ಚಾಮರಾಜನಗರ: ಕನ್ನಡ ನಾಡು,ನುಡಿ ಬೆಳವಣಿಗೆಯಲ್ಲಿ ಆಟೋ ಚಾಲಕರ ಪಾತ್ರ ಅಪಾರವಾದದ್ದು ಎಂದು ಕೆ ಐ ಆರ್ ಡಿ ಎಲ್ ಅಧ್ಯಕ್ಷ ಎಂ.ರುದ್ರೇಶ್ ಹೇಳಿದರು.
ನಗರದ ಭುವನೇಶ್ವರಿ ವೃತ್ತದಲ್ಲಿ ಜೈ ಭುವನೇಶ್ವರಿ ಆಟೋ ಚಾಲಕರ ಸಂಘ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಹಾಗೂ ಆಟೋ ಚಾಲಕರಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಭುವನೇಶ್ವರಿ ಭಾವಚಿತ್ರ ಪುಷ್ಷಾರ್ಚನೆ ಮಾಡಿ ಮಾತನಾಡಿದರು.
ನಾನು ಸಹ ಆಟೋಚಾಲಕ ವೃತ್ತಯಿಂದ ರಾಜಕಾರಣಕ್ಕೆ ಬಂದಿದ್ದೇನೆ ನಿಮ್ಮಲ್ಲರ ಸಂಕಷ್ಟಗಳು ನನಗೂ ಅರಿವಿದೆ. ನಿಜವಾದ ಕನ್ನಡ ಪ್ರೇಮಿಗಳು ಆಟೋ ಚಾಲಕರಾಗಿದ್ದು, ತಮ್ಮ ಆಟೋಗಳಲ್ಲಿ ಕನ್ನಡ ಬರಹ, ಕನ್ನಡ ಭಾವುಟ, ಕನ್ನಡ ಗೀತೆಗಳನ್ನು ಹಾಕುವ ಮೂಲಕ ಕನ್ನಡ ಪ್ರೇಮ ಮೂಡಿಸುವ ಕೆಲಸವನ್ನು ನಿಸ್ವಾರ್ಥತೆಯಿಂದ ಮಾಡುತ್ತಿದ್ದಾರೆ. ಕನ್ನಡ ರಾಜ್ಯೋತ್ಸವದ ಶುಭಾಶಯ ಹೇಳಿದರು.
ಆಟೋಚಾಲಕರಿಗೆ ರುದ್ರೇಶ್ ಸಮವಸ್ತ್ರ ವಿತರಣೆ ಮಾಡಿದರು ಆಟೋ ಚಾಲಕರು ಭಾರೀಗಾತ್ರದ ಹೂವಿನ ಹಾರ ಕ್ರೇನ್ ಮೂಲಕ ರುದ್ರೇಶ್ ಅವರಿಗೆ ಹಾಕಿ ಅಭಿಮಾನ ಮೆರೆದರು.
ಕನ್ನಡ ರಾಜ್ಯೋತ್ಸವ ಅಂಗವಾಗಿ ನಡೆದ ಆಟೋಗಳ ಮೆರವಣಿಗೆಗೆ ಸ್ವತಹ ರುದ್ರೇಶ್ ಆಟೋ ಓಡಿಸುವ ಮೂಲಕ ಚಾಲನೆ ನೀಡಿದರು.
ಪಂಜುಗಂಗೊಳ್ಳಿ ಅವರ ವಾರದ ಅಂಕಣ ೧೯೯೬ರಲ್ಲಿ ‘ಪಾಲಕ್ ನೀತಿ ಪರಿವಾರ್’ ಎಂಬ ಸರ್ಕಾರೇತರ ಸಂಸ್ಥೆಯಡಿ ‘ಈ ಮನೆ’ ಆರಂಭ ಪುಣೆಯ…
ಪುನೀತ್ ಮಡಿಕೇರಿ ಡಿಜಿಟಲ್ ಮ್ಯೂಸಿಯಂ ಕನಸು ಸಾಕಾರಕ್ಕೆ ಕೇಂದ್ರ ಸರ್ಕಾರದ ನೆರವು ಕೊಡಗಿನ ಹೆಮ್ಮೆಯ ಸಂಕೇತವಾದ ಮಡಿಕೇರಿ ಅರಮನೆಗೆ ಕೇಂದ್ರ ಸರ್ಕಾರದಿಂದ…
ಮಹೇಂದ್ರ ಹಸಗೂಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಎಂದು ಸಿಎಂ ಘೋಷಣೆ ಮಾಡಿದರೂ ಹಣ ಪಡೆದು ಪಾಸ್ ವಿತರಣೆಗೆ ಆಕ್ರೋಶ ಗುಂಡ್ಲುಪೇಟೆ:…
ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರಿನ ಅಗ್ರಹಾರದ ರಾಮಾನುಜ ರಸ್ತೆಯ ೧೩ನೇ ಕ್ರಾಸ್ ನಿವಾಸಿಗಳ ಪರದಾಟ ಮೈಸೂರು: ಮನೆಯ ಬಾಗಿಲು ತೆರೆದರೆ ಮೂಗಿಗ…
ಹನಗೋಡು: ಹಾಡಹಗಲೇ ಮನೆ ಬೀಗ ಒಡೆದು ಚಿನ್ನಾಭರಣ ಮತ್ತು ನಗದು ಕಳವು ಮಾಡಿರುವ ಘಟನೆ ನಡೆದಿದೆ. ಹನಗೋಡು ಹೋಬಳಿಯ ಕಡೇಮನುಗನಹಳ್ಳಿ…