ಜಿಲ್ಲೆಗಳು

ಮೈಸೂರು ದಸರಾ : ಯುವ ಸಂಭ್ರಮದಲ್ಲಿ ಡಾಲಿ ಸಡಗರ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ 9‌ದಿನಗಳ ಕಾಲ ನಡೆಯಲಿರುವ ಯುವ ಸಂಭ್ರಮಕ್ಕೆ‌ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ನಟ ಡಾಲಿ ಧನಂಜಯ್ ಅವರು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು, ಕೋವಿಡ್ ಅಲೆಯು ಗಣನೀಯವಾಗಿ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ನಾಡಹಬ್ಬ ದಸರಾವನ್ನು ಅದ್ಧೂರಿಯಾಗಿ ಆಚರಣೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ನೇತೃತ್ವದ ರಾಜ್ಯ ಸರ್ಕಾರ ತೀರ್ಮಾನ ಮಾಡಿದ್ದರಿಂದ ಈ ಬಾರಿಯ ದಸರಾವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ ಎಂದರು.

ಯುವ ಸಂಭ್ರಮಕ್ಕೆ 100ಕ್ಕೂ ಹೆಚ್ಚಿನ ಕಾಲೇಜುಗಳ ವಿದ್ಯಾರ್ಥಿಗಳು ಬಂದಿದ್ದು, ಸಂತೋಷದಿಂದ ಭಾಗವಹಿಸಿ ಪ್ರತಿಭೆಯನ್ನು ತೋರಿಸಿಕೊಳ್ಳಲು ಸುವರ್ಣ ಅವಕಾಶ. ಹೀಗಾಗಿ ಇಂತಹ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ಬಳಿಕ ಡಾಲಿ ಧನಂಜಯ್ ಅವರು ಮಾತನಾಡಿ, ಇಂತಹ ಹಬ್ಬಗಳು ಪ್ರತಿನಿತ್ಯ ಇರಬೇಕು. ಹಬ್ಬಗಳನ್ನು ಜಾತಿ, ಮತ ಮರೆತು ಪ್ರತಿಯೊಬ್ಭರು ಆಚರಿಸಬೇಕು. ಹಬ್ಬಗಳಲ್ಲಿ ಗಲಾಟೆ ಇರಬಾರದು. ನಮ್ಮ ಗುರಿ ಮುಟ್ಟಿ ಸಾಧನೆ ಮಾಡಿದಾಗ ಇಂತಹ ಹಬ್ಬಕ್ಕೆ ಇನ್ನಷ್ಟು ಮೆರಗು ಬರುತ್ತದೆ. ಸಾಧನೆ ಮಾಡಲು ಸಮಯ ತೆಗೆದುಕೊಳ್ಳುತ್ತದೆ. ಇದರಿಂದ ಯಾವುದೇ ಕಾರಣಕ್ಕೆ ಹಿಂದೆ ಸರಿಯಬಾರದು ಎಂದು ಕಿವಿಮಾತು ಹೇಳಿದರು.

ನಾನು ಇದೇ ಗಂಗೋತ್ರಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಯುವ ದಸರಾ ಇಲ್ಲೆಯೇ ನಡೆಯುತ್ತಿತ್ತು. ಆ ಸಂದರ್ಭದಲ್ಲಿ ನಾನೂ ಸಹ ಕಾರ್ಯಕ್ರಮಕ್ಕೆ ಬಂದ ಕುಣಿದಾಡಿದ ನೆನಪುಗಳು ಈಗಲೂ ಸಹ ನೆನಪಿಗೆ ಬರುತ್ತದೆ. ನಮ್ಮ ಮನಸ್ಥಿತಿಯನ್ನು ನಾವೆ ನಿಯಂತ್ರಣ ಮಾಡಿಕೊಳ್ಳಬೇಕು. ಸ್ವಾತಂತ್ರ್ಯವಾಗಿ ಆಲೋಚನೆ ಮಾಡುವ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು ಎಂದರು.

ಇನ್ನು ನಟ ಡಾಲಿ ಧನಂಜಯ್ ವೇದಿಕೆಯತ್ತ ಬರುತ್ತಿದ್ದಂತೆ ಅಭಿಮಾನಿಗಳು ನಟ ಧನಂಜಯ್ ಅವರತ್ತ ಕೈ ಬಿಸಿ ಡಾಲಿ ಧನಂಜಯ್ ಅವರನ್ನು ಬರಮಾಡಿಕೊಂಡರು. ಬಳಿ ಧನಂಜಯ್ ಅವರು ಅಭಿಮಾನಿಗಳ ಆಸೆಯಂತೆ ಟಗರು, ಬಡವರಾಸ್ಕಲ್, ಮಾನ್ಸೂನ್ ರಾಗ ಚಿತ್ರದ ಡೈಲಾಗ್ ಹೊಡೆದು ಅಭಿಮಾನಿಗಳನ್ನು ರಂಜಿಸಿದರು.

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

20 mins ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

22 mins ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

25 mins ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

3 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

3 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

3 hours ago