ಜಿಲ್ಲೆಗಳು

ನಾಡು,ನುಡಿ ಉಳಿಸುವಲ್ಲಿ ಆಟೋ ಚಾಲಕರ ಪಾತ್ರ ಮಹತ್ವದ್ದು: ರುದ್ರೇಶ್

ಚಾಮರಾಜನಗರ: ಕನ್ನಡ ನಾಡು,ನುಡಿ ಬೆಳವಣಿಗೆಯಲ್ಲಿ ಆಟೋ ಚಾಲಕರ ಪಾತ್ರ ಅಪಾರವಾದದ್ದು ಎಂದು  ಕೆ ಐ ಆರ್ ಡಿ ಎಲ್ ಅಧ್ಯಕ್ಷ ಎಂ.ರುದ್ರೇಶ್ ಹೇಳಿದರು.

ನಗರದ ಭುವನೇಶ್ವರಿ ವೃತ್ತದಲ್ಲಿ ಜೈ ಭುವನೇಶ್ವರಿ ಆಟೋ ಚಾಲಕರ ಸಂಘ ವತಿಯಿಂದ ನಡೆದ  ಕನ್ನಡ ರಾಜ್ಯೋತ್ಸವ ಹಾಗೂ ಆಟೋ ಚಾಲಕರಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಭುವನೇಶ್ವರಿ ಭಾವಚಿತ್ರ ಪುಷ್ಷಾರ್ಚನೆ ಮಾಡಿ ಮಾತನಾಡಿದರು.

ನಾನು ಸಹ ಆಟೋಚಾಲಕ ವೃತ್ತಯಿಂದ ರಾಜಕಾರಣಕ್ಕೆ  ಬಂದಿದ್ದೇನೆ  ನಿಮ್ಮಲ್ಲರ ಸಂಕಷ್ಟಗಳು ನನಗೂ ಅರಿವಿದೆ. ನಿಜವಾದ ಕನ್ನಡ ಪ್ರೇಮಿಗಳು ಆಟೋ ಚಾಲಕರಾಗಿದ್ದು,  ತಮ್ಮ  ಆಟೋಗಳಲ್ಲಿ  ಕನ್ನಡ ಬರಹ, ಕನ್ನಡ ಭಾವುಟ, ಕನ್ನಡ ಗೀತೆಗಳನ್ನು ಹಾಕುವ ಮೂಲಕ  ಕನ್ನಡ ಪ್ರೇಮ ಮೂಡಿಸುವ ಕೆಲಸವನ್ನು ನಿಸ್ವಾರ್ಥತೆಯಿಂದ ಮಾಡುತ್ತಿದ್ದಾರೆ.   ಕನ್ನಡ ರಾಜ್ಯೋತ್ಸವದ ಶುಭಾಶಯ  ಹೇಳಿದರು.

ಆಟೋಚಾಲಕರಿಗೆ ರುದ್ರೇಶ್ ಸಮವಸ್ತ್ರ ವಿತರಣೆ ಮಾಡಿದರು ಆಟೋ ಚಾಲಕರು ಭಾರೀಗಾತ್ರದ ಹೂವಿನ ಹಾರ ಕ್ರೇನ್ ಮೂಲಕ ರುದ್ರೇಶ್ ಅವರಿಗೆ ಹಾಕಿ ಅಭಿಮಾನ ಮೆರೆದರು.

ಕನ್ನಡ ರಾಜ್ಯೋತ್ಸವ ಅಂಗವಾಗಿ ನಡೆದ ಆಟೋಗಳ ಮೆರವಣಿಗೆಗೆ  ಸ್ವತಹ ರುದ್ರೇಶ್ ಆಟೋ ಓಡಿಸುವ ಮೂಲಕ ಚಾಲನೆ ನೀಡಿದರು.

andolanait

Recent Posts

ಹುಣಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…

3 hours ago

ಹನೂರು| ಕೆಸರಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆ ಫಲಿಸದೇ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…

3 hours ago

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…

4 hours ago

24 ಗಂಟೆಯ ಒಳಗಡೆ ಉತ್ತರಿಸಿ: ಮಲ್ಲಿಕಾರ್ಜುನ ಖರ್ಗೆಗೆ ಆಯೋಗ ನೋಟಿಸ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…

4 hours ago

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…

6 hours ago

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್‌ ಆದೇಶ

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…

7 hours ago