ನಾಗಮಂಗಲ: ರೈತರಿಗೆ ಆರ್ಥಿಕವಾಗಿ ಸಂಕಷ್ಟವುಂಟು ಮಾಡುವ ಕಾಲು ಬಾಯಿ ರೋಗದಿಂದ ರಾಸುಗಳನ್ನು ರಕ್ಷಿಸಲು ಉಚಿತವಾಗಿ ಲಸಿಕೆ ಹಾಕಿಸಿಕೊಳ್ಳುವಂತೆ ಪಶುಸಂಗೋಪನ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್ ರೈತರಲ್ಲಿ ಮನವಿ ಮಾಡಿದ್ದಾರೆ.
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಮಂಡ್ಯ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಸಂಯುಕ್ತವಾಗಿ ರಾಷ್ಟ್ರೀಯ ಕಾಲುಬಾಯಿ ರೋಗ ನಿಯಂತ್ರಣ ಕಾರ್ಯಕ್ರಮವನ್ನು ೩ನೇ ಸುತ್ತಿನಲ್ಲಿ ನ.೭ ರಿಂದ ಡಿ.೭ ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಕಾಲುಬಾಯಿ ರೋಗದಿಂದ ಜಾನುವಾರುಗಳಿಗೆ ಹೇಗೆ ಮಾರಕ ?
ಕಾಲುಬಾಯಿ ರೋಗವು ಹಸು, ಎಮ್ಮೆ, ಹಂದಿ ಮುಂತಾದ ಸೀಳುಗೊರಸುಗಳುಳ್ಳ ಜಾನುವಾರುಗಳಿಗೆ ಮಾರಕವಾಗಿದ್ದು, ರೋಗದಿಂದ ಜಾನುವಾರುಗಳು ಗುಣಮುಖವಾದರೂ ಗರ್ಭಕಟ್ಟುವಿಕೆಯಲ್ಲಿ ವಿಳಂಬ, ಸಾಮರ್ಥ್ಯ ಮತ್ತು ಇಳುವರಿಯಲ್ಲಿ ಇಳಿಮುಖವಾಗುತ್ತದೆ. ಕಾಲುಬಾಯಿ ರೋಗವು ಒಂದು ವೈರಾಣುವಾಗಿದ್ದು ಲಸಿಕೆ ಹಾಕಿಸುವುದೊಂದೆ ಇದಕ್ಕಿರುವ ಪರಿಹಾರ. ರೈತರು ಈ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಪ್ರತಿ ೬ ತಿಂಗಳಿಗೊಮ್ಮೆ ಜಾನುವಾರುಗಳಿಗೆ ಲಸಿಕೆ ಹಾಕಿಸುವಂತೆ ಅವರು ಕೋರಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…