವಾತಂತ್ರ್ಯವಾಗಿ ಆಲೋಚನೆ ಮಾಡುವ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು ಎಂದರು.

ಇನ್ನು ನಟ ಡಾಲಿ ಧನಂಜಯ್ ವೇದಿಕೆಯತ್ತ ಬರುತ್ತಿದ್ದಂತೆ ಅಭಿಮಾನಿಗಳು ನಟ ಧನಂಜಯ್ ಅವರತ್ತ ಕೈ ಬಿಸಿ ಡಾಲಿ ಧನಂಜಯ್ ಅವರನ್ನು ಬರಮಾಡಿಕೊಂಡರು. ಬಳಿ ಧನಂಜಯ್ ಅವರು ಅಭಿಮಾನಿಗಳ ಆಸೆಯಂತೆ ಟಗರು, ಬಡವರಾಸ್ಕಲ್, ಮಾನ್ಸೂನ್ ರಾಗ ಚಿತ್ರದ ಡೈಲಾಗ್ ಹೊಡೆದು ಅಭಿಮಾನಿಗಳನ್ನು ರಂಜಿಸಿದರು.

andolanait

Recent Posts

ಮೋಟಾರ್ ವಾಹನ ಸೆಸ್ ಕೈಬಿಟ್ಟ ಮೈಸೂರು ಮಹಾನಗರ ಪಾಲಿಕೆ

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…

6 mins ago

ದಿಢೀರ್‌ ಕುಸಿದುಬಿದ್ದ ಲೋಕಾಯುಕ್ತ ನಿ.ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…

60 mins ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

2 hours ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

3 hours ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

3 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

3 hours ago