ಜಿಲ್ಲೆಗಳು

ಪಿಇಟಿ ಐಟಿಎಫ್ ಅಂತಾರಾಷ್ಟ್ರೀಯ ಟೆನಿಸ್ ಟೂರ್ನಿ: ಫ್ರೀ-ಕ್ವಾರ್ಟರ್ ಫೈನಲ್‌ಗೆ ಮೈಸೂರಿನ ಮನೀಷ್

ಮಂಡ್ಯ: ನಗರದ ಪಿಇಟಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಿಇಟಿ ಐಟಿಎಫ್ ಮಂಡ್ಯ ಓಪನ್ ಅಂತಾರಾಷ್ಟ್ರೀಯ ಪುರುಷರ ಟೆನಿಸ್ ಟೂರ್ನಿಯಲ್ಲಿ ಮೈಸೂರಿನ ಮನೀಷ್ ಗಣೇಶ್ ಫ್ರೀ-ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದ್ದಾರೆ.
ಮಂಗಳವಾರ ನಡೆದ ಪಂದ್ಯದಲ್ಲಿ ಚಂಡೀಘಡ್‌ನ ನೀರಜ್ ಯಶ್‌ಪೌಲ್‌ರನ್ನು 6-1, 6-1 ನೇರ ಸೆಟ್‌ಗಳಿಂದ ಸುಲಭವಾಗಿ ಮಣಿಸಿ ಪ್ರೀ-ಕ್ವಾರ್ಟರ್ ಫೈನಲ್‌ಗೆ ಅರ್ಹತೆ ಪಡೆದುಕೊಂಡರು. ಮೈಸೂರು ಹುಡುಗನ ಈ ಗೆಲುವು ಟೆನಿಸ್ ಪ್ರೇಮಿಗಳನ್ನು ಪುಳಕಗೊಳಿಸಿದೆ.

23 ವರ್ಷದ ನೀರಜ್ ಮೊದಲ ಸೆಟ್‌ನ ಆಟದಲ್ಲೇ ಸರ್ವಿಸ್ ಉಳಿಸಿಕೊಳ್ಳಲು ಹೆಣಗಾಡಿದರು. ಇನ್ನೊಂದೆಡೆ ಸ್ಥಳೀಯರ ಬೆಂಬಲ, ಹರ್ಷೋದ್ಗಾರಗಳ ನಡುವೆ ಆಟವಾರಂಭಿಸಿದ ಮನೀಷ್ ಬಿರುಸಿನ ಹಾಗೂ ಅಷ್ಟೇ ಎಚ್ಚರಿಕೆಯ ಆಟವಾಡಿದರು. ಉತ್ಕೃಷ್ಟ ಸರ್ವಿಸ್ ಪ್ರದರ್ಶಿಸಿದ 22 ವರ್ಷದ ಮನೀಷ್ ಪರಿಣಾಮಕಾರಿ ಹೊಡೆತಗಳಿಂದ ಎದುರಾಳಿಯ ರಕ್ಷಣೆ ಬೇಧಿಸಿದರು.

ನೀರಜ್‌ಗೆ ಒಂದಿಷ್ಟೂ ಅವಕಾಶ ನೀಡದ ಮನೀಷ್ ಮೊದಲ ಸೆಟ್‌ನ್ನು 6-1 ಅಂತರದಲ್ಲಿ ತಮ್ಮದಾಗಿಸಿಕೊಂಡರು. ಎರಡನೇ ಸೆಟ್‌ನ ಮೊದಲ ಆಟದಲ್ಲಿ ತಮ್ಮ ಸರ್ವಿಸ್ ಉಳಿಸಿಕೊಂಡ ಮನೀಷ್, ಎರಡನೇಯದರಲ್ಲಿ ಎದುರಾಳಿಯ ಸರ್ವಿಸ್ ಮುರಿದು 2-0 ಲೀಡ್‌ಗೆ ಮುನ್ನುಗ್ಗಿದರಾದರೂ ಮೂರನೇ ಸೆಟ್‌ನ ಆಟದಲ್ಲಿಯೇ ತಮ್ಮ ಸರ್ವಿಸ್ ಕಳೆದುಕೊಂಡರು. ಆದರೆ, ಮುಂದಿನ ನಾಲ್ಕೂ ಆಟಗಳನ್ನು ಜಯಿಸಿದ ಮನೀಷ್ 67 ನಿಮಿಷಗಳಲ್ಲಿ ಪಂದ್ಯವನ್ನು ತಮ್ಮದಾಗಿಸಿಕೊಂಡರು.

ಮತ್ತೊಂದು ಪಂದ್ಯದಲ್ಲಿ ಉತ್ತರ ಪ್ರದೇಶದ ಸಿದ್ಧಾರ್ಥ ವಿಶ್ವಕರ್ಮ ಅವರು 6-3, 6-1 ನೇರ ಸೆಟ್‌ಗಳಿಂದ ಆದಿಲ್ ಕಲ್ಯಾಣಪುರ ಅವರನ್ನು ಪರಾಭವಗೊಳಿಸಿ ಅಂತಿಮ ಹದಿನಾರರ ಸುತ್ತು ಪ್ರವೇಶಿಸಿದರು.

ನಿರಾಸೆಗೊಂಡ ಪ್ರಜ್ವಲ್‌ದೇವ್

ಭಾರತ ಟೆನಿಸ್ ತಂಡಕ್ಕೆ ಸೇರ್ಪಡೆಯಾಗಿ ಸುದ್ದಿಯಲ್ಲಿರುವ ಮೈಸೂರಿನ ಮತ್ತೊಬ್ಬ ಆಟಗಾರ ಎಸ್.ಡಿ.ಪ್ರಜ್ವಲ್‌ದೇವ್‌ ಮಂಗಳವಾರದ ಪಂದ್ಯವನ್ನು ಅರ್ಧಕ್ಕೆ ಮೊಟಕುಗೊಳಿಸಿ ನಿರಾಸೆಗೊಂಡರು. ಭಾರತದವರೇ ಆದ ನಿತಿನ್ ಕುಮಾರ ಸಿನ್ಹಾ ಅವರೊಂದಿಗೆ ಪುರುಷರ ಡಬಲ್ಸ್‌ನ ಮೊದಲ ಪಂದ್ಯವನ್ನಾಡಿದ ಪ್ರಜ್ವಲ್‌ದೇವ್, ಕೊರಿಯಾದ ವೊಬಿನ್ ಶಿನ್ ಹಾಗೂ ಭಾರತದ ಕರಣಸಿಂಗ್ ಜೋಡಿಯೆದುರು ಮೊದಲ ಸೆಟ್ಟಿನಲ್ಲಿ 5-4 ಆಟಗಳಿಂದ ಮುಂದಿದ್ದರು. ಅದೇ ಸಂದರ್ಭದಲ್ಲಿ ನಿತಿನ್ ಕುಮಾರ ಸಿನ್ಹಾ ಹೊಟ್ಟೆನೋವಿನಿಂದ ಬಳಲಿದ್ದರಿಂದ ಎದುರಾಳಿಗಳಿಗೆ ಪಂದ್ಯ ಬಿಟ್ಟು ಕೊಡಬೇಕಾಯಿತು.
ಪುರುಷರ ಸಿಂಗಲ್ಸ್‌ನಲ್ಲಿ 8ನೇ ಸೀಡ್ ಪಡೆದಿರುವ ಪ್ರಜ್ವಲ್ ಬುಧವಾರ ತಮ್ಮ ಮೊದಲ ಸುತ್ತಿನಲ್ಲಿ ಕೊರಿಯಾದ ಯನ್‌ಸೆಯೊಕ್ ಜಂಗ್ ಅವರನ್ನು ಎದುರಿಸಲಿದ್ದಾರೆ.

andolana

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

2 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

8 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

8 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

9 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

9 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

9 hours ago