ಚಾಮರಾಜನಗರ: ಕನ್ನಡ ನಾಡು,ನುಡಿ ಬೆಳವಣಿಗೆಯಲ್ಲಿ ಆಟೋ ಚಾಲಕರ ಪಾತ್ರ ಅಪಾರವಾದದ್ದು ಎಂದು ಕೆ ಐ ಆರ್ ಡಿ ಎಲ್ ಅಧ್ಯಕ್ಷ ಎಂ.ರುದ್ರೇಶ್ ಹೇಳಿದರು.
ನಗರದ ಭುವನೇಶ್ವರಿ ವೃತ್ತದಲ್ಲಿ ಜೈ ಭುವನೇಶ್ವರಿ ಆಟೋ ಚಾಲಕರ ಸಂಘ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಹಾಗೂ ಆಟೋ ಚಾಲಕರಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಭುವನೇಶ್ವರಿ ಭಾವಚಿತ್ರ ಪುಷ್ಷಾರ್ಚನೆ ಮಾಡಿ ಮಾತನಾಡಿದರು.
ನಾನು ಸಹ ಆಟೋಚಾಲಕ ವೃತ್ತಯಿಂದ ರಾಜಕಾರಣಕ್ಕೆ ಬಂದಿದ್ದೇನೆ ನಿಮ್ಮಲ್ಲರ ಸಂಕಷ್ಟಗಳು ನನಗೂ ಅರಿವಿದೆ. ನಿಜವಾದ ಕನ್ನಡ ಪ್ರೇಮಿಗಳು ಆಟೋ ಚಾಲಕರಾಗಿದ್ದು, ತಮ್ಮ ಆಟೋಗಳಲ್ಲಿ ಕನ್ನಡ ಬರಹ, ಕನ್ನಡ ಭಾವುಟ, ಕನ್ನಡ ಗೀತೆಗಳನ್ನು ಹಾಕುವ ಮೂಲಕ ಕನ್ನಡ ಪ್ರೇಮ ಮೂಡಿಸುವ ಕೆಲಸವನ್ನು ನಿಸ್ವಾರ್ಥತೆಯಿಂದ ಮಾಡುತ್ತಿದ್ದಾರೆ. ಕನ್ನಡ ರಾಜ್ಯೋತ್ಸವದ ಶುಭಾಶಯ ಹೇಳಿದರು.
ಆಟೋಚಾಲಕರಿಗೆ ರುದ್ರೇಶ್ ಸಮವಸ್ತ್ರ ವಿತರಣೆ ಮಾಡಿದರು ಆಟೋ ಚಾಲಕರು ಭಾರೀಗಾತ್ರದ ಹೂವಿನ ಹಾರ ಕ್ರೇನ್ ಮೂಲಕ ರುದ್ರೇಶ್ ಅವರಿಗೆ ಹಾಕಿ ಅಭಿಮಾನ ಮೆರೆದರು.
ಕನ್ನಡ ರಾಜ್ಯೋತ್ಸವ ಅಂಗವಾಗಿ ನಡೆದ ಆಟೋಗಳ ಮೆರವಣಿಗೆಗೆ ಸ್ವತಹ ರುದ್ರೇಶ್ ಆಟೋ ಓಡಿಸುವ ಮೂಲಕ ಚಾಲನೆ ನೀಡಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…