ಚಾಮರಾಜನಗರ: ಕನ್ನಡ ನಾಡು,ನುಡಿ ಬೆಳವಣಿಗೆಯಲ್ಲಿ ಆಟೋ ಚಾಲಕರ ಪಾತ್ರ ಅಪಾರವಾದದ್ದು ಎಂದು ಕೆ ಐ ಆರ್ ಡಿ ಎಲ್ ಅಧ್ಯಕ್ಷ ಎಂ.ರುದ್ರೇಶ್ ಹೇಳಿದರು.
ನಗರದ ಭುವನೇಶ್ವರಿ ವೃತ್ತದಲ್ಲಿ ಜೈ ಭುವನೇಶ್ವರಿ ಆಟೋ ಚಾಲಕರ ಸಂಘ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಹಾಗೂ ಆಟೋ ಚಾಲಕರಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಭುವನೇಶ್ವರಿ ಭಾವಚಿತ್ರ ಪುಷ್ಷಾರ್ಚನೆ ಮಾಡಿ ಮಾತನಾಡಿದರು.
ನಾನು ಸಹ ಆಟೋಚಾಲಕ ವೃತ್ತಯಿಂದ ರಾಜಕಾರಣಕ್ಕೆ ಬಂದಿದ್ದೇನೆ ನಿಮ್ಮಲ್ಲರ ಸಂಕಷ್ಟಗಳು ನನಗೂ ಅರಿವಿದೆ. ನಿಜವಾದ ಕನ್ನಡ ಪ್ರೇಮಿಗಳು ಆಟೋ ಚಾಲಕರಾಗಿದ್ದು, ತಮ್ಮ ಆಟೋಗಳಲ್ಲಿ ಕನ್ನಡ ಬರಹ, ಕನ್ನಡ ಭಾವುಟ, ಕನ್ನಡ ಗೀತೆಗಳನ್ನು ಹಾಕುವ ಮೂಲಕ ಕನ್ನಡ ಪ್ರೇಮ ಮೂಡಿಸುವ ಕೆಲಸವನ್ನು ನಿಸ್ವಾರ್ಥತೆಯಿಂದ ಮಾಡುತ್ತಿದ್ದಾರೆ. ಕನ್ನಡ ರಾಜ್ಯೋತ್ಸವದ ಶುಭಾಶಯ ಹೇಳಿದರು.
ಆಟೋಚಾಲಕರಿಗೆ ರುದ್ರೇಶ್ ಸಮವಸ್ತ್ರ ವಿತರಣೆ ಮಾಡಿದರು ಆಟೋ ಚಾಲಕರು ಭಾರೀಗಾತ್ರದ ಹೂವಿನ ಹಾರ ಕ್ರೇನ್ ಮೂಲಕ ರುದ್ರೇಶ್ ಅವರಿಗೆ ಹಾಕಿ ಅಭಿಮಾನ ಮೆರೆದರು.
ಕನ್ನಡ ರಾಜ್ಯೋತ್ಸವ ಅಂಗವಾಗಿ ನಡೆದ ಆಟೋಗಳ ಮೆರವಣಿಗೆಗೆ ಸ್ವತಹ ರುದ್ರೇಶ್ ಆಟೋ ಓಡಿಸುವ ಮೂಲಕ ಚಾಲನೆ ನೀಡಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…