ಚಾಮರಾಜನಗರ: ಕನ್ನಡ ನಾಡು,ನುಡಿ ಬೆಳವಣಿಗೆಯಲ್ಲಿ ಆಟೋ ಚಾಲಕರ ಪಾತ್ರ ಅಪಾರವಾದದ್ದು ಎಂದು ಕೆ ಐ ಆರ್ ಡಿ ಎಲ್ ಅಧ್ಯಕ್ಷ ಎಂ.ರುದ್ರೇಶ್ ಹೇಳಿದರು.
ನಗರದ ಭುವನೇಶ್ವರಿ ವೃತ್ತದಲ್ಲಿ ಜೈ ಭುವನೇಶ್ವರಿ ಆಟೋ ಚಾಲಕರ ಸಂಘ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಹಾಗೂ ಆಟೋ ಚಾಲಕರಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಭುವನೇಶ್ವರಿ ಭಾವಚಿತ್ರ ಪುಷ್ಷಾರ್ಚನೆ ಮಾಡಿ ಮಾತನಾಡಿದರು.
ನಾನು ಸಹ ಆಟೋಚಾಲಕ ವೃತ್ತಯಿಂದ ರಾಜಕಾರಣಕ್ಕೆ ಬಂದಿದ್ದೇನೆ ನಿಮ್ಮಲ್ಲರ ಸಂಕಷ್ಟಗಳು ನನಗೂ ಅರಿವಿದೆ. ನಿಜವಾದ ಕನ್ನಡ ಪ್ರೇಮಿಗಳು ಆಟೋ ಚಾಲಕರಾಗಿದ್ದು, ತಮ್ಮ ಆಟೋಗಳಲ್ಲಿ ಕನ್ನಡ ಬರಹ, ಕನ್ನಡ ಭಾವುಟ, ಕನ್ನಡ ಗೀತೆಗಳನ್ನು ಹಾಕುವ ಮೂಲಕ ಕನ್ನಡ ಪ್ರೇಮ ಮೂಡಿಸುವ ಕೆಲಸವನ್ನು ನಿಸ್ವಾರ್ಥತೆಯಿಂದ ಮಾಡುತ್ತಿದ್ದಾರೆ. ಕನ್ನಡ ರಾಜ್ಯೋತ್ಸವದ ಶುಭಾಶಯ ಹೇಳಿದರು.
ಆಟೋಚಾಲಕರಿಗೆ ರುದ್ರೇಶ್ ಸಮವಸ್ತ್ರ ವಿತರಣೆ ಮಾಡಿದರು ಆಟೋ ಚಾಲಕರು ಭಾರೀಗಾತ್ರದ ಹೂವಿನ ಹಾರ ಕ್ರೇನ್ ಮೂಲಕ ರುದ್ರೇಶ್ ಅವರಿಗೆ ಹಾಕಿ ಅಭಿಮಾನ ಮೆರೆದರು.
ಕನ್ನಡ ರಾಜ್ಯೋತ್ಸವ ಅಂಗವಾಗಿ ನಡೆದ ಆಟೋಗಳ ಮೆರವಣಿಗೆಗೆ ಸ್ವತಹ ರುದ್ರೇಶ್ ಆಟೋ ಓಡಿಸುವ ಮೂಲಕ ಚಾಲನೆ ನೀಡಿದರು.
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…
ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…
ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…
ಕನ್ನಡದ ಖಾಸಗಿ ಚಾನೆಲ್ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…
ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…
ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…