ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ 9ದಿನಗಳ ಕಾಲ ನಡೆಯಲಿರುವ ಯುವ ಸಂಭ್ರಮಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ನಟ ಡಾಲಿ ಧನಂಜಯ್ ಅವರು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು, ಕೋವಿಡ್ ಅಲೆಯು ಗಣನೀಯವಾಗಿ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ನಾಡಹಬ್ಬ ದಸರಾವನ್ನು ಅದ್ಧೂರಿಯಾಗಿ ಆಚರಣೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ನೇತೃತ್ವದ ರಾಜ್ಯ ಸರ್ಕಾರ ತೀರ್ಮಾನ ಮಾಡಿದ್ದರಿಂದ ಈ ಬಾರಿಯ ದಸರಾವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ ಎಂದರು.
ಯುವ ಸಂಭ್ರಮಕ್ಕೆ 100ಕ್ಕೂ ಹೆಚ್ಚಿನ ಕಾಲೇಜುಗಳ ವಿದ್ಯಾರ್ಥಿಗಳು ಬಂದಿದ್ದು, ಸಂತೋಷದಿಂದ ಭಾಗವಹಿಸಿ ಪ್ರತಿಭೆಯನ್ನು ತೋರಿಸಿಕೊಳ್ಳಲು ಸುವರ್ಣ ಅವಕಾಶ. ಹೀಗಾಗಿ ಇಂತಹ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ಬಳಿಕ ಡಾಲಿ ಧನಂಜಯ್ ಅವರು ಮಾತನಾಡಿ, ಇಂತಹ ಹಬ್ಬಗಳು ಪ್ರತಿನಿತ್ಯ ಇರಬೇಕು. ಹಬ್ಬಗಳನ್ನು ಜಾತಿ, ಮತ ಮರೆತು ಪ್ರತಿಯೊಬ್ಭರು ಆಚರಿಸಬೇಕು. ಹಬ್ಬಗಳಲ್ಲಿ ಗಲಾಟೆ ಇರಬಾರದು. ನಮ್ಮ ಗುರಿ ಮುಟ್ಟಿ ಸಾಧನೆ ಮಾಡಿದಾಗ ಇಂತಹ ಹಬ್ಬಕ್ಕೆ ಇನ್ನಷ್ಟು ಮೆರಗು ಬರುತ್ತದೆ. ಸಾಧನೆ ಮಾಡಲು ಸಮಯ ತೆಗೆದುಕೊಳ್ಳುತ್ತದೆ. ಇದರಿಂದ ಯಾವುದೇ ಕಾರಣಕ್ಕೆ ಹಿಂದೆ ಸರಿಯಬಾರದು ಎಂದು ಕಿವಿಮಾತು ಹೇಳಿದರು.
ನಾನು ಇದೇ ಗಂಗೋತ್ರಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಯುವ ದಸರಾ ಇಲ್ಲೆಯೇ ನಡೆಯುತ್ತಿತ್ತು. ಆ ಸಂದರ್ಭದಲ್ಲಿ ನಾನೂ ಸಹ ಕಾರ್ಯಕ್ರಮಕ್ಕೆ ಬಂದ ಕುಣಿದಾಡಿದ ನೆನಪುಗಳು ಈಗಲೂ ಸಹ ನೆನಪಿಗೆ ಬರುತ್ತದೆ. ನಮ್ಮ ಮನಸ್ಥಿತಿಯನ್ನು ನಾವೆ ನಿಯಂತ್ರಣ ಮಾಡಿಕೊಳ್ಳಬೇಕು. ಸ್ವಾತಂತ್ರ್ಯವಾಗಿ ಆಲೋಚನೆ ಮಾಡುವ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು ಎಂದರು.
ಇನ್ನು ನಟ ಡಾಲಿ ಧನಂಜಯ್ ವೇದಿಕೆಯತ್ತ ಬರುತ್ತಿದ್ದಂತೆ ಅಭಿಮಾನಿಗಳು ನಟ ಧನಂಜಯ್ ಅವರತ್ತ ಕೈ ಬಿಸಿ ಡಾಲಿ ಧನಂಜಯ್ ಅವರನ್ನು ಬರಮಾಡಿಕೊಂಡರು. ಬಳಿ ಧನಂಜಯ್ ಅವರು ಅಭಿಮಾನಿಗಳ ಆಸೆಯಂತೆ ಟಗರು, ಬಡವರಾಸ್ಕಲ್, ಮಾನ್ಸೂನ್ ರಾಗ ಚಿತ್ರದ ಡೈಲಾಗ್ ಹೊಡೆದು ಅಭಿಮಾನಿಗಳನ್ನು ರಂಜಿಸಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…