ಜಿಲ್ಲೆಗಳು

ಅರ್ಧ ಅಡಿ ನೀರಿನಲ್ಲಿ ಶಾಸಕ ಎನ್‌ ಮಹೇಶ್‌ “ತೆಪ್ಪೋತ್ಸವ”

ಹನೂರು: ವಿಧಾನಸಭಾ ಕ್ಷೇತ್ರದ ಮಿಣ್ಯಂ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟಿದ್ದ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ್ದ ಶಾಸಕ ಆರ್ ನರೇಂದ್ರ 2ಅಡಿ ನೀರಿನಲ್ಲಿ ತಮ್ಮ ಚಪ್ಪಲಿಯನ್ನು ಕೈಯಲ್ಲಿಡಿದುಕೊಂಡು ಹಳ್ಳ ದಾಟುತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

ಕೊಳ್ಳೇಗಾಲ ಶಾಸಕ ಎನ್ ಮಹೇಶ್ ರವರು ಸುವರ್ಣಾವತಿ ಹೊಳೆ ಉಕ್ಕಿ ಹರಿದ ಪರಿಣಾಮ ಮಾಂಬಳ್ಳಿ ಗ್ರಾಮದ ಕೆಲವು ಬಡಾವಣೆಗಳಲ್ಲಿ ನೀರು ತುಂಬಿಕೊಂಡಿತ್ತು. ಇದನ್ನು ಪರಿಶೀಲನೆ ನಡೆಸಲು ತೆರಳಿದ್ದ ವೇಳೆ ರಸ್ತೆಯ ಮೇಲೆ ಕೇವಲ ಅರ್ಧ ಅಡಿ ನೀರಿದ್ದರೂ ಸಹ ತೆಪ್ಪದಲ್ಲಿ ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಆಕ್ರೋಶಕ್ಕೆ ಒಳಗಾಗಿದ್ದಾರೆ.

ಇತ್ತ ಹನೂರು ಶಾಸಕ ಆರ್ ನರೇಂದ್ರ ಮಂಗಳವಾರ ಸಂಜೆ ಸಿಡಿಲು ಬಡಿದು ಮೃತಪಟ್ಟಿದ್ದ ಕುಟುಂಬಕ್ಕೆ ಸಾಂತ್ವನ ತಿಳಿಸಲು ಮಿಣ್ಯಂ ಗ್ರಾಮಕ್ಕೆ ತೆರಳಿದ್ದ ವೇಳೆ ಹಳ್ಳದಲ್ಲಿ 2ಅಡಿಗೂ ಹೆಚ್ಚು ನೀರು ಹರಿಯುತ್ತಿತ್ತು .

ಈ ಹಿನ್ನೆಲೆ 2ಅಡಿ ನೀರಿನಲ್ಲಿ ತಮ್ಮ ಚಪ್ಪಲಿಯನ್ನು ಕೈಯಲ್ಲಿ ಹಿಡಿದುಕೊಂಡು ಹೋಗುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

andolanait

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

25 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

31 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

40 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago