ಹನೂರು: ವಿಧಾನಸಭಾ ಕ್ಷೇತ್ರದ ಮಿಣ್ಯಂ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟಿದ್ದ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ್ದ ಶಾಸಕ ಆರ್ ನರೇಂದ್ರ 2ಅಡಿ ನೀರಿನಲ್ಲಿ ತಮ್ಮ ಚಪ್ಪಲಿಯನ್ನು ಕೈಯಲ್ಲಿಡಿದುಕೊಂಡು ಹಳ್ಳ ದಾಟುತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
ಕೊಳ್ಳೇಗಾಲ ಶಾಸಕ ಎನ್ ಮಹೇಶ್ ರವರು ಸುವರ್ಣಾವತಿ ಹೊಳೆ ಉಕ್ಕಿ ಹರಿದ ಪರಿಣಾಮ ಮಾಂಬಳ್ಳಿ ಗ್ರಾಮದ ಕೆಲವು ಬಡಾವಣೆಗಳಲ್ಲಿ ನೀರು ತುಂಬಿಕೊಂಡಿತ್ತು. ಇದನ್ನು ಪರಿಶೀಲನೆ ನಡೆಸಲು ತೆರಳಿದ್ದ ವೇಳೆ ರಸ್ತೆಯ ಮೇಲೆ ಕೇವಲ ಅರ್ಧ ಅಡಿ ನೀರಿದ್ದರೂ ಸಹ ತೆಪ್ಪದಲ್ಲಿ ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಆಕ್ರೋಶಕ್ಕೆ ಒಳಗಾಗಿದ್ದಾರೆ.
ಇತ್ತ ಹನೂರು ಶಾಸಕ ಆರ್ ನರೇಂದ್ರ ಮಂಗಳವಾರ ಸಂಜೆ ಸಿಡಿಲು ಬಡಿದು ಮೃತಪಟ್ಟಿದ್ದ ಕುಟುಂಬಕ್ಕೆ ಸಾಂತ್ವನ ತಿಳಿಸಲು ಮಿಣ್ಯಂ ಗ್ರಾಮಕ್ಕೆ ತೆರಳಿದ್ದ ವೇಳೆ ಹಳ್ಳದಲ್ಲಿ 2ಅಡಿಗೂ ಹೆಚ್ಚು ನೀರು ಹರಿಯುತ್ತಿತ್ತು .
ಈ ಹಿನ್ನೆಲೆ 2ಅಡಿ ನೀರಿನಲ್ಲಿ ತಮ್ಮ ಚಪ್ಪಲಿಯನ್ನು ಕೈಯಲ್ಲಿ ಹಿಡಿದುಕೊಂಡು ಹೋಗುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…
ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…
ಗುಣಮಟ್ಟದ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಸರ್ಕಾರ ನೀಡುತ್ತಿರುವ ಸಹಾಯಧನವನ್ನು ೨೦೨೬ನೇ ಸಾಲಿನಿಂದ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ ಎನ್ನುವುದು…
ಎಸ್.ಎ. ಹುಸೇನ್ ಶೀಘ್ರದಲ್ಲೇ ಹೊಸ ಪೈಪ್ಲೈನ್ ಮೂಲಕ ನೀರು ಸರಬರಾಜು ೪೭.೪೧ ಕೋಟಿ ರೂ. ವೆಚ್ಚದ ೨ ಹಂತಗಳ ಕಾಮಗಾರಿ…
ಸಫಾರಿ ಪುನಾರಂಭಕ್ಕೆ ಸರ್ಕಾರದ ಆದೇಶ ಹೊರ ಬಿದ್ದ ಬಳಿಕ ರೈತ ಸಂಘಟನೆಗಳ ಆಕ್ರೋಶ ಭುಗಿಲೆದಿದ್ದೆ. ಅಧಿಕಾರಿಗಳು, ಸರ್ಕಾರದ ವಿರುದ್ಧ ರೈತ…
ಮಂಜು ಕೋಟೆ ಆದೇಶ ಬಂದ ತಕ್ಷಣ ಸಫಾರಿ ಪುನರ್ ಆರಂಭಿಸಲಾಗುವುದು: ಅರಣ್ಯಾಧಿಕಾರಿ ಎಚ್.ಡಿ.ಕೋಟೆ: ರಾಜ್ಯ ಸರ್ಕಾರವು ಸಫಾರಿ ಆರಂಭಕ್ಕೆ ಆದೇಶ…