ಹನೂರು: ವಿಧಾನಸಭಾ ಕ್ಷೇತ್ರದ ಮಿಣ್ಯಂ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟಿದ್ದ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ್ದ ಶಾಸಕ ಆರ್ ನರೇಂದ್ರ 2ಅಡಿ ನೀರಿನಲ್ಲಿ ತಮ್ಮ ಚಪ್ಪಲಿಯನ್ನು ಕೈಯಲ್ಲಿಡಿದುಕೊಂಡು ಹಳ್ಳ ದಾಟುತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
ಕೊಳ್ಳೇಗಾಲ ಶಾಸಕ ಎನ್ ಮಹೇಶ್ ರವರು ಸುವರ್ಣಾವತಿ ಹೊಳೆ ಉಕ್ಕಿ ಹರಿದ ಪರಿಣಾಮ ಮಾಂಬಳ್ಳಿ ಗ್ರಾಮದ ಕೆಲವು ಬಡಾವಣೆಗಳಲ್ಲಿ ನೀರು ತುಂಬಿಕೊಂಡಿತ್ತು. ಇದನ್ನು ಪರಿಶೀಲನೆ ನಡೆಸಲು ತೆರಳಿದ್ದ ವೇಳೆ ರಸ್ತೆಯ ಮೇಲೆ ಕೇವಲ ಅರ್ಧ ಅಡಿ ನೀರಿದ್ದರೂ ಸಹ ತೆಪ್ಪದಲ್ಲಿ ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಆಕ್ರೋಶಕ್ಕೆ ಒಳಗಾಗಿದ್ದಾರೆ.
ಇತ್ತ ಹನೂರು ಶಾಸಕ ಆರ್ ನರೇಂದ್ರ ಮಂಗಳವಾರ ಸಂಜೆ ಸಿಡಿಲು ಬಡಿದು ಮೃತಪಟ್ಟಿದ್ದ ಕುಟುಂಬಕ್ಕೆ ಸಾಂತ್ವನ ತಿಳಿಸಲು ಮಿಣ್ಯಂ ಗ್ರಾಮಕ್ಕೆ ತೆರಳಿದ್ದ ವೇಳೆ ಹಳ್ಳದಲ್ಲಿ 2ಅಡಿಗೂ ಹೆಚ್ಚು ನೀರು ಹರಿಯುತ್ತಿತ್ತು .
ಈ ಹಿನ್ನೆಲೆ 2ಅಡಿ ನೀರಿನಲ್ಲಿ ತಮ್ಮ ಚಪ್ಪಲಿಯನ್ನು ಕೈಯಲ್ಲಿ ಹಿಡಿದುಕೊಂಡು ಹೋಗುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…